Udupi

ಉಡುಪಿ: ಮೂರು ದಿನಗಳ ಮಲ್ಪೆ ಬೀಚ್ ಉತ್ಸವಕ್ಕೆ ವಿಧ್ಯುಕ್ತ ಚಾಲನೆ !

(ನ್ಯೂಸ್ ಕಡಬ)newskadaba.com  ಉಡುಪಿ, ಜ. 21. ಮುಂದಿನ ಪೀಳಿಗೆಗೆ ಅಭಿವೃದ್ಧಿ ಹೊಂದಿದ ಉಡುಪಿ ಜಿಲ್ಲೆಯನ್ನು ನೀಡುವ ಜವಾಬ್ದಾರಿ ಎಲ್ಲರ ಮೇಲಿದೆ. ದೂರದೃಷ್ಟಿಯ ಯೋಜನೆಗಳಿಂದ ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡ್ಯೊಯ್ಯಲು ಸಾಧ್ಯ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು. ಮಲ್ಪೆ ಬೀಚ್ ನಲ್ಲಿ , ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಜತ ಉಡುಪಿ- ಬೀಚ್ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ […]

ಉಡುಪಿ: ಮೂರು ದಿನಗಳ ಮಲ್ಪೆ ಬೀಚ್ ಉತ್ಸವಕ್ಕೆ ವಿಧ್ಯುಕ್ತ ಚಾಲನೆ ! Read More »

ಕರಾವಳಿ

ಉಡುಪಿ: ಬೈಕ್ ಮತ್ತು ಲಾರಿ ನಡುವೆ ಮುಖಾಮುಖಿ ಢಿಕ್ಕಿ ➤ ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲೇ ಮೃತ್ಯು..!                                                

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಜ.18. ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66ರ ಪೆಟ್ರೋಲ್ ಬಂಕ್ ವೊಂದರ ಬಳಿ ನಡೆದಿದೆ. ಶಿವಮೊಗ್ಗ ನಿವಾಸಿ ಸಮಿತ್ ಕುಮಾರ್ (19) ಹಾಗೂ ಸಾಲಿಗ್ರಾಂ ಚಿತ್ರಪಾಡಿ ನಿವಾಸಿ ವಾಗೀಶ್(19) ಮೃತರು ಎಂದು ಗುರುತಿಸಲಾಗಿದೆ. ಇವರು ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಇವರು ಕಾಲೇಜು ಮುಗಿಸಿ ರಾತ್ರಿ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಎದುರಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ

ಉಡುಪಿ: ಬೈಕ್ ಮತ್ತು ಲಾರಿ ನಡುವೆ ಮುಖಾಮುಖಿ ಢಿಕ್ಕಿ ➤ ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲೇ ಮೃತ್ಯು..!                                                 Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಹಕಾರ ಭಾರತಿ ವತಿಯಿಂದ ಜ.19ರಂದು ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ)newskadaba.com  ಉಡುಪಿ, ಜ.16. ಹಾಲಿನ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ರೈತರು ಸೊಸೈಟಿಗಳಿಗೆ ನೀಡುವ ಹಾಲಿನ ದರವನ್ನು ಹೆಚ್ಚಿಸಬೇಕು ಮತ್ತು ನಂದಿನಿ ಪಶು ಆಹಾರ ಖರೀದಿಗೆ ಸಬ್ಡಿಡಿ ರೂಪದಲ್ಲಿ ರಾಜ್ಯ ಬಜೆಟ್ ನಲ್ಲಿ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಸಹಕಾರ ಭಾರತಿ ಉಡುಪಿ ಜಿಲ್ಲಾ ಘಟಕ ಆಗ್ರಹಿಸಿದೆ. ಈ ಕುರಿತು ಉಡುಪಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷರಾದ ಬೋಳ ಸದಾಶಿವ ಶೆಟ್ಟಿಯವರು‌ “ಕಳೆದ ಅಕ್ಟೋಬರ್ 27ರಂದು ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಬೃಹತ್ ರೈತ ಸಮಾವೇಶ

ಸಹಕಾರ ಭಾರತಿ ವತಿಯಿಂದ ಜ.19ರಂದು ಬೃಹತ್ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಯೂಟ್ಯೂಬ್ ವಿಡಿಯೋ ಪ್ರಯೋಗ ಮಾಡಲು ಹೋಗಿ ಬಾಲಕಿ ಆತ್ಮಹತ್ಯೆ..??

(ನ್ಯೂಸ್ ಕಡಬ) newskadaba.com ಉಡುಪಿ, ಜ. 16. ವಿದ್ಯಾರ್ಥಿನಿಯೋರ್ವಳು ಯೂಟ್ಯೂಬ್ ನೋಡಿ ಪ್ರಯೋಗ ಮಾಡುತ್ತಿದ್ದ ವೇಳೆ ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಉಡುಪಿಯ ಬ್ರಹ್ಮಗಿರಿಯ ಪ್ರವೀಣ್ ಶೆಟ್ಟಿ ಎಂಬವರ ಪುತ್ರಿ ಮಂಗಳಾದೇವಿ(11) ಎಂದು ಗುರುತಿಸಲಾಗಿದೆ. 6ನೇ ತರಗತಿಯಲ್ಲಿ ಓದುತ್ತಿದ್ದ ಈಕೆ ಯೂಟ್ಯೂಬ್ ನಲ್ಲಿ ಬರುವ ವಿಡಿಯೋಗಳನ್ನು ನೋಡಿ ಅದನ್ನು ಪ್ರಯೋಗ ಮಾಡುವ ಅಭ್ಯಾಸ ಬೆಳೆಸಿಕೊಂಡಿದ್ದಳು. ಅದರಂತೆ ಬಾತ್ರೂಮ್ ನಲ್ಲಿ ಬಟ್ಟೆ ಕಟ್ಟಿ ಯಾವುದೋ ಪ್ರಯೋಗ ಮಾಡುವ ವೇಳೆ ಕುತ್ತಿಗೆಗೆ ಬಟ್ಟೆ ಬಿಗಿದುಕೊಂಡು ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಯೂಟ್ಯೂಬ್ ವಿಡಿಯೋ ಪ್ರಯೋಗ ಮಾಡಲು ಹೋಗಿ ಬಾಲಕಿ ಆತ್ಮಹತ್ಯೆ..?? Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಅಡಿಕೆ ಕೀಳುವ ಸಮಯದಲ್ಲಿ ಮುರಿದು ಬಿದ್ದ ಮರ…!! ➤ ವ್ಯಕ್ತಿಯೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com  ಉಡುಪಿ, ಜ..16. ಅಡಿಕೆ ಕೀಳುತ್ತಿದ್ದ ವ್ಯಕ್ತಿಯೊಬ್ಬರು ಮರ ಮುರಿದು ನೆಲಕ್ಕೆ ಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ನಗರದ ಬಸ್ ನಿಲ್ದಾಣದ ಸಮೀಪದ ಮತ್ತದಬೆಟ್ಟು ನಿವಾಸಿ ಶ್ಯಾಮ್ ಅಂಚನ್ (59) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಶ್ಯಾಮ್ ಅವರು ಮರದಿಂದ ಅಡಿಕೆ ಕೀಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬಳಿಕ ಮೃತಪಟ್ಟರು. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಇವರು ಪರ್ಕಳದಲ್ಲಿ ಪಾಲುದಾರಿಕೆಯಲ್ಲಿ ಬೇಕರಿ ನಡೆಸುತ್ತಿದ್ದರು

ಉಡುಪಿ: ಅಡಿಕೆ ಕೀಳುವ ಸಮಯದಲ್ಲಿ ಮುರಿದು ಬಿದ್ದ ಮರ…!! ➤ ವ್ಯಕ್ತಿಯೋರ್ವ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಉಡುಪಿ: ಮಾದಕ ವಸ್ತು ಗಾಂಜಾದೊಂದಿಗೆ ದರೋಡೆಗೆ ಸಂಚು..! ➤ ನಾಲ್ವರ ಬಂಧನ……

(ನ್ಯೂಸ್ ಕಡಬ)newskadaba.com ಉಡುಪಿ, ಜ.15. ಮಾದಕ ವಸ್ತು ಗಾಂಜಾದೊಂದಿಗೆ ದರೋಡೆಗೆ ಸಂಚು ರೂಪಿಸುತ್ತಿದ್ದ ನಾಲ್ವರನ್ನು ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ವಿ.ಪಿ ನಗರದ 3ನೇ ಮುಖ್ಯ ರಸ್ತೆಯ ಬಳಿಯಿಂದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮುಝಾಮಿಲ್ (27), ಮೊಹಮ್ಮದ್ ಅನಾಜ್ ಸಾಹೇಬ್ (25), ಮೊಹಮ್ಮದ್ ರಪೀಕ್ (26), ನಿಯಾಲ್ (19) ಪೊಲೀಸರು ವಶಕ್ಕೆ ಪಡೆದ ಆರೋಪಿಗಳು. ಪೊಲೀಸರ ದಾಳಿ ವೇಳೆ ರಾಕೀಬ್ ಎಂಬಾತ ಪರಾರಿಯಾಗಿದ್ದಾನೆ ಎಂದು ವರದಿ ತಿಳಿಸಿದೆ. ಖಚಿತ ಮಾಹಿತಿ ಪಡೆದ ಮಣಿಪಾಲ ಠಾಣೆ ಪೊಲೀಸರು, ವಾಸ್ತವ್ಯ

ಉಡುಪಿ: ಮಾದಕ ವಸ್ತು ಗಾಂಜಾದೊಂದಿಗೆ ದರೋಡೆಗೆ ಸಂಚು..! ➤ ನಾಲ್ವರ ಬಂಧನ…… Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಉಡುಪಿ: ಎರಡು ಪ್ರತ್ಯೇಕ ಗಾಂಜಾ ಪ್ರಕರಣ..! ➤ ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com  ಮಣಿಪಾಲ, ಜ.09. ಗಾಂಜಾ ಸೇವನೆಯ ಎರಡು ಪ್ರಕರಣದಲ್ಲಿ ಇಬ್ಬರು ಯುವಕರನ್ನು ಉಡುಪಿ ಪಬ್ ಒಂದರ ಬಳಿ ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದರು ಎನ್ನಲಾಗಿದೆ. ಪ್ರಕರಣವೊಂದರಲ್ಲಿ ಉಡುಪಿಯ ಚಿಟ್ಟಾಡಿಯ ಫರೇಶ್(20) ಹಾಗೂ ಮತ್ತೊಂದು ಪ್ರಕರಣದಲ್ಲಿ ಉಡುಪಿ ಒಳಕಾಡುವಿನ ಪ್ರತೀಕ್(22) ಎಂಬವರ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ವೈದ್ಯಕೀಯ ವರದಿಯಲ್ಲಿ ಗಾಂಜಾ ಸೇವನೆ ಧೃಢವಾಗಿದೆ ಎಂದು ವರದಿ ತಿಳಿಸಿದೆ.  

ಉಡುಪಿ: ಎರಡು ಪ್ರತ್ಯೇಕ ಗಾಂಜಾ ಪ್ರಕರಣ..! ➤ ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Crime

ಉಡುಪಿ: ಅಕ್ರಮ ಕಸಾಯಿ ಖಾನೆಗೆ ಪೊಲೀಸರ ದಾಳಿ ➤ ಇಬ್ಬರು ಆರೋಪಿಗಳು ಪರಾರಿ

(ನ್ಯೂಸ್ ಕಡಬ)newskadaba.com ಕಾಪು, ಜ.09. ಮಲ್ಲಾರು ಗ್ರಾಮದ ಬಡಗರ ಗುತ್ತು ಎಂಬಲ್ಲಿನ ಅಕ್ರಮ ಕಸಾಯಿ ಖಾನೆಗೆ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಮಲ್ಲಾರು ಗ್ರಾಮದ ಬಡಗರ ಗುತ್ತು ಎಂಬಲ್ಲಿಗೆ ತಲುಪಿ ಅಲ್ಲಿನ ಫ್ಯಾಕ್ಟರಿಯ ಸಮೀಪ ಮರೆಯಲ್ಲಿ ನಿಂತು ನೋಡಿದಾಗಿ ಹಿಂಭಾಗದ ಹಾದಿಯಲ್ಲಿ ಇಬ್ಬರು ವ್ಯಕ್ತಿಗಳು ಸೇರಿಕೊಂಡು ದನದ ಮಾಂಸವನ್ನು ಕಟಾವು ಮಾಡುತ್ತಿರುವುದು ಕಮಡುಬಂದಿದೆ ಎನ್ನಲಾಗಿದೆ. ಈ ವೇಳೆ ಮೊಹಮ್ಮದ್ ಆರೀಫ್ ಹಾಗೂ ಇನ್ನೋರ್ವ ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ ಸುಮಾರು 200

ಉಡುಪಿ: ಅಕ್ರಮ ಕಸಾಯಿ ಖಾನೆಗೆ ಪೊಲೀಸರ ದಾಳಿ ➤ ಇಬ್ಬರು ಆರೋಪಿಗಳು ಪರಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಂತಾರ ಹೋಲುವ ಘಟನೆ ➤  ಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಉಡುಪಿ, ಜ.07. ಕಾಂತಾರ ಸಿನಿಮಾ ಎಲ್ಲರನ್ನೂ ನಿಬ್ಬೆರಗುಗೊಳಿಸಿದ್ದು ಮಾತ್ರವಲ್ಲದೆ, ಕರ್ನಾಟಕದ ಕರಾವಳಿಯ ಸಂಸ್ಕೃತಿಯನ್ನು ದೇಶ ವಿದೇಶಗಳಲ್ಲಿ ಪಸರಿಸುವಂತೆ ಮಾಡಿದ್ದು ಸುಳ್ಳಲ್ಲ. ಇದರಲ್ಲಿ ಕಂಡು ಬಂದ ಅದೆಷ್ಟೋ ದೃಶ್ಯಗಳು ನೈಜತೆಗೆ ಹಿಡಿದ ಕೈಗನ್ನಡಿ ಎನ್ನಬಹುದು. ದೈವ-ದೇವರ ಮೇಲಿನ ನಂಬಿಕೆ ಇಲ್ಲಿನ ಜನರನ್ನು ಯಾವ ರೀತಿ ಕಾಪಾಡಿಕೊಂಡು ಬಂದಿದೆ ಎಂಬುದನ್ನು ಸಿನಿಮಾದಲ್ಲಿ ಅಚ್ಚುಕಟ್ಟಾಗಿ ಬಿಂಬಿಸಲಾಗಿದೆ ಎನ್ನಲಾಗಿದೆ. ಇದೀಗ ಕಾಂತಾರ ಸಿನಿಮಾದಲ್ಲಿ ಕಂಡುಬಂದ ದೃಶ್ಯವೊಂದು ನಿಜವಾಗಿದ್ದು, ಈ ಸುದ್ದಿ ಭಾರೀ ವೈರಲ್ ಆಗುತ್ತಿದೆ. ಕಾಂತಾರ ಸಿನಿಮಾದಲ್ಲಿ ಅನಾವರಣಗೊಂಡ ದೈವ

ಕಾಂತಾರ ಹೋಲುವ ಘಟನೆ ➤  ಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದ.ಕ. ಮತ್ತು ಉಡುಪಿ ಜಿಲ್ಲೆಗಳು ಹಿಂದುತ್ವದ ಫ್ಯಾಕ್ಟರಿಗಳಾಗಿ ಬಿಟ್ಟಿವೆ ➤  ಸಿದ್ದರಾಮಯ್ಯ ಆರೋಪ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 06. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ವಿಧಾನಸಭೆ ಕ್ಷೇತ್ರದ ಹರೇಕಳದಲ್ಲಿ ಆಯೋಜಿಸಿದ್ದ ಜನ ಜಾಗೃತಿ ಸಮಾವೇಶದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪಾಲ್ಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಾಡಿಗೆ ದ್ರೋಹ ಬಗೆಯುತ್ತಿವೆ ಎಂದು ಆರೋಪಿಸಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಹಿಂದುತ್ವದ ಫ್ಯಾಕ್ಟರಿಗಳಾಗಿವೆ. ಕೋಮುವಾದ ಹುಟ್ಟಿರುವುದೇ ದ.ಕ ಜಿಲ್ಲೆಯಲ್ಲಿ. ಕೋಮುವಾದ ಬೆಳೆಸಲು ಮಂಗಳೂರನ್ನು ಪ್ರಯೋಗಾಲಯ ರೀತಿ ಬಳಸಿಕೊಳ್ಳಲಾಗುತ್ತಿದೆ ಎಂದು ಸರಕಾರದ ವಿರುದ್ಧ ಅವರು ಆರೋಪಿಸಿದ್ದಾರೆ.

ದ.ಕ. ಮತ್ತು ಉಡುಪಿ ಜಿಲ್ಲೆಗಳು ಹಿಂದುತ್ವದ ಫ್ಯಾಕ್ಟರಿಗಳಾಗಿ ಬಿಟ್ಟಿವೆ ➤  ಸಿದ್ದರಾಮಯ್ಯ ಆರೋಪ Read More »

ಕರಾವಳಿ, ಕರ್ನಾಟಕ
Scroll to Top