ಶುಭ ಸುದ್ದಿ, ಇನ್ನು ಮುಂದೆ ಸರ್ಕಾರಿ ಪಿಯುಸಿ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ನೀಡಲು ಸರಕಾರ ಚಿಂತನೆ
(ನ್ಯೂಸ್ ಕಡಬ) newskadaba.com, ನ.06 ಬೆಂಗಳೂರು : ಇದುವರೆಗೂ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಧ್ಯಾಹ್ನದ ನೀಡಲಾಗುತ್ತಿದೆ. ಒಂದರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡುವ ಮೂಲಕ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿಗೆ ಸರ್ಕಾರ ಈ ಯೋಜನೆ ರೂಪಿಸಿದೆ. ಇದೀಗ ಸರ್ಕಾರ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ಪಿಯುಸಿ ವಿದ್ಯಾರ್ಥಿಗಳಿಗೂ ಕೂಡ ಮಧ್ಯಾಹ್ನದ ಬಿಸಿ ಊಟ ನೀಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಸರಕಾರಿ ಪಿಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಸರಕಾರ ಚಿಂತನೆ ನಡೆಸಿದೆ. […]

