Udupi

ರಸ್ತೆ ಅಪಘಾತ: ತಂದೆ,3 ಮಕ್ಕಳು ಮೃತ್ಯು.!

(ನ್ಯೂಸ್ ಕಡಬ) newskadaba.com ಉಡುಪಿ, ಅ. 01.  ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ನಲ್ಲಿ ತೆರಳುತ್ತದ್ದ ತಂದೆ ಮತ್ತು ಮೂವರು ಮಕ್ಕಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರು ಪಾಜೆಗುಡ್ಡೆ ಎಂಬಲ್ಲಿ ಸೋಮವಾರ ನಡೆದಿದೆ. ಮೃತರನ್ನು ಸುರೇಶ್ ಆಚಾರ್ಯ (36), ಮಕ್ಕಳಾದ ಸುಮಿಕ್ಷಾ (7), ಸುಶ್ಮಿತಾ (5), ಸುಶಾಂತ್ (2) ಎಂದು ಗುರುತಿಸಲಾಗಿದೆ. ಸುರೇಶ್‌ ಅವರ ಪತ್ನಿ ಮೀನಾಕ್ಷಿ ತೀವ್ರವಾಗಿ ಗಾಯಗೊಂಡಿದ್ದಾರೆ. ಲಾರಿ ಚಾಲಕನ ಅತಿ ವೇಗ, ಅಜಾರೂಕತೆಯ ಚಾಲನೆಯಿಂದ ಅಪಘಾತ […]

ರಸ್ತೆ ಅಪಘಾತ: ತಂದೆ,3 ಮಕ್ಕಳು ಮೃತ್ಯು.! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಂಗ್ರೆಸ್ ಸರಕಾರದಿಂದ 40000 ಕುಟುಂಬಗಳ ಪಡಿತರ ಚೀಟಿ ರದ್ದತಿ ದುರದೃಷ್ಠಕರ – ಗುರ್ಮೆ ಸುರೇಶ್ ಶೆಟ್ಟಿ

(ನ್ಯೂಸ್ ಕಡಬ)newskadaba.com, ಉಡುಪಿ(ಅ.01): ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಪಂಚ ಗ್ಯಾರಂಟಿಗಳನ್ನು ನೀಡುವುದಾಗಿ ಜನರಿಗೆ ಭರವಸೆ ನೀಡಿ ಸರಕಾರ ರಚನೆಯಾದ ನಂತರ ಪ್ರಾರಂಭಿಕ ಹಂತದಲ್ಲಿ ಕಠಿಣ ಮಾರ್ಗಸೂಚಿಗಳೊಂದಿಗೆ ತುರಾತುರಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಜನರ ಮುಂಗೈಗೆ ತುಪ್ಪ ಸವರುವ ಕೆಲಸ ಮಾಡಿದೆ. ಕಾಂಗ್ರೇಸ್ ಸರಕಾರವು ಪಂಚ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ, ನೀರಾವರಿ ಸೌಲಭ್ಯ, ಆರೋಗ್ಯ, ಶಿಕ್ಷಣ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳನ್ನು ಕಡೆಗಣಿಸುತ್ತಿರುವುದು ಶೋಚನೀಯ. ಅಂಗನವಾಡಿ ಸಹಾಯಕಿ ಹಾಗೂ ಕಾರ್ಯಕರ್ತೆ ಇವರನ್ನು ಪಂಚ ಗ್ಯಾರಂಟಿಗಳ

ಕಾಂಗ್ರೆಸ್ ಸರಕಾರದಿಂದ 40000 ಕುಟುಂಬಗಳ ಪಡಿತರ ಚೀಟಿ ರದ್ದತಿ ದುರದೃಷ್ಠಕರ – ಗುರ್ಮೆ ಸುರೇಶ್ ಶೆಟ್ಟಿ Read More »

ಬ್ರೇಕಿಂಗ್ ನ್ಯೂಸ್

ಉಡುಪಿ: ಅ.2ರಂದು ಗಾಂಧಿ ಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಸಮಾವೇಶ

(ನ್ಯೂಸ್ ಕಡಬ) newskadaba.com ಉಡುಪಿ, ಅ. 01. ದುಶ್ಚಟ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ಧರ್ಮಸ್ಥಳಧ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರು ಕೈಗೊಂಡಿರುವ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅ.2ರಂದು ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಗಾಂಧಿ ಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಹಾಗೂ ಸಮಾವೇಶವೊಂದನ್ನು ಆಯೋಜಿಸಲಾಗಿದೆ ಎಂದು ಉಡುಪಿ ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ ನ ಜಿಲ್ಲಾದ್ಯಕ್ಷ ನವೀನ್‌ಚಂದ್ರ ಶೆಟ್ಟಿ ರಟ್ಟಾಡಿ ತಿಳಿಸಿದ್ದಾರೆ. ಅ.2ರಂದು ಮುಂಜಾನೆ 9:30ಕ್ಕೆ ಉಡುಪಿಯ ಜೋಡುಕಟ್ಟೆಯಿಂದ ಜನಜಾಗೃತಿ ಜಾಥಾ ಪ್ರಾರಂಭಗೊಳ್ಳಲಿದ್ದು, 9ರಿಂದ

ಉಡುಪಿ: ಅ.2ರಂದು ಗಾಂಧಿ ಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಸಮಾವೇಶ Read More »

ಕರಾವಳಿ
crime, arrest, suspected

ಮಸೀದಿ ಕಚೇರಿಗೆ ನುಗ್ಗಿ ಕಳವಿಗೆ ಯತ್ನ: ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಲ್ಪೆ, ಸೆ.30. ಸೈಯದ್ ಅಬೂಬಕ್ಕರ್ ಸಿದ್ದಿಕ್ ಜಾಮಿಯಾ ಮಸೀದಿಯ ಕಚೇರಿ ಒಳಗೆ ನುಗ್ಗಿ ಕಳವಿಗೆ ಯತ್ನಿಸುತ್ತಿದ್ದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಸೆ.28ರಂದು ಮಧ್ಯರಾತ್ರಿ ವೇಳೆ ನಡೆದಿದೆ. ಬಂಧಿತ ಆರೋಪಿಯನ್ನು ಬಿಹಾರ ರಾಜ್ಯದ ಬಿನೋದ್ ರಿಶಿ(40) ಎಂದು ಗುರುತಿಸಲಾಗಿದೆ. ಈತ ಕಚೇರಿಯ ಎದುರಿನ ಕಬ್ಬಿಣದ ಶೆಟರ್‌ನ ಬೀಗವನ್ನು ಮುರಿದು ಒಳನುಗ್ಗಿದ್ದು, ಆಫೀಸಿನ ಗೋಡೆಯ ಮೇಲೆ ಇರಿಸಿದ್ದ ಸಿಸಿ ಕ್ಯಾಮರಾವನ್ನು ಒಡೆದು ಹಾಕಿದ್ದಾನೆ. ಬಳಿಕ ಒಳಗೆ ಹೋಗಿ ಕಚೇರಿಯ ಕಬ್ಬಿಣದ ಕಪಾಟಿನ

ಮಸೀದಿ ಕಚೇರಿಗೆ ನುಗ್ಗಿ ಕಳವಿಗೆ ಯತ್ನ: ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಕೂಟರ್ ಮೇಲೆ ವಿದ್ಯುತ್ ತಂತಿ ಬಿದ್ದು ಗಾಯಗೊಂಡಿದ್ದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಉಡುಪಿ, ಸೆ.30. ಕುಂಜಾರುಗಿರಿ ನಿವಾಸಿ, ಮಣಿಪಾಲ ಪ್ರಸ್‌ ನ ಯುನಿಟ್ 5ರಲ್ಲಿ ಉದ್ಯೋಗದಲ್ಲಿದ್ದ ಕುಂಜಾರುಗಿರಿ ಶಶಿಧರ್ ಶೆಟ್ಟಿ (42) ಸೆ. 27ರಂದು ಮೃತಪಟ್ಟಿದ್ದಾರೆ. ಶಶಿಧರ್ ಅವರು ಜುಲೈನಲ್ಲಿ ಮಣಿಪಾಲದ ಕೈಗಾರಿಕಾ ಪ್ರದೇಶದಲ್ಲಿ ಸ್ಕೂಟರ್‌ನಲ್ಲಿ ಚಲಿಸುತ್ತಿದ್ದ ವೇಳೆ ಗಾಳಿ-ಮಳೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು, ಕಳೆದ 2 ತಿಂಗಳಿನಿಂದ ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.  

ಸ್ಕೂಟರ್ ಮೇಲೆ ವಿದ್ಯುತ್ ತಂತಿ ಬಿದ್ದು ಗಾಯಗೊಂಡಿದ್ದ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಶಾರ್ಟ್ ಸರ್ಕ್ಯೂಟ್ ನಿಂದ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ

(ನ್ಯೂಸ್ ಕಡಬ) newskadaba.com ಸೆ. 25. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಚಲಿಸುತ್ತಿದ್ದ ಕಾರಿನಲ್ಲಿ ಹಠಾತ್ ಬೆಂಕಿ ಹೊತ್ತಿಕೊಂಡ ಘಟನೆ ಉಡುಪಿಯ ಎಂಟಿಆರ್ ಹೋಟೆಲ್ ಮುಂಭಾಗದ ರಸ್ತೆಯಲ್ಲಿ ನಡೆದಿದೆ. ಬ್ರಹ್ಮಗಿರಿಯ ಹಿರಿಯ ನಾಗರಿಕರೊಬ್ಬರು ತಮ್ಮ ಹಳೆಯ ಆಲ್ಟೋ ಕಾರನ್ನು ಚಲಾಯಿಸುತ್ತಿದ್ದಾಗ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ವೇಗವಾಗಿ ಕಾರಿನ ಮುಂಭಾಗಕ್ಕೆ ವ್ಯಾಪಿಸಿದೆ. ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.   ಕಾರಿನ ಬ್ಯಾಟರಿಯಿಂದ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ

ಶಾರ್ಟ್ ಸರ್ಕ್ಯೂಟ್ ನಿಂದ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

2024-25ನೇ ಸಾಲಿನ ತುಳುಕೂಟದ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 23. ಸಾಂಸ್ಕೃತಿಕ ಸಂಘಟನೆ ತುಳುಕೂಟ, ಉಡುಪಿ ಇದರ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆಯಾಗಿದ್ದಾರೆ. ಉಡುಪಿಯ ಜಗನ್ನಾಥ ಸಭಾಭವನದಲ್ಲಿ ನಡೆದ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಿಸಲಾಯಿತು. ಸಂಸ್ಥೆಯ ಇತರ ಪದಾಧಿಕಾರಿಗಳಾದ ಸಂಸ್ಥಾಪಕ ಅಧ್ಯಕ್ಷ ಡಾ.ಭಾಸ್ಕರಾನಂದ್ ಕುಮಾರ್, ಪ್ರಧಾನ ಕಾರ್ಯದರ್ಶಿ ಗಂಗಾಧರ ಕೆಡಿಯೂರು, ಖಜಾಂಚಿ ಚೈತನ್ಯ ಎಂ.ಜಿ, ಉಪಾಧ್ಯಕ್ಷರಾದ ಭುವನಪ್ರಸಾದ್ ಹೆಗ್ಡೆ, ಮನೋಹರ್ ಶೆಟ್ಟಿ ತೋನ್ಸೆ, ದಿವಾಕರ ಸನಿಲ್, ರಶ್ಮಿ ಶೆಣೈ, ಜಂಟಿ ಕಾರ್ಯದರ್ಶಿಗಳಾದ

2024-25ನೇ ಸಾಲಿನ ತುಳುಕೂಟದ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ Read More »

ಕರಾವಳಿ

ಖಾಸಗಿ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 23. ದೊಡ್ಡನಗುಡ್ಡೆ ಬಬ್ಬುಸ್ವಾಮಿ ದೇವಸ್ಥಾನದ ಬಳಿ ಇರುವ ಖಾಸಗಿ ಆಯುರ್ವೇದ ಆಸ್ಪತ್ರೆಯಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದ್ದು, ಸದ್ಯ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದಿನನಿತ್ಯದ ಕೆಲಸಕ್ಕಾಗಿ ಪ್ರತಿದಿನ ಬೆಳಗ್ಗೆ ಬರುವ ಕುಸುಮಾ ಬೆಂಕಿಯನ್ನು ಪತ್ತೆ ಹಚ್ಚಿದರು. ಹೊರಗೆ ಕಾಲಿಟ್ಟಾಗ ಬೆಂಕಿ ಕಾಣಿಸಿಕೊಂಡು ತಕ್ಷಣ ವೈದ್ಯರಿಗೆ ಮಾಹಿತಿ ನೀಡಿದ್ದು, ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ಸ್ಥಳಕ್ಕೆ ಧಾವಿಸಿದ್ದಾರೆ. ಘಟನೆಯ ವೇಳೆ ಮೊದಲ ಮಹಡಿಯಲ್ಲಿದ್ದ ಇಬ್ಬರು ಕಾರ್ಮಿಕರು ಕಟ್ಟಡವನ್ನು

ಖಾಸಗಿ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ Read More »

ಕರಾವಳಿ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡದಲ್ಲಿ ಕಾಲರಾ, ಉಡುಪಿಯಲ್ಲಿ 12 ಪ್ರಕರಣ ದೃಢ

(ನ್ಯೂಸ್ ಕಡಬ) newskadaba.com ಉಡುಪಿ/ಮಂಗಳೂರು, ಸೆ21. ದಕ್ಷಿಣ ಕನ್ನಡದ ಮೂಡುಬಿದಿರೆಯ ನೆಲ್ಲಿಕಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಕೆಲ ದಿನಗಳ ಹಿಂದೆ ಕಾಲರಾ ಪ್ರಕರಣ ದೃಢಪಟ್ಟಿತ್ತು. ಆ ಬಳಿಕ ವ್ಯಕ್ತಿ ಚೇತರಿಸಿಕೊಂಡಿದ್ದಾನೆ. ಡಾ.ಎಚ್.ಆರ್.ತಿಮ್ಮಯ್ಯ ಮಾತನಾಡಿ, ಜಿಲ್ಲೆಯಲ್ಲಿ ಯಾವುದೇ ಎಂಪಾಕ್ಸ್ ಅಥವಾ ನಿಪಾಹ್ ಪ್ರಕರಣಗಳು ವರದಿಯಾಗಿಲ್ಲ. ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ.ತಿಮ್ಮಯ್ಯ, ಹೋಟೆಲ್‌ನಲ್ಲಿ ಊಟ ಮಾಡಿದ ವ್ಯಕ್ತಿಗೆ ಕಾಲರಾ ಕಾಣಿಸಿಕೊಂಡಿದೆ. ಸದ್ಯಕ್ಕೆ, ಭಯಪಡಲು ಯಾವುದೇ ಕಾರಣವಿಲ್ಲ. ನಾವು ಹೋಟೆಲ್ ಮೇಲೆ ಕಣ್ಗಾವಲು ಇರಿಸುತ್ತಿದ್ದೇವೆ ಮತ್ತು ಜಿಲ್ಲೆಯ ಎಲ್ಲಾ ಪ್ರಾಥಮಿಕ

ದಕ್ಷಿಣ ಕನ್ನಡದಲ್ಲಿ ಕಾಲರಾ, ಉಡುಪಿಯಲ್ಲಿ 12 ಪ್ರಕರಣ ದೃಢ Read More »

ಕರಾವಳಿ

ಕಾರು ಅಪಘಾತ: ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 21. ಜಿಲ್ಲೆಯಲ್ಲಿ ಕಾರೊಂದು ತಪ್ಪಿ ಗಡ್ಡಕ್ಕೆ ಢಿಕ್ಕಿ ಹೊಡೆದ ಘಟನೆ ನಡೆದಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಗದಗದಿಂದ ಪುತ್ತೂರಿಗೆ ಪ್ರಯಾಣ ಮಾಡುತ್ತಿದ್ದ ಮಾರುತಿ ವ್ಯಾಗನರ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಡ್ಡಕ್ಕೆ ಢಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆಯ ಮುನಿಯಾಲುವಿನಲ್ಲಿ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದರೆ ಕಾರು ಬಹುತೇಕ ಜಖಂಗೊಂಡಿದೆ ಎನ್ನಲಾಗಿದೆ.    

ಕಾರು ಅಪಘಾತ: ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top