tumkur

ತುಮಕೂರಿನಲ್ಲಿ ಬೈಕ್ ಅಪಘಾತ ➤ ಸುಳ್ಯದ ಯುವಕ ಮೃತ್ಯು

(ನ್ಯೂ ಸ್ ಕಡಬ) newskadaba.com ಸುಳ್ಯ, ಮಾ. 21. ತುಮಕೂರು ಜಿಲ್ಲೆಯ ಪಾವಗಡದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನ್ನು ಪ್ರಜ್ವಲ್ ಕೇರ್ಪಳ ಎಂದು ಗುರುತಿಸಲಾಗಿದೆ. ಪ್ರಜ್ವಲ್ ಪಾವಗಡದಲ್ಲಿ ಟೋಲ್ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಟೋಲ್ ಗೇಟ್ ನಿಂದ ಸ್ವಲ್ಪ ದೂರದಲ್ಲಿ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಪ್ರಜ್ವಲ್ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ತಂದೆ, […]

ತುಮಕೂರಿನಲ್ಲಿ ಬೈಕ್ ಅಪಘಾತ ➤ ಸುಳ್ಯದ ಯುವಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹುಡುಗಿಯೊಂದಿಗೆ ಆಂಬ್ಯಲೆನ್ಸ್ ನಲ್ಲಿ ಸೈರನ್ ಹಾಕಿ ಹೋದವನಿಗೆ ಬಿತ್ತು ಗೂಸಾ

(ನ್ಯೂಸ್ ಕಡಬ) newskadaba.com ತುಮಕೂರು, ನ.20. ಆ್ಯಂಬುಲೆನ್ಸ್ ನಲ್ಲಿ ರೋಗಿಗಳಿಲ್ಲದಿದ್ದರೂ ಹುಡುಗಿಯೋರ್ವಳನ್ನು ಕರೆದುಕೊಂಡು ಚಾಲಕ ಸೈರನ್ ಹಾಕಿ ವೇಗವಾಗಿ ಚಲಾಯಿಸಿ ಕಾರಿಗೆ ಢಿಕ್ಕಿ ಹೊಡೆದು ಸಾರ್ವಜನಿಕರಿಂದ ಥಳಿಸಿಕೊಂಡ ಘಟನೆ ರವಿವಾರದಂದು ನಗರದ ಅಂತರಸನಹಳ್ಳಿ ಸೇತುವೆ ಬಳಿ ನಡೆದಿದೆ. ಬೆಳಧರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿದ ಆ್ಯಂಬುಲೆನ್ಸ್ ನ ಚಾಲಕ ತನ್ನ ಪಕ್ಕದ ಸೀಟಿನಲ್ಲಿ ಯುವತಿಯೊಬ್ಬಳನ್ನು ಕುಳ್ಳಿರಿಸಿಕೊಂಡು ಸೈರನ್ ಹಾಕಿಕೊಂಡು ವೇಗವಾಗಿ ಬೆಳಧರ ಕಡೆಯಿಂದ ತುಮಕೂರಿಗೆ ತೆರಳುತ್ತಿರುವಾಗ ನಿಯಂತ್ರಣ ತಪ್ಪಿ ಕಾರಿಗೆ ಢಿಕ್ಕಿ ಹೊಡೆದಿದೆ. ಆ್ಯಂಬುಲೆನ್ಸ್‌ ಚಾಲಕನ ಬೇಜವಾಬ್ದಾರಿ

ಹುಡುಗಿಯೊಂದಿಗೆ ಆಂಬ್ಯಲೆನ್ಸ್ ನಲ್ಲಿ ಸೈರನ್ ಹಾಕಿ ಹೋದವನಿಗೆ ಬಿತ್ತು ಗೂಸಾ Read More »

ಕರ್ನಾಟಕ

ಯಡಿಯೂರಪ್ಪರಿದ್ದ ಕಾರು ನಿಲ್ಲಿಸದೇ ಇದ್ದುದಕ್ಕೆ ಆಕ್ರೋಶ ► ಬಿಜೆಪಿಯ ಪರಿವರ್ತನಾ ಯಾತ್ರೆಯ ವಾಹನಕ್ಕೆ ಕಲ್ಲು ತೂರಾಟ

(ನ್ಯೂಸ್ ಕಡಬ) newskadaba.com ತುಮಕೂರು, ನ,03. ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಬಾಣಸಂದ್ರದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಯ ವಾಹನದ ಮೇಲೆ ಮೇಲೆ ಶುಕ್ರವಾರದಂದು ಕಲ್ಲು ತೂರಲಾಗಿದೆ. ಬಿಜೆಪಿ ಅತೃಪ್ತರು ಹಾಗೂ ಜೆಡಿಎಸ್ ಬೆಂಬಲಿಗರು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಕಲ್ಲೇಟಿನಿಂದ ಪರಿವರ್ತನಾ ಯಾತ್ರೆ ವಾಹನದ ಗಾಜು ಪುಡಿಯಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿದ್ದ ಕಾರು ಬಾಣಸಂದ್ರ ಬಳಿ ನಿಲ್ಲಿಸದೇ ಇರುವುದರಿಂದ ಆಕ್ರೋಶಗೊಂಡ ಪಕ್ಷದ ಕಾರ್ಯಕರ್ತರು ಕಲ್ಲು ತೂರಿದ್ದಾರೆ ಎನ್ನಲಾಗಿದೆ. ಬಿಜೆಪಿಯ ಉಚ್ಛಾಟಿತ ಮುಖಂಡ ಚೌಧರಿ ನಾಗೇಶ್

ಯಡಿಯೂರಪ್ಪರಿದ್ದ ಕಾರು ನಿಲ್ಲಿಸದೇ ಇದ್ದುದಕ್ಕೆ ಆಕ್ರೋಶ ► ಬಿಜೆಪಿಯ ಪರಿವರ್ತನಾ ಯಾತ್ರೆಯ ವಾಹನಕ್ಕೆ ಕಲ್ಲು ತೂರಾಟ Read More »

ಕರ್ನಾಟಕ

ಬಚ್ಚಲು ಕೋಣೆಯಲ್ಲಿ ಚಿರತೆ ಪ್ರತ್ಯಕ್ಷ ► ಅರಣ್ಯ ಸಿಬ್ಬಂದಿಗಳಿಂದ ಸೆರೆ

(ನ್ಯೂಸ್ ಕಡಬ) newskadaba.com ತುಮಕೂರು, ಆ.28, ಇಲ್ಲಿಯ ಗುಬ್ಬಿ ತಾಲೂಕಿನ ನಾಗಸಂದ್ರ ಗ್ರಾಮದ ಅಶೋಕ್ ಎಂಬವರ  ಮನೆಯ ಸ್ನಾನದ ಕೋಣೆಯಲ್ಲಿ ಸೋಮವಾರ ಬೆಳ್ಳಂ ಬೆಳಗ್ಗೆ ಚಿರತೆಯೊಂದು ಕಾಣಿಸಿಕೊಂಡಿದೆ. ಅಶೋಕ್ ಎಂಬವರ ಮನೆಯ ಹಿಂಭಾಗದ ಸ್ನಾನದ ಕೋಣೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಬೆಳಗಿನ ಜಾವ ಸುಮಾರು 5 ಗಂಟೆಗೆ ಮನೆಯವರು ಸ್ನಾನದ ಕೋಣೆಗೆ ಹೋಗಿದ್ದಾಗ ಚಿರತೆ ಕಾಣಿಸಿಕೊಂಡಿದೆ. ತಕ್ಷಣ ಅಲ್ಲಿಯ ಗ್ರಾಮಸ್ಥರ ಸಹಾಯದಿಂದ ಆ ಚಿರತೆಯನ್ನು ಸ್ನಾನದ ಕೋಣೆಯಲ್ಲಿ ಕೂಡಿ ಹಾಕಿದ್ದಾರೆ. ಬಳಿಕ ಸ್ಥಳಕ್ಕೆ ಗುಬ್ಬಿ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ. ಸದ್ಯ ಅದಕ್ಕೆ

ಬಚ್ಚಲು ಕೋಣೆಯಲ್ಲಿ ಚಿರತೆ ಪ್ರತ್ಯಕ್ಷ ► ಅರಣ್ಯ ಸಿಬ್ಬಂದಿಗಳಿಂದ ಸೆರೆ Read More »

ಕರ್ನಾಟಕ

ಖಾಸಗಿ ಬಸ್ – ಕ್ವಾಲಿಸ್ ಢಿಕ್ಕಿ ► ಜೆಡಿಎಸ್ ತಾಲೂಕು ಅಧ್ಯಕ್ಷ ಸೇರಿ ತಂದೆ ಮಗ ಮೃತ್ಯು

(ನ್ಯೂಸ್ ಕಡಬ) newskadaba.com  ತುಮಕೂರು, ಆ.01.  ಕ್ವಾಲಿಸ್ ಕಾರು ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕ್ವಾಲಿಸ್ ವಾಹನದಲ್ಲಿದ್ದ ತಂದೆ-ಮಗ ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ತುಮಕೂರಿನ ನರುಗನಹಳ್ಳಿ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್.ಸಿ. ಕುಮಾರ್ ಹಾಗೂ ಅವರ ಪುತ್ರ ಜೀವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊನ್ನುಡಿಕೆಯಿಂದ ತುಮಕೂರಿಗೆ ಬರುತಿದ್ದ ಕಾರಿಗೆ ಕುಣಿಗಲ್ ಕಡೆಗೆ ತೆರಳುತ್ತಿದ್ದ ಎಸ್‍ಆರ್‍ಎಸ್ ಖಾಸಗಿ ಬಸ್ ಚಾಲಕ ತನ್ನ ಮುಂದಿದ್ದ ವಾಹನವನ್ನು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಢಿಕ್ಕಿಯಾಗಿದೆ.

ಖಾಸಗಿ ಬಸ್ – ಕ್ವಾಲಿಸ್ ಢಿಕ್ಕಿ ► ಜೆಡಿಎಸ್ ತಾಲೂಕು ಅಧ್ಯಕ್ಷ ಸೇರಿ ತಂದೆ ಮಗ ಮೃತ್ಯು Read More »

ಕರ್ನಾಟಕ
Scroll to Top