Udupi

ಶಿರ್ವ: ಗಾಂಜಾ ಮಾರಾಟ ➤ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಶಿರ್ವ, ಜ. 07. ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನೋರ್ವನನ್ನು ಬಂಧಿಸಿದ ಘಟನೆ ಶಿರ್ವದಲ್ಲಿ ನಡೆದಿದೆ. ಆರೋಪಿಯನ್ನು ಒರಿಸ್ಸಾ ಮೂಲದ ಬಡಾನಿಡಿಯೂರಿನ ಸಾಗರ್ (22) ಎಂದು ಗುರುತಿಸಲಾಗಿದೆ. ಈತನಿಂದ ಸುಮಾರು 32,000 ಸಾವಿರ ರೂ. ಮೌಲ್ಯದ ಒಂದು ಕೆ.ಜಿ 100 ಗ್ರಾಂ. ಗಾಂಜಾ, 7 ಪ್ಲಾಸ್ಟಿಕ್ ತೊಟ್ಟೆಗಳು, 1200 ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ ಬೈಕ್ ಮತ್ತು ಮೊಬೈಲ್ ಫೋನನ್ನು ವಶಪಡಿಸಿಕೊಳ್ಳಾಗಿದೆ. ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿರ್ವ: ಗಾಂಜಾ ಮಾರಾಟ ➤ ಯುವಕನ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ವೃತ್ತನಿರೀಕ್ಷಕರ ಹೆಸರಿನಲ್ಲಿ ನಕಲಿ ಫೇಸ್-ಬುಕ್ ಖಾತೆ ➤ ಹಣ ಕಳುಹಿಸುವಂತೆ ಸಂದೇಶ ರವಾನೆ

(ನ್ಯೂಸ್ ಕಡಬ) newskadaba.com ಉಡುಪಿ, ಜ. 05. ಅಪರಿಚಿತ ವ್ಯಕ್ತಿಯೋರ್ವ ಉಡುಪಿ ವೃತ್ತ ನಿರೀಕ್ಷಕರ ಹೆಸರಿನಲ್ಲಿ ನಕಲಿ ಫೇಸ್‌ ಬುಕ್ ಖಾತೆಯನ್ನು ರಚಿಸಿ ಅವರ ಸ್ನೇಹಿತರಲ್ಲಿ ಹಣ ಕಳುಹಿಸುವಂತೆ ಸಂದೇಶ ರವಾನೆ ಮಾಡಿದ ಘಟನೆ ನಡೆದಿದೆ.   ಈ ಕುರಿತು ಮಾಹಿತಿ ತಿಳಿದ ವೃತ್ತ ನಿರೀಕ್ಷಕ ಮಂಜುನಾಥ್ ಅವರು ಉಡುಪಿಯ ಸಿಇಎನ್, ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಉಡುಪಿ: ವೃತ್ತನಿರೀಕ್ಷಕರ ಹೆಸರಿನಲ್ಲಿ ನಕಲಿ ಫೇಸ್-ಬುಕ್ ಖಾತೆ ➤ ಹಣ ಕಳುಹಿಸುವಂತೆ ಸಂದೇಶ ರವಾನೆ Read More »

ಕರಾವಳಿ, ಕರ್ನಾಟಕ

ನಾವುಂದ :ಸರ್ಕಲ್ ಇನ್ಸ್ ಪೆಕ್ಟರ್ ರವರ ಮಿಂಚಿನ ಕಾರ್ಯಾಚರಣೆ ➤13 ಗೋವು ರಕ್ಷಣೆ,ಓರ್ವ ಗೋಕಳ್ಳನ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.26: ಬೈಂದೂರು ತಾಲೂಕಿನ ನಾವುಂದದಲ್ಲಿ ಗೋ ಕಳ್ಳನೊಬ್ಬನನ್ನು ಬಂಧಿಸಿ, 13 ಗೋವುಗಳನ್ನು ರಕ್ಷಿಸಲಾಗಿದೆ. ಬೈಂದೂರು ಸರ್ಕಲ್ ಇನ್ಸ್ ಪೆಕ್ಟರ್ ಸಂತೋಷ್ ಕಾಯ್ಕಿಣಿ ಮಿಂಚಿನ ಕಾರ್ಯಾಚರಣೆ ಮೂಲಕ 13 ಗೋವು ರಕ್ಷಣೆ ಮಾಡುವಲ್ಲಿ ಸಫಲರಾಗಿದ್ದಾರೆ. ನಾವುಂದದಿಂದ ಜಲೀಲ್ ಎಂಬ ಗೋ ಕಳ್ಳನ ಗ್ಯಾಂಗ್, ಇನ್ಸು ಲೇಟರ್ ನಲ್ಲಿ ಹಲವು ದಿನಗಳಿಂದ ಅಕ್ರಮವಾಗಿ ಗೋ ಕಳ್ಳ ಸಾಗಣೆ ಮಾಡುತ್ತಿರುವ ಬಗ್ಗೆ ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಮಾಹಿತಿ ಇತ್ತು.. ಒಂದು ತಿಂಗಳ ನಿರಂತರ ಈ ಬಗ್ಗೆ

ನಾವುಂದ :ಸರ್ಕಲ್ ಇನ್ಸ್ ಪೆಕ್ಟರ್ ರವರ ಮಿಂಚಿನ ಕಾರ್ಯಾಚರಣೆ ➤13 ಗೋವು ರಕ್ಷಣೆ,ಓರ್ವ ಗೋಕಳ್ಳನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಜ್ವರ, ಶೀತ, ನೆಗಡಿ ರೋಗಗಳಿಗೆ ಔಷಧಿ ಪಡೆಯುವವರ ಮಾಹಿತಿ ನೀಡಿ ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24: ಖಾಸಗಿ, ಸರ್ಕಾರಿ ಆಸ್ಪತ್ರೆ, ಕ್ಲಿನಿಕ್ ಹಾಗೂ ಮೆಡಿಕಲ್ ಅಂಗಡಿಗಳಲ್ಲಿ ಜ್ವರ, ಶೀತ, ನೆಗಡಿ ರೋಗಗಳಿಗೆ ಔಷಧಿ ಪಡೆಯುವವರ ಮಾಹಿತಿಯನ್ನು ಕಡ್ಡಾಯವಾಗಿ ಜಿಲ್ಲಾಡಳಿತಕ್ಕೆ ನೀಡಬೇಕೆಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚಿಸಿದರು. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್-19 ಲಸಿಕೆಯ ಪೂರ್ವ ತಯಾರಿ ಮತ್ತು 2021 ರ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಾಗೂ ರೂಪಾಂತರಿತ ಹೊಸ ಕೊರೋನಾ ರೋಗಗದ ಕುರಿತು ಜಿಲ್ಲಾ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ

ಜ್ವರ, ಶೀತ, ನೆಗಡಿ ರೋಗಗಳಿಗೆ ಔಷಧಿ ಪಡೆಯುವವರ ಮಾಹಿತಿ ನೀಡಿ ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ Read More »

ಕರಾವಳಿ

ಗ್ರಾಪಂ ಚುನಾವಣೆ ➤ ಕುಟುಂಬದೊಂದಿಗೆ ಬಂದು ಮತದಾನ ಮಾಡಿದ ಸಚಿವ ಕೋಟ ಶ್ರೀನಿವಾಸ್ ಪೂಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಗ್ರಾಮೀಣ ಉಡುಪಿಯಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಮೊದಲ ಹಂತದ ಮತದಾನದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನಲ್ಲೂ ಮತದಾನ ನಡೆದಿದೆ. ರಾಜ್ಯ ಮುಜರಾಯಿ, ಮೀನುಗಾರಿಕೆ, ಬಂದರು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಕೋಟತಟ್ಟು ಗ್ರಾಮ ಪಂಚಾಯಿತಿ ನಿವಾಸಿಯಾಗಿದ್ದು ಮತದಾನ ಮಾಡಿದ್ದಾರೆ.ಹುಟ್ಟೂರು ಕೋಟತಟ್ಟುವಿನ ಮತಕೇಂದ್ರದಲ್ಲಿ ಪತ್ನಿ ಶಾಂತ ಹಾಗೂ ಪುತ್ರಿಯರಾದ ಸ್ವಾತಿ, ಶ್ರುತಿಯ ಜತೆ ಆಗಮಿಸಿ ಮತದಾನ ಮಾಡಿದರು. ಈ ವೇಳೆ ಮಾತನಾಡಿ, ಗ್ರಾಮ ಪಂಚಾಯತಿ ಚುನಾವಣೆ ಅಂದರೆ ಆಳಿಸಿಕೊಳ್ಳುವವರ ಆಡಳಿತ. ಪಂಚಾಯತ್

ಗ್ರಾಪಂ ಚುನಾವಣೆ ➤ ಕುಟುಂಬದೊಂದಿಗೆ ಬಂದು ಮತದಾನ ಮಾಡಿದ ಸಚಿವ ಕೋಟ ಶ್ರೀನಿವಾಸ್ ಪೂಜಾರಿ Read More »

ಕರಾವಳಿ, ಕರ್ನಾಟಕ

ಕಾಲಿಗೆ ಸರಪಳಿ ಬಿಗಿದು ಪದ್ಮಾಸನ ಭಂಗಿಯಲ್ಲಿ ಈಜಾಟ ➤ ಹೊಸ ದಾಖಲೆ ಬರೆದ ಶಿಕ್ಷಕ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸಹಿತ ಬೀಗ ಹಾಕಿಕೊಂಡು ಸಮುದ್ರದಲ್ಲಿ ಒಂದು ಕಿ.ಮೀ. ಈಜಿದ ಶಿಕ್ಷಕ ನಾಗರಾಜ್ ಖಾರ್ವಿಯವರು ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಬರೆದಿದ್ದಾರೆ.ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕುಂಚುಗೋಡು ನಿವಾಸಿಯಾಗಿರುವ ನಾಗರಾಜ ಖಾರ್ವಿಯವರು ಬಂಟ್ವಾಳ ತಾಲೂಕಿನ ಕಲ್ಮಂಜದ ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ಪದವೀಧರ ಶಿಕ್ಷಕರಾಗಿದ್ದಾರೆ.   ಈಜಿನ ಮೂಲಕ ಹಲವಾರು ಸಾಹಸವನ್ನು ಮಾಡಿರುವ ಶಿಕ್ಷಕ ನಾಗರಾಜ ಖಾರ್ವಿಯವರು ತಣ್ಣೀರು ಬಾವಿಯ ಅರಬ್ಬಿ ಸಮುದ್ರದಲ್ಲಿ ಶುಕ್ರವಾರ ಬೆಳಗ್ಗೆ

ಕಾಲಿಗೆ ಸರಪಳಿ ಬಿಗಿದು ಪದ್ಮಾಸನ ಭಂಗಿಯಲ್ಲಿ ಈಜಾಟ ➤ ಹೊಸ ದಾಖಲೆ ಬರೆದ ಶಿಕ್ಷಕ Read More »

ಕರಾವಳಿ

ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದ ದರೋಡೆ ಪ್ರಕರಣ ➤ ತನಿಖೆ ಎರಡು ತಂಡ ರಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23:  ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ದರೋಡೆಕೋರರ ಪತ್ತೆಗೆ 2ತಂಡಗಳನ್ನು ರಚಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಹೇಳಿದ್ದಾರೆ .   ಮಂಗಳೂರಿನಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಇದು ಏಳರಿಂದ ಎಂಡು ಮಂದಿ ಮುಸುಕುಧಾರಿಗಳು ನಡೆಸಿರುವ ಕೃತ್ಯವಾಗಿದ್ದು ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದರು . ದರೋಡೆ ಸಂದರ್ಭ ಚೂರಿ ಇರಿತಕ್ಕೊಳಗಾದ ಗೀತಾ ಶೆಟ್ಟಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಠಾಣಾ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ

ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದ ದರೋಡೆ ಪ್ರಕರಣ ➤ ತನಿಖೆ ಎರಡು ತಂಡ ರಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಇಲ್ಲ : ಸಿಎಂ ಬಿಎಸ್​ವೈ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.22: ಕೊರೊನಾ ಕಾರಣಕ್ಕೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಬಗ್ಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಮಾಡಲ್ಲ. ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ.   ಕೊರೊನಾ ರೂಪಾಂತರ ಜನರನ್ನು ಆತಂಕಕ್ಕೀಡು ಮಾಡಿದ್ದು, ಬೆಂಗಳೂರಿನಲ್ಲಿ ಹೊಸ ವರ್ಷದಂದು ದೊಡ್ಡ ಪ್ರಮಾಣದಲ್ಲಿ ಆಚರಣೆ ಮಾಡಲು ಅವಕಾಶ ನೀಡಲ್ಲ ಎಂದು ಹೇಳಿದ್ದಾರೆ.ವಿದೇಶಗಳಿಂದ ಬರುವ ಪ್ರಯಾಣಿಕರನ್ನು ತಪಾಸಣೆ ಮಾಡಲಾಗುವುದು. ಮುಂಬೈ ಮಾದರಿಯಲ್ಲಿ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಮಾಡಲ್ಲ ಎಂದು

ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಇಲ್ಲ : ಸಿಎಂ ಬಿಎಸ್​ವೈ Read More »

ಕರಾವಳಿ

ಬಾಲಕನ ಅಪಹರಣ ಪ್ರಕರಣ ➤ ಜಿಲ್ಲಾ ಎಸ್ಪಿ ನೇತೃತ್ವದ ಪೊಲೀಸ್ ತಂಡಕ್ಕೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22: ಉಜಿರೆ ಬಾಲಕನ ಅಪಹರಣ ಪ್ರಕರಣವನ್ನು ಕೇವಲ ೩೩ ಗಂಟೆಯಲ್ಲೇ ಬೇಧಿಸಿ ಬಾಲಕನನ್ನು ರಕ್ಷಿಸಿ, ಆರೋಪಿಗಳನ್ನು ಬಂಧಿಸಿದ ದ.ಕ. ಜಿಲ್ಲಾ ಸ್ಪಿ ಲಕ್ಷ್ಮೀಪ್ರಸಾದ್ ನೇತೃತ್ವದ ಪೊಲೀಸ್ ತಂಡಕ್ಕೆ ಅಭಿನಂದಿಸುವ ಕಾರ್ಯಕ್ರಮವು ಸೋಮವಾರ ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ನಡೆಯಿತು. ಪೊಲೀಸ್ ತಂಡವನ್ನು ಅಭಿನಂದಿಸಿದ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬಾಲಕ ಅನುಭವ್ ಅಪಹರಣ ಜಿಲ್ಲೆಯ ಜನತೆಯ ಆತಂಕಕ್ಕೆ ಕಾರಣವಾಗಿತ್ತು. ಈ ಪ್ರಕರಣವನ್ನು ಬೇಧಿಸಲು ಪೊಲೀಸ್ ತಂಡ ಕರಾರುವಕ್ಕಾಗಿ, ಯೋಜನಾ ಬದ್ಧವಾಗಿ

ಬಾಲಕನ ಅಪಹರಣ ಪ್ರಕರಣ ➤ ಜಿಲ್ಲಾ ಎಸ್ಪಿ ನೇತೃತ್ವದ ಪೊಲೀಸ್ ತಂಡಕ್ಕೆ ಅಭಿನಂದನೆ Read More »

ಕರಾವಳಿ

ವಿಧಾನಪರಿಷತ್ ಘರ್ಷಣೆಗೆ ಕಾರಣದ ಬಗ್ಗೆ ಚರ್ಚೆಯಾಗಬೇಕು ➤ ಮಾಜಿ ಸಚಿವ ರಮಾನಾಥ ರೈ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17: ವಿಧಾನಪರಿಷತಲ್ಲಿ ಘರ್ಷಣೆ ಆರಂಭಕ್ಕೆ ಮೂಲ ಕಾರಣವೇನು? ಈ ಬಗ್ಗೆ ಚರ್ಚೆ ಆಗಬೇಕು ಎಂದು ಮಂಗಳೂರಿನಲ್ಲಿ ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.ವಿಧಾನಪರಿಷತ್ ಸಭೆಯಲ್ಲಿ ಕಾಂಗ್ರೆಸ್ -ಕಮಲ ಸದಸ್ಯರ ಘರ್ಷಣೆ ವಿಚಾರಕ್ಕೆ ಅವರು ಪ್ರತಿಕ್ರಿಯಿಸಿದ್ದಾರೆ. ಪ್ರೆಸ್ ಮೀಟ್ ಕರೆದು ಪತ್ರಕರ್ತರು ಬರದಂತೆ ಬಾಗಿಲು ಬಂದು ಮಾಡಿದ್ರೆ ಸರಿಯಾಗುತ್ತದೆಯೇ ಎಂದು ಪ್ರಶ್ನಿಸಿದ ಅವರು, ಹಾಗೆಯೇ ಸದನದ ಬಾಗಿಲು ಮುಚ್ಚಿ ಸಭಾಪತಿ ಬರದಂತೆ ತಡೆದದ್ದು ಸರಿಯಾಗುತ್ತಾ? ಎಂದರು. ಎಳೆದದ್ದು ಸರಿಯಾ? ಅನ್ನೋದಕ್ಕಿಂತಲೂ ಕೂತದ್ದು ಸರಿಯಾ?

ವಿಧಾನಪರಿಷತ್ ಘರ್ಷಣೆಗೆ ಕಾರಣದ ಬಗ್ಗೆ ಚರ್ಚೆಯಾಗಬೇಕು ➤ ಮಾಜಿ ಸಚಿವ ರಮಾನಾಥ ರೈ Read More »

ಕರಾವಳಿ
Scroll to Top