transfer

ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಅ. 11. ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರದಂದು ಆದೇಶ ಹೊರಡಿಸಿದೆ. ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮೊಹ್ಸಿನ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಸಾರಿಗೆ ಇಲಾಖೆಯ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಅವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹಾಗೂ ರಾಜ್ಯ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯ ಅಧ್ಯಕ್ಷೆ ಎನ್. ಮಂಜುಶ್ರೀ ಅವರನ್ನು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ […]

ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರಕಾರ Read More »

ಕರ್ನಾಟಕ

35 ಡಿವೈಎಸ್ಪಿ, 88 ಇನ್ಸ್‌ಪೆಕ್ಟರ್ ಗಳ ವರ್ಗಾವಣೆ – ರಾಜ್ಯ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 27. ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದ್ದು, ಒಟ್ಟು 35 ಡಿವೈಎಸ್ಪಿ, 88 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. 2 ವರ್ಷಗಳ ಕಾಲಾವಧಿ ನಿಯಮ ಜಾರಿಯಾದ ನಂತರ ಮೊದಲ ಬಾರಿಗೆ 35 ಡಿವೈಎಸ್ಪಿ ಮತ್ತು 88 ಇನ್ಸ್ಪೆಕ್ಟರ್ ಗಳನ್ನು ಪೊಲೀಸ್ ಇಲಾಖೆ ವರ್ಗಾವಣೆ ಮಾಡಿದೆ. ಇನ್ಸ್ಪೆಕ್ಟರ್ ಮೇಲ್ಪಟ್ಟ ಅಧಿಕಾರಿಗಳ ಕಾರ್ಯನಿರ್ವಹಣೆಗೆ ರಾಜ್ಯ ಸರ್ಕಾರ 2 ವರ್ಷಗಳ ಕಾಲಾವಧಿ ನಿಗದಿಗೊಳಿಸಿ ನಿಯಮ ಜಾರಿ ಮಾಡಿದೆ.

35 ಡಿವೈಎಸ್ಪಿ, 88 ಇನ್ಸ್‌ಪೆಕ್ಟರ್ ಗಳ ವರ್ಗಾವಣೆ – ರಾಜ್ಯ ಸರಕಾರ ಆದೇಶ Read More »

ಕರ್ನಾಟಕ

ನೆಕ್ಕರೆ ಅಂಗನವಾಡಿ ಕಾರ್ಯಕರ್ತೆ ವರ್ಗಾವಣೆ- ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com ಕಡಬ, ಆ. 24. ಆಲಂಕಾರು ಗ್ರಾಮದ ನೆಕ್ಕರೆ ಅಂಗನವಾಡಿ ಕೇಂದ್ರದಲ್ಲಿ 9 ವರ್ಷ ಕಾರ್ಯಕರ್ತೆಯಾಗಿ ಸೇವೆಸಲ್ಲಿಸಿ ಇದೀಗ ಕಡಬ ಪಿಜಕ್ಕಳ ಅಂಗನವಾಡಿ ಕೇಂದ್ರಕ್ಕೆ ವರ್ಗಾವಣೆಯಾಗಿರುವ ಶ್ರೀಮತಿ ನಯನಾಕ್ಷಿ ಅವರನ್ನು ನೆಕ್ಕರೆ ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಮಕ್ಕಳ ಪೋಷಕರು ಮತ್ತು ಸ್ತ್ರೀಶಕ್ತಿ ಗುಂಪಿನ ಸದಸ್ಯರ ಸಹಯೋಗದಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿ ಅನಿತಾ ಇವರು ವಹಿಸಿದ್ದರು ಮತ್ತು ಅಲಂಕಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ

ನೆಕ್ಕರೆ ಅಂಗನವಾಡಿ ಕಾರ್ಯಕರ್ತೆ ವರ್ಗಾವಣೆ- ಬೀಳ್ಕೊಡುಗೆ Read More »

ಕರಾವಳಿ

ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ – ಮತ್ತೆ 50 ಪಿಎಸ್ಐಗಳ ವರ್ಗ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 03. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅನೇಕ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಇದೀಗ ಮತ್ತೆ ರಾಜ್ಯ ಸರ್ಕಾರ ಗೃಹ ಇಲಾಖೆಯಲ್ಲಿ ಮತ್ತೊಂದು ಸುತ್ತಿನ ವರ್ಗಾವಣೆ ಮಾಡಿ ಆದೇಶಿಸಿದೆ. ಇತ್ತೀಚೆಗೆ 211 ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿದ್ದು, ಇಂದು ಮತ್ತೆ 50 ಪಿಎಸ್​​​​ಐ ಗಳನ್ನು ವರ್ಗಾವಣೆಗೊಳಿಸಲಾಗಿದೆ. ಇನ್ನು ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ವರ್ಗಾವಣೆ ದಂಧೆಯನ್ನು ಆರಂಭಿಸಿದೆ ಎಂದು ವಿಪಕ್ಷಗಳು ಗಂಭೀರ ಆರೋಪಗಳನ್ನು ಮಾಡುತ್ತಿವೆ.

ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ – ಮತ್ತೆ 50 ಪಿಎಸ್ಐಗಳ ವರ್ಗ Read More »

ಕರ್ನಾಟಕ

ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪರ್ವ – 45 ಡಿವೈಎಸ್ಪಿ/ ಎಸಿಪಿಗಳ ವರ್ಗಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 01. ನಗರದ 17 ಅಧಿಕಾರಿಗಳು ಸೇರಿದಂತೆ ರಾಜ್ಯದ 45 ಡಿವೈಎಸ್ಪಿ ಹಾಗೂ ಎಸಿಪಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.        

ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪರ್ವ – 45 ಡಿವೈಎಸ್ಪಿ/ ಎಸಿಪಿಗಳ ವರ್ಗಾವಣೆ Read More »

ಕರ್ನಾಟಕ

ಪುತ್ತೂರು ನಗರ ಠಾಣಾ ಕ್ರೈಂ ಎಸ್.ಐ ಭವಾನಿ ಮಹಿಳಾ ಪೊಲೀಸ್ ಠಾಣೆಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 16. ಇಲ್ಲಿನ ನಗರ ಪೊಲೀಸ್ ಠಾಣೆಯಲ್ಲಿ ಕ್ರೈಂ ಎಸ್.ಐ ಆಗಿರುವ ಭವಾನಿ ಅವರನ್ನು ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿ ಅದೇಶಿಸಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರೊಬೆಷನರಿ ಕರ್ತವ್ಯದಲ್ಲಿದ್ದ ಅವರು ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಇದೀಗ ಅವರನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ವರ್ಗಾವಣೆಗೊಳಿಸಲಾಗಿದೆ.

ಪುತ್ತೂರು ನಗರ ಠಾಣಾ ಕ್ರೈಂ ಎಸ್.ಐ ಭವಾನಿ ಮಹಿಳಾ ಪೊಲೀಸ್ ಠಾಣೆಗೆ ವರ್ಗಾವಣೆ Read More »

ಕರಾವಳಿ

ದ.ಕ. ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 16. ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರದಂದು ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ನೇಮಕಗೊಂಡಿದ್ದಾರೆ. ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಡಾ. ಕುಮಾರ ಅವರು ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಲಾಗಿದೆ.

ದ.ಕ. ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ನೇಮಕ Read More »

ಕರಾವಳಿ

ಆಂತರಿಕ ಭದ್ರತಾ ವಿಭಾಗಕ್ಕೆ ರವಿ ಡಿ ಚನ್ನಣ್ಣನವರ್ ವರ್ಗಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 09. ಕಿಯೋನಿಕ್ಸ್ ಎಂಡಿ ಆಗಿದ್ದ ರವಿ ಡಿ ಚನ್ನಣ್ಣನವರ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಉಪ ಮಹಾ ನಿರೀಕ್ಷಕರಾಗಿ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ನೂತನ ರಾಜ್ಯ ಸರ್ಕಾರದ ವರ್ಗಾವಣೆ ಪರ್ವ ಮುಂದುವರಿದಿದ್ದು, ಬುಧವಾರ ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಕಾನೂನು ಮತ್ತು ಸುವ್ಯವಸ್ಥೆ ಜವಾಬ್ದಾರಿಯಿಂದ ಅಲೋಕ್ ಕುಮಾರ್​ ಅವರನ್ನು ಎಡಿಜಿಪಿ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು.

ಆಂತರಿಕ ಭದ್ರತಾ ವಿಭಾಗಕ್ಕೆ ರವಿ ಡಿ ಚನ್ನಣ್ಣನವರ್ ವರ್ಗಾವಣೆ Read More »

ಕರ್ನಾಟಕ

5 IPS ಅಧಿಕಾರಿಗಳ ದಿಢೀರ್ ವರ್ಗಾವಣೆ….!!

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ. 21. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದ್ದು, ಇತ್ತೀಚೆಗಷ್ಟೆ ಕೆಲ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಬೆನ್ನಲ್ಲೇ ಇದೀಗ ಮತ್ತೆ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆರ್. ಚೇತನ್ –  ಗುಪ್ತಚರ ಇಲಾಖೆ ಬೆಂಗಳೂರು ಎಸ್ ಪಿ ಸೀಮಾ ಲಾಟ್ಕರ್ -ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಎ ಐ ಜಿಪಿ, ಸಿಸಿಬಿ – ಬೆಂಗಳೂರು ಎಂ.ಮುತ್ತುರಾಜ್ –

5 IPS ಅಧಿಕಾರಿಗಳ ದಿಢೀರ್ ವರ್ಗಾವಣೆ….!! Read More »

ಕರ್ನಾಟಕ
Scroll to Top