Udupi

ಖಾಸಗಿ ಬಸ್ ಗಳ ನಡುವೆ ಅಪಘಾತ…! ಹಲವಾರು ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ)newskadaba.com ಉಡುಪಿ, ಜು.31. ಎರಡು ಖಾಸಗಿ ಬಸ್‌ ಗಳ ನಡುವೆ ಅಪಘಾತ ಸಂಭವಿಸಿ ಹಲವು ಮಂದಿ ಗಾಯಗೊಂಡ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ದುರ್ಗಾಂಬಾ ಬಸ್, ಅಂಬಾಜಿ ಬಸ್‌ ನ ಹಿಂಬದಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ದುರ್ಗಾಂಬ ಬಸ್‌ ನ ಚಾಲಕ ಮತ್ತು ಹಲವಾರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಖಾಸಗಿ ಬಸ್ ಗಳ ನಡುವೆ ಅಪಘಾತ…! ಹಲವಾರು ಪ್ರಯಾಣಿಕರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕಿಯ ಅತ್ಯಾಚಾರ 27 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌

(ನ್ಯೂಸ್ ಕಡಬ)newskadaba.com ಉಡುಪಿ, ಜು.27. ಅಪ್ರಾಪ್ತ ಬಾಲಕಿಯ ಅತ್ಯಾಚಾರಗೈದು, ಪ್ರಕರಣದ ವಿಚಾರಣೆ ವೇಳೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪಡುಬಿದ್ರಿ ಪೊಲೀಸರು ಮಹತ್ವ ಕಾರ್ಯಚರಣೆ ನಡೆಸಿ 27 ವರ್ಷಗಳ ಬಳಿಕ ಪತ್ತೆ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ಹುಡುಗಿ ದಿನಾಂಕ ಆಗಸ್ಟ್ 07 ರಂದು ಅವಳ ಮನೆಗೆ ಹೋಗುವಾಗ ದಾರಿ ತಪ್ಪಿ ಮಣಿಪಾಲದಲ್ಲಿ ನಿಂತಿದ್ದಾಗ ಆರೋಪಿ ಕುಂದಾಪುರದ ನಿವಾಸಿ ಜಮಾಲ್ ಎಂಬಾತನು ಮೋಟಾರು ಸೈಕಲಿನಲ್ಲಿ ಬಂದು ಹುಡುಗಿಯನ್ನು ಪುಸಲಾಯಿಸಿ ಮಣಿಪಾಲದ ಲಾಡ್ಜ್ ಒಂದರಲ್ಲಿ ರೂಂ ನಲ್ಲಿ ಸುಮಾರು 12

ಅಪ್ರಾಪ್ತ ಬಾಲಕಿಯ ಅತ್ಯಾಚಾರ 27 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌ Read More »

ಕರಾವಳಿ, ಕ್ರೈಮ್ ನ್ಯೂಸ್

ಮಣಿಪಾಲ: ಮನೆಯಂಗಳಕ್ಕೆ ಬಂದ ಚಿರತೆ

(ನ್ಯೂಸ್ ಕಡಬ)newskadaba.com ಉಡುಪಿ ಜು..27. ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ ಕಂಡು ಬಂದ ಘಟನೆ ಬೆಳಕಿಗೆ ಬಂದ ಬಳಿಕ ಸ್ಥಳೀಯ ರಲ್ಲಿ ಆತಂಕ ಮನೆ ಮಾಡಿದೆ ಎಂದು ವರದಿಯಾಗಿದೆ. ಮನೆಯ ಹೊರಭಾಗದಲ್ಲಿದ್ದ ನಾಯಿ ಬೊಗಳುತ್ತಿದ್ದನ್ನು ಗಮನಿಸಿದ ಮನೆ ಮಂದಿ ಬಾಗಿಲು ತೆರೆದಿರಲಿಲ್ಲ. ಕ್ರಮೇಣ ನಾಯಿ ಶಬ್ದ ಕೂಡಾ ಕೇಳಿ ಬಂದಿಲ್ಲ ಎನ್ನಲಾಗಿದೆ. ಸಿಸಿಟಿವಿ ದೃಶ್ಯ ಗಳನ್ನು ಗಮನಿಸಿದಾಗ ಚಿರತೆ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಸಿಕ್ಕಿದೆ. ಸುಮಾರು 11.25 ರ ಸಮಯಕ್ಕೆ ಚಿರತೆ ಮನೆಯಂಗಳಕ್ಕೆ ಬಂದಿದ್ದು, ಚಿರತೆಯನ್ನು ಗಮನಿಸಿದ

ಮಣಿಪಾಲ: ಮನೆಯಂಗಳಕ್ಕೆ ಬಂದ ಚಿರತೆ Read More »

ಕರಾವಳಿ

ಪರಶುರಾಮ ಥೀಂ ಪಾರ್ಕ್ ಹಗರಣ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಸಸ್ಪೆಂಡ್

(ನ್ಯೂಸ್ ಕಡಬ)newskadaba.com ಉಡುಪಿ, ಜು.25. ರಾಜ್ಯದಲ್ಲಿ ವಿವಾದ ಸೃಷ್ಟಿಸಿದ್ದ ಕಾರ್ಕಳದ ಪರಶುರಾಮ ಥೀಂ ಪಾರ್ಕ್ ನಿರ್ಮಾಣ ಕಾಮಗಾರಿಯಲ್ಲಿನ ಅವ್ಯವಹಾರದಲ್ಲಿ ಕಾಮಗಾರಿಯನ್ನು ನಿರ್ವಹಿಸಿದ ನಿರ್ಮಿತ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ರನ್ನು ಅಮಾನತುಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕಾರ್ಕಳದ ಉಮಿಕಲ್ ಬೆಟ್ಟದಲ್ಲಿ ಪರಶುರಾಮ ದೇವರ ಕಂಚಿನ ಪ್ರತಿಮೆಯ ಸ್ಥಾಪನೆ ಮತ್ತು ಥೀಂ ಪಾರ್ಕ್ ನ ನಿರ್ಮಾಣದ ಕಾಮಗಾರಿ ಯನ್ನು ಉಡುಪಿಯ ನಿರ್ಮಿತಿ ಕೇಂದ್ರಕ್ಕೆ ವಹಿಸಲಾಗಿತ್ತು. ಸದ್ರಿ ಕಾಮಗಾರಿಗೆ ಅಂದಾಜು ಮೊತ್ತ ರೂ. 1105.00 ಲಕ್ಷಕ್ಕೆ, ಆಡಳಿತ್ಮಾತಕ

ಪರಶುರಾಮ ಥೀಂ ಪಾರ್ಕ್ ಹಗರಣ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಸಸ್ಪೆಂಡ್ Read More »

ಕರ್ನಾಟಕ

ಭಾರೀ ಅನಾಹುತ ತಪ್ಪಿಸಿದ ರೈಲ್ವೇ ಸಿಬ್ಬಂದಿಗೆ ಮೆಚ್ಚುಗೆ ನಗದು ಬಹುಮಾನ ಘೋಷಣೆ

(ನ್ಯೂಸ್ ಕಡಬ)newskadaba.com. ಉಡುಪಿ, ಜು.24. ಮತ್ಸ್ಯಗಂಧ ಎಕ್ಸ್ ಪ್ರೆಸ್ ನ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಸಂಭವನೀಯ ಭಾರೀ ಅನಾಹುತ ತಪ್ಪಿದ್ದು, ಪ್ರತಿ ಸಿಬ್ಬಂದಿ ಸದಸ್ಯರಿಗೆ 15,000 ರೂ. ನಗದು ಬಹುಮಾನ ನೀಡಿ ಪ್ರಶಂಸೆ ವ್ಯಕ್ತಪಡಿಸಲಾಯಿತು. ದೊಡ್ಡ ಅನಾಹುತವನ್ನು ತಪ್ಪಿಸಿ, ಸಮಯಪ್ರಜ್ಞೆಯಿಂದ ನಿರ್ಣಾಯಕ ಕ್ರಮವನ್ನು ಕೈಗೊಂಡಿರುವ ಸಿಬ್ಬಂದಿಯನ್ನು ಗುರುತಿಸಿ, ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (ಕೆಆರ್‌ಸಿಎಲ್) ನ ಸಿಎಂಡಿ ಸಂತೋಷ್ ಕುಮಾರ್ ಝಾ ಅವರು ಪ್ರತಿ ಸಿಬ್ಬಂದಿ ಸದಸ್ಯರಿಗೆ 15,000 ರೂ. ನೀಡಿದರು. ಬಾರ್ಕೂರು-ಉಡುಪಿ ವಿಭಾಗದ ನಡುವೆ ಬರುತ್ತಿದ್ದಾಗ ಲೊಕೊ

ಭಾರೀ ಅನಾಹುತ ತಪ್ಪಿಸಿದ ರೈಲ್ವೇ ಸಿಬ್ಬಂದಿಗೆ ಮೆಚ್ಚುಗೆ ನಗದು ಬಹುಮಾನ ಘೋಷಣೆ Read More »

ಕರಾವಳಿ, ಕರ್ನಾಟಕ

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಉಡುಪಿ, ಜು.24. ದ್ವಿತೀಯ ಪಿಯುಸಿ ಓದುತ್ತಿದ್ದ ಯುವತಿಯೋರ್ವಳು ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ಸಂಭವಿಸಿದೆ.  ಮೃತ ಯುವತಿಯನ್ನು ನಯನಾ (17) ಎಂದು ಗುರುತಿಸಲಾಗಿದೆ. ನಯನಾ ವೈಯಕ್ತಿಕ ಸಮಸ್ಯೆಗಳಿಂದ ಮಾನಸಿಕವಾಗಿ ನೊಂದು ಫ್ಯಾನ್‌ ಗೆ ಚೂಡಿದಾರ್ ಕಟ್ಟಿಕೊಂಡು ಮನೆಯ ಮಹಡಿಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.  

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ವಾರಿಸುದಾರರಿಲ್ಲದ ಶವ ಸಂಸ್ಕಾರ 

(ನ್ಯೂಸ್ ಕಡಬ)newskadaba.com ಉಡುಪಿ, ಜು.24. 4 ವರ್ಷಗಳಿಂದ ಹೊಸಬೆಳಕು ಆಶ್ರಮದಲ್ಲಿ ಆಶ್ರಯ ಪಡೆದ ವೃದ್ಧರು ನಿಧನ ಹೊಂದಿದ್ದು, ಸಂಬಂಧಿಕರ ಪತ್ತೆಯಾಗದೆ ಇರುವುದರಿಂದ ವಿಶು ಶೆಟ್ಟಿಯವರು ವೃದ್ಧರ ಶವ ಸಂಸ್ಕಾರವನ್ನು ಬೀಡಿನ ಗುಡ್ಡೆ ರುದ್ರ ಭೂಮಿಯಲ್ಲಿ ನೆರವೇರಿಸಿದರು ಎನ್ನಲಾಗಿದೆ. ಮೃತರನ್ನು ವೃದ್ಧ ನಾಗಪ್ಪ ನಾಡಾರ್(85) ಎಂದು ಗುರುತಿಸಲಾಗಿದೆ. ಸಂಬಂಧಿಕರ ಪತ್ತೆಗೆ ಮಾಧ್ಯಮ ಪ್ರಕಟಣೆ ನೀಡಿದರೂ ಸಂಬಂಧಿಕರು ಪತ್ತೆ ಆಗಲಿಲ್ಲ. ಶವ ಸಂಸ್ಕಾರದಲ್ಲಿ ಆಶ್ರಮದ ಮುಖ್ಯಸ್ಥರಾದ ಶ್ರೀಮತಿ ತನುಲ ಹಾಗೂ ಆಶ್ರಮ ವಾಸಿಗಳು ಸಹಕರಿಸಿದರು. ಅಂಬಲಪಾಡಿ ಕೃಷ್ಣ ರವರು ಜೆ

ಉಡುಪಿ: ವಾರಿಸುದಾರರಿಲ್ಲದ ಶವ ಸಂಸ್ಕಾರ  Read More »

ಕರಾವಳಿ

ಮರ ಉರುಳಿ ಬಿದ್ದು ರಿಕ್ಷಾ ಜಖಂ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಕಾರ್ಕಳ, ಜು.23. ಮಾವಿನ ಮರವೊಂದು ಧರೆಗುರುಳಿದ  ಪರಿಣಾಮ ರಿಕ್ಷಾ ಸಂಪೂರ್ಣ ಹಾನಿಗೊಳಗಾಗಿದ್ದರೂ ಚಾಲಕ ಪ್ರಾಣ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಭಾರೀ ಮಳೆಗೆ ಮರವೊಂದು ಉರುಳಿ ಬಿದ್ದ ಘಟನೆ ಕಾರ್ಕಳ ವಿಸ್ತೃತ ಬಸ್ ನಿಲ್ದಾಣದ ಪರಿಸರದಲ್ಲಿ ಸಂಭವಿಸಿದೆ. ಸಂಜೆ 4ರ ವೇಳೆಗೆ ಈ ಘಟನೆಯಲ್ಲಿ ರಿಕ್ಷಾವೊಂದು ಹಾನಿಗೊಳಗಾಗಿದೆ ಎಂದು ವರದಿಯಾಗಿದೆ.

ಮರ ಉರುಳಿ ಬಿದ್ದು ರಿಕ್ಷಾ ಜಖಂ ಚಾಲಕ ಅಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್

8 ಮಂದಿಗೆ ಕಚ್ಚಿದ ಹುಚ್ಚು ನಾಯಿ   ಹಲವರಿಗೆ ಗಾಯ….!

(ನ್ಯೂಸ್ ಕಡಬ)newskadaba.com ಉಡುಪಿ, ಜು.22. ಹುಚ್ಚು ನಾಯಿಯೊಂದು ಎಂಟು ಮಂದಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ಉಡುಪಿಯಲ್ಲಿ ಸಂಭವಿಸಿದೆ. ತೀರಾ ಬಸವಳಿದ ಸ್ಥಿತಿಯಲ್ಲಿದ್ದ ಈ ನಾಯಿಯು ರಸ್ತೆಯಲ್ಲಿ ಹೋಗುವಾಗ ಎದುರಿಗೆ ಸಿಕ್ಕಿದವರೆಲ್ಲರಿಗೂ ಕಚ್ಚಿಕೊಂಡು ಹೋಗಿದ್ದು, ಕೆಲವರ ಕಾಲಿನ ಮಾಂಸ ಕೂಡ ಕಚ್ಚಿ ತಿಂದಿದೆ ಎನ್ನಲಾಗಿದೆ. ಗಾಯಗೊಂಡ ಎಲ್ಲರು ಉಡುಪಿ ಜಿಲ್ಲಾಸ್ಪತ್ರೆಗೆ ತೆರಳಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.  

8 ಮಂದಿಗೆ ಕಚ್ಚಿದ ಹುಚ್ಚು ನಾಯಿ   ಹಲವರಿಗೆ ಗಾಯ….! Read More »

ಕರಾವಳಿ

ಶಾಲಾ ವಾಹನ ಮತ್ತು ರಿಕ್ಷಾ ನಡುವೆ ಮುಖಾಮುಖಿ ಢಿಕ್ಕಿ

(ನ್ಯೂಸ್ ಕಡಬ)newskadaba.com ಉಡುಪಿ, ಆ.10. ಶಾಲಾ ವಾಹನ ಹಾಗೂ ಶಾಲಾ ಮಕ್ಕಳನ್ನು ಕೊಂಡೊಯುತ್ತಿದ್ದ ರಿಕ್ಷಾದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ರಿಕ್ಷಾದಲ್ಲಿದ್ದ 5 ಮಕ್ಕಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಶಿರ್ವ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ.

ಶಾಲಾ ವಾಹನ ಮತ್ತು ರಿಕ್ಷಾ ನಡುವೆ ಮುಖಾಮುಖಿ ಢಿಕ್ಕಿ Read More »

ಕರಾವಳಿ
Scroll to Top