theft

Theft, crime, Robbery

ಕಾಸರಗೋಡು: ಒಂದೇ ದಿನ ಎರಡು ಮನೆಗೆ ಕನ್ನ ➤ 40 ಪವನ್ ಚಿನ್ನಾಭರಣ ಸಹಿತ ನಗದು ಕಳವು.!

(ನ್ಯೂಸ್ ಕಡಬ) newskadaba.com  ಕಾಸರಗೋಡು, ಜ.14. ಎರಡು ಮನೆಗಳಿಗೆ ನುಗ್ಗಿದ ಕಳ್ಳರು ಸುಮಾರು 40 ಪವನ್ ಚಿನ್ನಾಭರಣ ಮತ್ತು 40 ಸಾವಿರ ರೂ. ನಗದು ಕಳವು ಗೈದ ಘಟನೆ ಕುಂಬಳೆ ಸಮೀಪದ ನಾಯ್ಕಾಪು ವಿನಲ್ಲಿ ನಡೆದಿದೆ. ಬ್ಯಾಂಕ್ ಸಿಬ್ಬಂದಿ ವಾಸುದೇವ ರಾವ್ ಮನೆಗೆ ನುಗ್ಗಿ 35 ಪವನ್ ಚಿನ್ನಾಭರಣ ಮತ್ತು 15 ಸಾವಿರ ರೂ. ನಗದು ಹಾಗೂ ಮೋಹನ್ ದಾಸ್ ಎಂಬವರ ಮನೆಯಿಂದ ಮೂರೂವರೆ ಪವನ್ ಚಿನ್ನಾಭರಣ ಮತ್ತು 25 ಸಾವಿರ ರೂ. ನಗದು ಕಳವು ಮಾಡಲಾಗಿದೆ. […]

ಕಾಸರಗೋಡು: ಒಂದೇ ದಿನ ಎರಡು ಮನೆಗೆ ಕನ್ನ ➤ 40 ಪವನ್ ಚಿನ್ನಾಭರಣ ಸಹಿತ ನಗದು ಕಳವು.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೈ-ಕಾಲು ಕಟ್ಟಿ ಹಾಕಿ ದರೋಡೆ ➤ 6 ಮಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 11. ಮನೆಯಲ್ಲಿ ಒಂಟಿಯಾಗಿದ್ದ ವೈದ್ಯೆಯ ತಾಯಿಯ ಕೈ-ಕಾಲು ಕಟ್ಟಿ ದರೋಡೆ ಮಾಡಿರುವ ಪ್ರಕರಣವನ್ನು ಭೇದಿಸಿರುವ ಕುಮಾರಸ್ವಾಮಿ ಲೇಔಟ್‌ ಠಾಣೆ ಪೊಲೀಸರು, ತಂದೆ-ಮಗ ಸೇರಿದಂತೆ ಒಟ್ಟು ಆರು ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಒಡಿಸ್ಸಾ ಮೂಲದ ಜ್ಞಾನರಂಜನ್‌ ನಾಥ್‌ ಅಲಿಯಾಸ್‌ ಬಾಪಿ(36), ಶ್ರೀಕಾಂತ್‌ ದಾಶ್‌(40), ಸುಭಾಷ್‌ ಬಿಸ್ವಾಲ್‌(41), ಬಿಷ್ಣು ಮೋಹನ್‌ ಖಟುವಾ(35), ಬಿಷ್ಣು ಚರಣ್‌ ಬೆಹೆರಾ(61) ಹಾಗೂ ಸುದಾಂಶು ಬೆಹೆರಾ(21) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 3.50 ಲಕ್ಷ

ಕೈ-ಕಾಲು ಕಟ್ಟಿ ಹಾಕಿ ದರೋಡೆ ➤ 6 ಮಂದಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಜನರ ಕಣ್ಣೆದುರೇ ಕಾನ್‌ಸ್ಟೆಬಲ್‌ನನ್ನು ಇರಿದು ಕೊಂದ ಕಳ್ಳ…!

(ನ್ಯೂಸ್ ಕಡಬ)newskadaba.com  ಹೊಸದಿಲ್ಲಿ, ಜ.11. ನಡುರಸ್ತೆಯಲ್ಲಿ ಎಲ್ಲರ ಕಣ್ಣೆದುರೇ ಕಳ್ಳನಿಂದ ಇರಿತಕ್ಕೆ ಒಳಗಾದ ಪೊಲೀಸ್ ಅಧಿಕಾರಿ ಮೃತಪಟ್ಟ ಘಟನೆ ರಾಜಧಾನಿ ದಿಲ್ಲಿಯಲ್ಲಿ ನಡೆದಿದೆ. ಮೊಬೈಲ್ ಫೋನ್ ಕದ್ದು ಪರಾರಿಯಾಗುತ್ತಿದ್ದ ಖದೀಮನನ್ನು ಪೊಲೀಸ್ ಸಿಬ್ಬಂದಿಯೊಬ್ಬರು ಹಿಡಿದಿದ್ದರು. ಆದರೆ ಕಳ್ಳ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ 12 ಬಾರಿ ಅವರಿಗೆ ಚಾಕುವಿನಿಂದ ಇರಿದಿದ್ದಾನೆ. ಇಷ್ಟೆಲ್ಲಾ ನಡೆದರೂ ಜನರ ಗುಂಪು ಮೂಕ ಪ್ರೇಕ್ಷಕರಾಗಿತ್ತೇ ವಿನಾ, ಕಳ್ಳನ ಆಕ್ರಮಣದಿಂದ ಪೊಲೀಸ್ ಸಿಬ್ಬಂದಿಯನ್ನು ರಕ್ಷಿಸುವ ಗೋಜಿಗೆ ಹೋಗಲಿಲ್ಲ. ದಾಳಿಕೋರನನ್ನು ತಡೆಯುವ ಅಥವಾ ಅವನನ್ನು ಹಿಡಿಯುವ ಪೊಲೀಸ್ ಪ್ರಯತ್ನಕ್ಕೆ

ಜನರ ಕಣ್ಣೆದುರೇ ಕಾನ್‌ಸ್ಟೆಬಲ್‌ನನ್ನು ಇರಿದು ಕೊಂದ ಕಳ್ಳ…! Read More »

ಕರ್ನಾಟಕ

ಕೆಲಸ ಮಾಡುತ್ತಿದ್ದ ಮನೆಯಿಂದ ಚಿನ್ನಾಭರಣವನ್ನು ಕದ್ದ ಖತರ್ನಾಕ್ ಮಹಿಳೆ ಅರೆಸ್ಟ್.!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.08.  ಕೆಲಸ ಮಾಡುತ್ತಿದ್ದ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಖತರ್ನಾಕ್ ಮಹಿಳೆಯನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಅಮೃತಹಳ್ಳಿಯ ಮೋನಿಕಾ ಎಂದು ಗುರುತಿಸಲಾಗಿದೆ. ಬಂಧಿತಳಿಂದ 2.30 ಲಕ್ಷ ಮೌಲ್ಯದ 40 ಗ್ರಾಂ ತೂಕದ ಚಿನ್ನಾಭರಣಗಳನ್ನು ಜಪ್ತಿಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಡಿಸಿಪಿ ಡಾ.ಅನೂಪ್ ಎ.ಶೆಟ್ಟಿ ತಿಳಿಸಿದ್ದಾರೆ. ಅಮೃತಹಳ್ಳಿಯ ಸಂಗೀತಾ ರವರು ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮೋನಿಕಾ ಎಂಬ ಮಹಿಳೆಯು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿಕೊಂಡು

ಕೆಲಸ ಮಾಡುತ್ತಿದ್ದ ಮನೆಯಿಂದ ಚಿನ್ನಾಭರಣವನ್ನು ಕದ್ದ ಖತರ್ನಾಕ್ ಮಹಿಳೆ ಅರೆಸ್ಟ್.!!! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಕುಂದಾಪುರ : ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣ..!! ➤  ಅಂತರಾಜ್ಯ ಕಳ್ಳರಿಬ್ಬರ ಬಂಧನ

(ನ್ಯೂಸ್ ಕಡಬ)newskadaba.com  ಕುಂದಾಪುರ, ಜ.07.  ಕಳೆದ ಮೂರು ತಿಂಗಳ ಹಿಂದೆ ಕೋಟೇಶ್ವರದ ಮನೆಯೊಂದರಲ್ಲಿ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣದ ಸಂಬಂಧ ಇಬ್ಬರು ಆರೋಪಿಗಳನ್ನು ಕುಂದಾಪುರ ವೃತ್ತನಿರೀಕ್ಷಕರು, ಉಪನಿರೀಕ್ಷಕರ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ ಎನ್ನಲಾಗಿದೆ. ಕಾಸರಗೋಡಿನ ಹೊಸದುರ್ಗ ಪೆರಿಯಾಟಡುಕಂ ನಿವಾಸಿ ಹಾಶಿಮ್ ಎ.ಎಚ್ (42) ಎಂಬಾತನನ್ನು ಕೇರಳದ ಕಾಸರಗೋಡಿನಲ್ಲಿ ಹಾಗೂ ಇನ್ನೋರ್ವ ಆರೋಪಿ ಕುಂಬಳೆ ಮಂಜೇಶ್ವರದ ಅಬೂಬಕ್ಕರ್ ಸಿದ್ದಿಕ್ (48) ಎಂಬಾತನನ್ನು ಮಡಿಕೇರಿಯಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಂಡ ತನಿಖಾಧಿಕಾರಿ ವೃತ್ತನಿರೀಕ್ಷಕ

ಕುಂದಾಪುರ : ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣ..!! ➤  ಅಂತರಾಜ್ಯ ಕಳ್ಳರಿಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ಪುತ್ತೂರು: ಜೆರಾಕ್ಸ್ ಅಂಗಡಿಯಿಂದ ಕಳವು     

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 02. ಜೆರಾಕ್ಸ್ ಅಂಗಡಿಯಿಂದ ಸಾವಿರಾರು ರೂಪಾಯಿ ಕಳವುಗೈದಿರುವ ಘಟನೆ ಕೌಡಿಚ್ಚಾರಿನಲ್ಲಿ ವರದಿಯಾಗಿದೆ. ಕೌಡಿಚ್ಚಾರಿನಲ್ಲಿರುವ ವಿಶ್ವನಾಥ ಗೌಡ ಎಂಬವರಿಗೆ ಸೇರಿದ ಜೆರಾಕ್ಸ್ ಅಂಗಡಿಯಿಂದ ಕಳವಾಗಿದ್ದು, ಅವರು ಅಂಗಡಿಗೆ ಬಂದಾಗ ಅಂಗಡಿಯ ಎದುರಿನ ಬಾಗಿಲಿನ ಬೀಗ ಮುರಿದಿರುವುದು ಬೆಳಕಿಗೆ ಬಂದಿದೆ. ಅಂಗಡಿ ಒಳಗೆ ನೋಡಿದಾಗ ಡ್ರವರ್ ನಲ್ಲಿದ್ದ ಸುಮಾರು 20 ಸಾವಿರ ನಗದು ಮತ್ತು ಮೊಬೈಲ್ ಕಳವಾಗಿದೆ ಎಂದು ವರದಿಯಾಗಿದೆ. ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಪುತ್ತೂರು: ಜೆರಾಕ್ಸ್ ಅಂಗಡಿಯಿಂದ ಕಳವು      Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ಬೆಳ್ತಂಗಡಿ: ನಗ-ನಗದು ಕಳವು ➤ ದೂರು ದಾಖಲು 

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 27. ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಳನುಗ್ಗಿದ ಕಳ್ಳರು ನಗ-ನಗದು ದೋಚಿ ಪರಾರಿಯಾದ ಘಟನೆ ತಾಲೂಕಿನ ಮೊಗ್ರು ಗ್ರಾಮದ ಮುರ ಎಂಬಲ್ಲಿ ಸಂಭವಿಸಿದೆ. ಇಲ್ಲಿನ ಮೀನಾಕ್ಷಿ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಿಂಬಾಗಿಲ ಮೂಲಕ ಒಳನುಗ್ಗಿದ ಕಳ್ಳರು ಮನೆಯ ಕಪಾಟಿನಲ್ಲಿರಿಸಿದ್ದ ಎರಡೂವರೆ ಪವನ್ ಚಿನ್ನದ ಸರ ಹಾಗೂ 32,500 ರೂ. ನಗದನ್ನು ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಮೀನಾಕ್ಷಿಯವರು ಗುರುವಾಯನಕೆರೆಯಲ್ಲಿರುವ ತನ್ನ ಮಗಳ ಮನೆಗೆ ತೆರಳಿ, ವಾಪಸ್ ಬಂದಾಗ

ಬೆಳ್ತಂಗಡಿ: ನಗ-ನಗದು ಕಳವು ➤ ದೂರು ದಾಖಲು  Read More »

ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

17 ಸಾವಿರ ಬೆಲೆ ಬಾಳುವ ಸೈಕಲ್ ಕಳ್ಳತನ     

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 24. ಬೆಂಗಳೂರು ನಗರದಲ್ಲಿ ಮತ್ತೊಂದು ಸೈಕಲ್ ಕಳ್ಳರ ಗ್ಯಾಂಗ್ ಹುಟ್ಟಿಕೊಂಡಿದ್ದು, ಆಟೋದಲ್ಲಿ ಬಂದ ಕಳ್ಳರ ಗ್ಯಾಂಗ್‌ವೊಂದು ಸೈಕಲ್ ಕದಿಯೋ ವಿಡಿಯೋ ಇದೀಗ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯುವರಾಜ್‌ ಎಂಬಾತನಿಗೆ ಸೇರಿದ 17 ಸಾವಿರ ಬೆಲೆ ಬಾಳುವ ಸೈಕಲ್ ಇದಾಗಿದ್ದು, ಜಿಮ್‌ಗೆ ಹೋಗಲು ಸೈಕಲ್‌ನಲ್ಲಿ ಯುವರಾಜ್ ಬಂದಿದ್ದ. ಇನ್ನು ಇದನ್ನು ನೋಡಿದ ಮೂವರು ಕಳ್ಳರು ಆಟೋದಲ್ಲಿ ಬಂದು, ದೂರದಲ್ಲಿ ನಿಂತು ಗಮನಿಸಿ ಯಾರು ಇಲ್ಲದ ವೇಳೆ ಈ ಕೃತ್ಯವನ್ನೆಸಗಿದ್ದಾರೆ.

17 ಸಾವಿರ ಬೆಲೆ ಬಾಳುವ ಸೈಕಲ್ ಕಳ್ಳತನ      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗ್ರಾಹಕನ ಸೋಗಿನಲ್ಲಿ ಬಂದು ಆರು ಲಕ್ಷ ರೂ. ನಗದು ದೋಚಿ ಪರಾರಿ..!

(ನ್ಯೂಸ್ ಕಡಬ) newskadaba. com ಕಾಪು, ಡಿ. 24. ಇಲ್ಲಿನ ಮುಖ್ಯರಸ್ತೆಯಲ್ಲಿರುವ ಮಹಾಲಸಾ ಟ್ರೇಡರ್ಸ್ ಹಾಲಿನ ಅಂಗಡಿಗೆ ಹಾಲು ಖರೀದಿ ನೆಪದಲ್ಲಿ ಗ್ರಾಹಕನ ಸೋಗಿನಲ್ಲಿ ಬಂದ ನಾಲ್ವರು ಮಾಲಕನಿಂದ ಆರು ಲಕ್ಷ ರೂ. ನಗದು ದೋಚಿ ಪರಾರಿಯಾದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.   ಅಂಗಡಿ ಮಾಲಕ ರಾತ್ರಿ ವೇಳೆ ಬೀಗ ಹಾಕಿ ಮನೆಗೆ ತೆರಳಲು ಸಿದ್ಧರಾಗಿ 4 ದಿನದ ವ್ಯವಹಾರದ ಸುಮಾರು 6 ಲಕ್ಷ ರೂ. ನಗದನ್ನು ಸ್ಕೂಟಿಯಲ್ಲಿ ಇರಿಸಿದ್ದರು. ಈ ವೇಳೆ ಗ್ರಾಹಕನ ಸೋಗಿನಲ್ಲಿ

ಗ್ರಾಹಕನ ಸೋಗಿನಲ್ಲಿ ಬಂದು ಆರು ಲಕ್ಷ ರೂ. ನಗದು ದೋಚಿ ಪರಾರಿ..! Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಮಾಂಗಲ್ಯ ಸರ ಕಿತ್ತು ಪರಾರಿಯಾಗುತ್ತಿದ್ದ ಖದೀಮನಿಗೆ ಧರ್ಮದೇಟು       

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಮಹಿಳೆಯ ಮಾಂಗಲ್ಯ ಸರ ಕಳ್ಳತನದ ವೇಳೆ ಖದೀಮನೊಬ್ಬ ಸಿಕ್ಕಿಬಿದ್ದಿರುವ ಘಟನೆ ದೊಡ್ಡಬಳ್ಳಾಪುರದ ರೈಲ್ವೇ ಸ್ಟೇಷನ್ ರಸ್ತೆಯ ಸ್ಕೌಟ್ ಕ್ಯಾಂಪ್ ರಸ್ತೆಯ ಬಳಿ ಸಂಭವಿಸಿದೆ. ಕಳ್ಳನು ಮಹಿಳೆಯ ಕತ್ತಿನಿಂದ ಸರ ಕಿತ್ತುಕೊಂಡು ಪರಾರಿಯಾಗುವ ವೇಳೆ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಮಹಿಳೆಯು ಕೆಲಸ ಮುಗಿಸಿ ಒಂಟಿಯಾಗಿ ಬರುತ್ತಿದ್ದದ್ದನ್ನು ಗಮನಿಸಿದ ಈತ ಕೃತ್ಯಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಮಾಂಗಲ್ಯ ಸರ ಕಿತ್ತುಕೊಳ್ಳುತ್ತಿದ್ದಂತೆಯೇ ಮಹಿಳೆ ಕೂಗಿಕೊಂಡಿದ್ದು, ತಕ್ಷಣವೇ ಸ್ಥಳದಲ್ಲಿದ್ದ ಸಾರ್ವಜನಿಕರು ಕಳ್ಳನನ್ನು ಹಿಡಿದು, ಬಳಿಕ ಧರ್ಮದೇಟು

ಮಾಂಗಲ್ಯ ಸರ ಕಿತ್ತು ಪರಾರಿಯಾಗುತ್ತಿದ್ದ ಖದೀಮನಿಗೆ ಧರ್ಮದೇಟು        Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top