theft

ಕಾಣಿಕೆ ಡಬ್ಬಿಗೆ ಕನ್ನ- ನಗದು ಕಳವು

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಆ. 30. ಶ್ರೀ ನಾರಾಯಣ ಗುರು ಮಂದಿರದ ಕಿಟಿಕಿಯ ಮರದ ಮೂರು ದಳಿಗಳನ್ನು ಮುರಿದು ಒಳಗೆ ಪ್ರವೇಶಿಸಿದ ಕಳ್ಳರು ಮಂದಿರದ ಕಾಣಿಕೆ ಡಬ್ಬಿಯನ್ನು ಒಡೆದು ಅದರಲ್ಲಿದ್ದ ಸುಮಾರು 15,000 ರೂ. ನಗದನ್ನು ಕಳವುಗೈದಿರುವ ಘಟನೆ ಮುದರಂಗಡಿ ಎಂಬಲ್ಲಿ ನಡೆದಿದೆ. ಮಂಗಳವಾರದಂದು ಬೆಳಗ್ಗೆ ಅರ್ಚಕ ಆನಂದ ಪೂಜಾರಿ ಮಂದಿರಕ್ಕೆ ಬಂದಾಗ ಕಳ್ಳತನ ನಡೆದಿರುವ ವಿಚಾರ ಬೆಳಕಿಗೆ ಬಂದಿದೆ. ಈ ಕುರಿತು ಪಡುಬಿದ್ರಿ ಪೊಲೀಸರಿಗೆ ದೂರು ನೀಡಲಾಗಿದೆ.

ಕಾಣಿಕೆ ಡಬ್ಬಿಗೆ ಕನ್ನ- ನಗದು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಎಳನೀರು ಕಳ್ಳತನ – ವಾಹನದ ನಂಬರ್ ಪ್ಲೇಟ್ ಗೆ ಮಸಿ ಬಳಿದು ಕೃತ್ಯವೆಸಗಿದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 18. ರಾತ್ರೋರಾತ್ರಿ ಟಾಟಾ ಏಸ್ ವಾಹನದಲ್ಲಿ ಬಂದ ಖದೀಮರು ರಸ್ತೆ ಬದಿಯಲ್ಲಿಟ್ಟಿದ್ದ ಬರೋಬ್ಬರಿ 1,500 ಎಳನೀರನ್ನು ಕದ್ದೊಯ್ದಿರುವ ಘಟನೆ ಜಯನಗರ ರಾಷ್ಟ್ರೀಯ ವಿದ್ಯಾಲಯ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ. ಕಳ್ಳರು ಕೃತ್ಯಕ್ಕೆ ಬಳಸಿದ್ದ ವಾಹನದ ನಂಬರ್ ಪ್ಲೇಟ್‌ಗೆ ಮಸಿ ಬಳಿದಿದ್ದರು ಎನ್ನಲಾಗಿದೆ. ಈ ಬಗ್ಗೆ ಜಯನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಎಳನೀರು ಕಳ್ಳತನ – ವಾಹನದ ನಂಬರ್ ಪ್ಲೇಟ್ ಗೆ ಮಸಿ ಬಳಿದು ಕೃತ್ಯವೆಸಗಿದ ಕಿಡಿಗೇಡಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬ್ರಿಡ್ಜ್ ಕಾಮಗಾರಿಗೆ ತಂದಿಡಲಾಗಿದ್ದ ರಾಡ್ ಕಳವು – ದೂರು ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಆ. 08. ಬ್ರಿಡ್ಜ್ ಕೆಲಸಕ್ಕೆಂದು ತಂದಿಡಲಾಗಿದ್ದ ರಾಡ್, ಪ್ಲೇಟ್ಸ್ ಹಾಗೂ ಇತರ ಸಾಮಾಗ್ರಿಗಳನ್ನು ಕಳವುಗೈದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಬ್ರಿಡ್ಜ್ ಕೆಲಸಕ್ಕೆಂದು ತಂದಿಡಲಾಗಿದ್ದ ರಾಡುಗಳು, ಪ್ಲೇಟ್ಸ್ ಹಾಗೂ ಇತರ ಸಾಮಾಗ್ರಿಗಳು ಸೋಮವಾರದಂದು ಕಾಣೆಯಾಗಿದ್ದವು. ಅವುಗಳನ್ನು ಹುಡುಕಾಡಿದಾಗ ಮಾಣಿ ಗ್ರಾಮದ ಪಟ್ಲಕೋಡಿ ಎಂಬಲ್ಲಿ ಈಚರ್ ವಾಹನದಲ್ಲಿ ವ್ಯಕ್ತಿಯೋರ್ವ ತುಂಬಿಸಿಕೊಂಡಿರುವುದು ಕಂಡು ಬಂದಿದೆ. ನಂದ ಕುಮಾರ್ ರನ್ನು ನೋಡಿದ ಆರೋಪಿ ವಾಹನವನ್ನು ಅಲ್ಲೇ ಬಿಟ್ಟು

ಬ್ರಿಡ್ಜ್ ಕಾಮಗಾರಿಗೆ ತಂದಿಡಲಾಗಿದ್ದ ರಾಡ್ ಕಳವು – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಮೂರು ಅಂಗಡಿಗಳಿಂದ ಕಳ್ಳತನ – ದೃಶ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 04. ಮೂರು ಅಂಗಡಿಗೆ ನುಗ್ಗಿದ ಕಳ್ಳನೋರ್ವ, ನಗದು ಹಾಗೂ ಸಾಮಗ್ರಿಗಳನ್ನು ಕಳವುಗೈದಿರುವ ಘಟನೆ ಇಲ್ಲಿನ ತೊಕ್ಕೊಟ್ಟು ಎಂಬಲ್ಲಿ ನಡೆದಿದ್ದು, ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ತೊಕ್ಕೊಟ್ಟು ಒಳಪೇಟೆಯಲ್ಲಿರುವ ಹರಿಶ್ಚಂದ್ರ ಶೆಟ್ಟಿ ಎಂಬವರಿಗೆ ಸೇರಿದ ಲಕ್ಷ್ಮೀ ಕ್ಯಾಂಟೀನ್, ಹ್ಯಾರೀಸ್ ಎಂಬವರಿಗೆ ಸೇರಿದ ಸ್ಟೀಲ್ ಸಾಮಗ್ರಿಗಳ ಮಾರಾಟ ಮಳಿಗೆ ಹಾಗೂ ಮೋಹನ್ ಎಂಬವರಿಗೆ ಸೇರಿದ ಎಸ್.ಎಸ್ ಕಮ್ಯುನಿಕೇಷನ್ಸ್ ಮೊಬೈಲ್ ಅಂಗಡಿಗಳ ಹೆಂಚು ತೆಗೆದು ಒಳನುಗ್ಗಿದ ಕಳ್ಳ ಕ್ಯಾಷ್ ನಲ್ಲಿದ್ದ ನಗದು ಹಾಗೂ ಕೆಲವು

ಮೂರು ಅಂಗಡಿಗಳಿಂದ ಕಳ್ಳತನ – ದೃಶ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರಾವಳಿ
Theft, crime, Robbery

ಮೋದಿ ಸ್ಕೀಮ್ ಹೆಸರಿನಲ್ಲಿ ಚಿನ್ನ ದರೋಡೆ – ಕಡಬ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಆ. 02. ಮೋದಿ ಸ್ಕೀಮ್ ನವರು ಎಂದು ನಂಬಿಸಿ ಮನೆಗೆ ಬಂದ ಅಪರಿಚಿತನೋರ್ವ ಚಿನ್ನದ ಸರ ಎಗರಿಸಿ ಪರಾರಿಯಾದ ಕುರಿತು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಕಾಣಿಯೂರು ಸಮೀಪದ ದೋಳ್ಪಾಡಿ ಗ್ರಾಮದ ಪುಳಿಮರಡ್ಕ ನಿವಾಸಿ ಲಲಿತಾ ಎಂಬವರು, ಮನೆಯಿಂದ ಕಾಣಿಯೂರಿನತ್ತ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಬೈಕ್‌ ನಿಲ್ಲಿಸಿ ಪರಿಚಯದವನಂತೆ ನಟಿಸಿ ಮಹಿಳೆಯನ್ನು ಮಾತನಾಡಿಸಿದ್ದು, ‘ನಾವು ಬಡವರಿಗೆ ಬ್ಯಾಂಕಿನ ಕಡೆಯಿಂದ ಹಣ ಡಬಲ್ ಮಾಡಿಕೊಡುವ ಮೋದಿ

ಮೋದಿ ಸ್ಕೀಮ್ ಹೆಸರಿನಲ್ಲಿ ಚಿನ್ನ ದರೋಡೆ – ಕಡಬ ಠಾಣೆಯಲ್ಲಿ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ರೈಲ್ವೇ ಹಳಿಯ ಗುಜರಿಯನ್ನು ಕದ್ದು ಸಾಗಾಟ – ಕಡಬದ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಆ. 02. ಯುವಕರಿಬ್ಬರು ರೈಲ್ವೇ ಹಳಿಯ ಸಾಮಾಗ್ರಿಗಳನ್ನು ಕಳವು ನಡೆಸಿ ಗುಜರಿಗೆ ಮಾರಾಟ ಮಾಡಲು ಕೊಂಡೊಯ್ಯುತ್ತಿದ್ದ ವೇಳೆ ಕಡಬ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ಮರ್ಧಾಳದಿಂದ ವರದಿಯಾಗಿದೆ. ಆರೋಪಿಗಳನ್ನು ರಫೀಕ್ ಹಾಗೂ ಸಿದ್ದೀಕ್ ಎಂದು ಗುರುತಿಸಲಾಗಿದೆ. ಇವರು ಪುತ್ತೂರು ಭಾಗದಿಂದ ರೈಲ್ವೇ ಸಾಮಾಗ್ರಿಗಳನ್ನು ಕಳವು ಮಾಡಿ 800 ಕಾರಿನಲ್ಲಿ ತರುತ್ತಿದ್ದ ವೇಳೆ ಗಸ್ತು ನಿರತ ಕಡಬ ಎಸ್.ಐ. ಆಂಜನೇಯ ರೆಡ್ಡಿ ಹಾಗೂ ಸಿಬ್ಬಂದಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಬಳಿಕ ಅವರನ್ನು ವಶಕ್ಕೆ ಪಡೆದುಕೊಂಡು

ರೈಲ್ವೇ ಹಳಿಯ ಗುಜರಿಯನ್ನು ಕದ್ದು ಸಾಗಾಟ – ಕಡಬದ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪೊಲೀಸರ ಹೆಸರಿನಲ್ಲಿ ಬ್ಲಾಕ್ ಮೇಲ್ – ವಿದ್ಯಾರ್ಥಿಯಿಂದ ಹಣ ವಸೂಲಿ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜು. 26. ಪೊಲೀಸರ ತನಿಖೆ ವಿಚಾರಣೆ ಶೈಲಿಯನ್ನು ಸರಿಯಾಗಿ ತಿಳಿದುಕೊಂಡು, ಇದನ್ನೇ ಬಂಡವಾಳವಾಗಿಟ್ಟುಕೊಂಡು ಆರೋಪಿಗಳು ಪ್ಯಾರಾಮೆಡಿಕಲ್​ ವಿದ್ಯಾರ್ಥಿಯೋರ್ವನಿಂದ ಹಣ ಸುಲಿಗೆ ಮಾಡಿರುವ ಘಟನೆ ವರದಿಯಾಗಿದೆ. ಆರೋಪಿಗಳು ತಾವು ಪೊಲೀಸರು, ಸ್ಟೇಷನ್ ಗೆ ನಡೆಯಿರಿ ಎಂದು ಹೇಳಿ ವಿದ್ಯಾರ್ಥಿಯನ್ನು ಕಾರು ಹತ್ತಿಸಿ, ಬರೋಬ್ಬರಿ 1 ಲಕ್ಷದ 70 ಸಾವಿರ ಅಕೌಂಟ್​ಗೆ ಹಾಕಿಸಿಕೊಂಡಿದ್ದಾರೆ ಎಂದು ಪೊಲೀಸ್​ ವಿಚಾರಣೆ ವೇಳೆ ಬಯಲಿಗೆ ಬಂದಿದೆ. ನಂತರ ಆರೋಪಿಗಳು ವಿಚಾರ ಬಾಯಿಬಿಟ್ಟರೆ ಕೊಲೆ ಮಾಡುವುದಾಗಿ ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದು,

ಪೊಲೀಸರ ಹೆಸರಿನಲ್ಲಿ ಬ್ಲಾಕ್ ಮೇಲ್ – ವಿದ್ಯಾರ್ಥಿಯಿಂದ ಹಣ ವಸೂಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗಮನ ಬೇರೆಡೆ ಸೆಳೆದು ಬ್ಯಾಗ್ ಕಳವುಗೈದ ಖದೀಮರು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.25. ಗಮನ ಬೇರೆ ಕಡೆಗೆ ಸೆಳೆದು ಕಾರಿನಲ್ಲಿದ್ದ ಬ್ಯಾಗ್‌ ಕಳವು ಮಾಡಿದ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಮಹಿಳೆಯೋರ್ವರು ಪಿವಿಎಸ್‌ ಬಳಿಯ ಲಕ್ಷ್ಮೀನಾರಾಯಣ ದೇವಸ್ಥಾನದ ಗೇಟಿನ ಮುಂಭಾಗದಲ್ಲಿ ಕಾರು ನಿಲ್ಲಿಸಿ ಕಾರು ಸರ್ವೀಸ್‌ ಸೆಂಟರ್‌ ಗೆ ಕರೆ ಮಾಡಿ ಮಾತನಾಡುತ್ತಿದ್ದರು ಎನ್ನಲಾಗಿದೆ. ಆಗ ಅಪರಿಚಿತ ವ್ಯಕ್ತಿಯೋರ್ವ ಬಂದು 10 ರೂ. ನೋಟನ್ನು ಅವರ ಕಾರಿನ ಎಡಭಾಗದಲ್ಲಿ ಹಾಕಿ ನಿಮ್ಮ ಹಣ ಬಿದ್ದಿದೆ ಎಂದು ಹೇಳಿದ್ದು, ಮಹಿಳೆ ಅದನ್ನು ಹೆಕ್ಕುತ್ತಿದ್ದಾಗ ಅಪರಿಚಿತ ವ್ಯಕ್ತಿಯು ಕಾರಿನ ಬಲಬದಿಯಲ್ಲಿಯೂ ನೋಟು

ಗಮನ ಬೇರೆಡೆ ಸೆಳೆದು ಬ್ಯಾಗ್ ಕಳವುಗೈದ ಖದೀಮರು Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ದಿನಸಿ, ಡ್ರೆಸ್ ಮತ್ತು ಫ್ಯಾನ್ಸಿ ಅಂಗಡಿಯಿಂದ ಕಳ್ಳತನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 24. ದಿನಸಿ, ಡ್ರೆಸ್ ಮತ್ತು ಫ್ಯಾನ್ಸಿ ಅಂಗಡಿಗೆ ನುಗ್ಗಿದ ಕಳ್ಳರು ನಗದು ಸಹಿತ ಸಾವಿರಾರು ರೂ. ಮೌಲ್ಯದ ಇತರ ಸ್ವತ್ತುಗಳನ್ನು ಕಳವು ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಬೆಂಜನಪದವು ಎಂಬಲ್ಲಿ  ನಡೆದಿದೆ. ಬಂಟ್ವಾಳದ ಅಲ್ಬರ್ಟ್ ಫೆರ್ನಾಂಡೀಸ್ ಬಿಲ್ಡಿಂಗ್ ನಲ್ಲಿದ್ದ ನಮಿತಾ ಎಂಬವರ ರಾಜೇಶ್ವರಿ ದಿನಸಿ ಅಂಗಡಿ ಮತ್ತು ರಾಜರಾಜೇಶ್ವರಿ ಡ್ರೆಸ್ ಮತ್ತು ಫ್ಯಾನ್ಸಿ ಅಂಗಡಿಯಲ್ಲಿ ಜು. 22 ರಂದು ಕಳ್ಳತನ ನಡೆದಿದ್ದು, ಜು. 23 ರ ಅದಿತ್ಯವಾರ ಬೆಳಿಗ್ಗೆ 6

ದಿನಸಿ, ಡ್ರೆಸ್ ಮತ್ತು ಫ್ಯಾನ್ಸಿ ಅಂಗಡಿಯಿಂದ ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಎಟಿಎಂನಲ್ಲಿದ್ದ 15 ಲಕ್ಷ ರೂ. ಎಗರಿಸಿದ ಖರ್ತನಾಕ್ ಕಳ್ಳರು

(ನ್ಯೂಸ್ ಕಡಬ)newskadaba.com ಕೋಲಾರ, ಜು.24. ಎಟಿಎಂ ನಲ್ಲಿ ಹಣ ಕಳ್ಳತನವಾಗಿರುವುದು ಬಂಗಾರಪೇಟೆ ತಾಲ್ಲೂಕು ಹಂಚಾಳ ಗೇಟ್ ಕೆನರಾ ಬ್ಯಾಂಕ್ ನಲ್ಲಿ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗ್ಯಾಸ್ ಕಟ್ಟರ್ ಬಳಸಿಕೊಂಡು ಎಟಿಎಂನಲ್ಲಿದ್ದ ಹಣ ಕಳ್ಳತನ ಮಾಡಲಾಗಿದ್ದು, ಕೆನರಾ ಬ್ಯಾಂಕ್ ನಲ್ಲಿದ್ದ ಸುಮಾರು 15 ಲಕ್ಷ ರೂಪಾಯಿ ಕಳ್ಳತನವಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ರಮೇಶ್ ಹಾಗೂ ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಕಂಡು ಬಂದಿದೆ.

ಎಟಿಎಂನಲ್ಲಿದ್ದ 15 ಲಕ್ಷ ರೂ. ಎಗರಿಸಿದ ಖರ್ತನಾಕ್ ಕಳ್ಳರು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top