Udupi

ಉಡುಪಿ :ರಾಜ್ಯಪಾಲರನ್ನು ಭೇಟಿ ಮಾಡಿದ ಪೇಜಾವರ ಶ್ರೀ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.17: ಕರ್ನಾಟಕದ ರಾಜ್ಯಪಾಲ ವಾಜೂಭಾಯಿ ವಾಲಾರನ್ನು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ರಾಜಭವನದಲ್ಲಿ ಭೇಟಿಯಾದರು. ಅಯೋಧ್ಯೆ ರಾಮಮಂದಿರ ಕಾರ್ಯಕ್ಕೆ ಸಮಸ್ತರ ಬೆಂಬಲ, ಸಹಕಾರ ಅಪೇಕ್ಷಿಸಿ ದಕ್ಷಿಣ ರಾಜ್ಯಗಳ ಸಂಚಾರದಲ್ಲಿರುವ ಶ್ರೀಗಳು ನಾಡಿನ ಜನತೆಯ ಬೆಂಬಲಕ್ಕಾಗಿ ರಾಜ್ಯಪಾಲರಿಗೆ ಪತ್ರ ಅರ್ಪಿಸಿದರು. ಶ್ರೀಗಳವರನ್ನು ಬರಮಾಡಿಕೊಂಡು ಗೌರವ ಅರ್ಪಿಸಿದ ರಾಜ್ಯಪಾಲರು, ಸ್ವಲ್ಪ ಹೊತ್ತು ಸಮಾಲೋಚನೆ ನಡೆಸಿದರು .   1953 ರಲ್ಲಿ ಗೋಳ್ವಲ್ಕರ್ ಗೋಹತ್ಯಾ ನಿಷೇಧಕ್ಕೆ ಕರೆ ಕೊಟ್ಟಾಗ ತಾನಿನ್ನೂ ಯುವಕನಾಗಿದ್ದೆ. ಆಗ ತನ್ನೊಂದಿಗೆ ಇನ್ನೋರ್ವ […]

ಉಡುಪಿ :ರಾಜ್ಯಪಾಲರನ್ನು ಭೇಟಿ ಮಾಡಿದ ಪೇಜಾವರ ಶ್ರೀ Read More »

ಕರಾವಳಿ

ಇನ್ನು ಮುಂದೆ ಪ್ರತಿ ತಿಂಗಳು ಸಪ್ತಪದಿ ಸಾಮೂಹಿಕ ವಿವಾಹ ನಡೆಯುತ್ತದೆ ➤ ಉಸ್ತುವಾರಿ ಸಚಿವ ಕೋಟ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.17: ಸಪ್ತಪದಿ ರಾಜ್ಯ ಸರ್ಕಾರದ ಬಹುದೊಡ್ಡ ಯೋಜನೆಯಾಗಿದ್ದು ಕೋವಿಡ್ ಕಾರಣಕ್ಕೆ ಯೋಜನೆ ನಿಲುಗಡೆಯಾಗಿತ್ತು. ರಾಜ್ಯದಲ್ಲಿ 23 ಮಂದಿಗೆ ವಿವಾಹ ಮಾಡಿಸುವ ಕೆಲಸ ಆಗಿದೆ. ಚಿನ್ನದ ಟೆಂಡರ್ ಹಾಕಲು ಯಾರೂ ಮುಂದೆ ಬಂದಿರಲಿಲ್ಲ. ಕಾವೇರಿ ಎಂಪೋರಿಯಂ ಮೂಲಕ ಚಿನ್ನ ಖರೀದಿ ಮಾಡುತ್ತೇವೆ. ಪ್ರತಿ ತಿಂಗಳು ಸಪ್ತಪದಿ ಸಾಮೂಹಿಕ ವಿವಾಹ ಮಾಡುತ್ತೇವೆ. ಈ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗುತ್ತದೆ ಎಂದು ಉಡುಪಿಯಲ್ಲಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.

ಇನ್ನು ಮುಂದೆ ಪ್ರತಿ ತಿಂಗಳು ಸಪ್ತಪದಿ ಸಾಮೂಹಿಕ ವಿವಾಹ ನಡೆಯುತ್ತದೆ ➤ ಉಸ್ತುವಾರಿ ಸಚಿವ ಕೋಟ Read More »

ಕರಾವಳಿ

ಹಿಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆ್ಯಪ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.16: ಪ್ರಸ್ತುತ ಸಾಲಿನ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಮುಂದಿನ ಎರಡು ವಾರಗಳ ಕಾಲಾವಧಿಯಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆಪ್‍ನ್ನು ಅಭಿವೃದ್ಧಿ ಪಡಿಸಲಾಗಿದೆ.ಜಿಲ್ಲೆಯ ರೈತರು ಗೂಗಲ್ ಪ್ಲೇ ಸ್ಟೋರ್‍ನಲ್ಲಿ ಲಭ್ಯವಿರುವ  ಆ್ಯಪ್ಅನ್ನು ಡೌನ್‍ಲೋಡ್ ಮಾಡಿ ಆರ್ಥಿಕ ವರ್ಷ ಹಾಗೂ ಋತುವನ್ನು ದಾಖಲಿಸಬೇಕು. ನಂತರ ಆಧಾರ್ ಕ್ಯೂ ಆರ್ ಕೋಡ್‍ನ್ನು ಸ್ಕ್ಯಾನ್ ಮಾಡಿ, ಮೊಬೈಲ್ ಸಂಖ್ಯೆ ನಮೂದಿಸಿ ಸಕ್ರಿಯಗೊಳಿಸುವುದರಿಂದ ಮೊಬೈಲ್ ಸಂಖ್ಯೆಗೆ ಓ.ಟಿ.ಪಿ. ಬರಲಿದ್ದು,

ಹಿಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆ್ಯಪ್ ಬಿಡುಗಡೆ Read More »

ಕರಾವಳಿ

ಮಂಗಳೂರು :ಕರ್ತವ್ಯ ನಿರತ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಮೇಲೆ ತಲವಾರಿನಿಂದ ಹಲ್ಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.16: ಕರ್ತವ್ಯದಲ್ಲಿದ್ದ ಹೆಡ್‌‌ ಕಾನ್ಸ್‌ಟೇಬಲ್‌ಯೋರ್ವರ ಮೇಲೆ ದುಷ್ಕರ್ಮಿಯೋರ್ವ ತಲವಾರಿನಿಂದ ಹಲ್ಲೆ ಮಾಡಿದ ಘಟನೆ ಇಂದು ಮಂಗಳೂರಿನ ರಥಬೀದಿಯ ಬಳಿಯ ನ್ಯೂ ಚಿತ್ರಾ ಟಾಕೀಸ್‌ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ಬಂದರು ಠಾಣೆಯ ಹೆಡ್‌‌ ಕಾನ್ಸ್‌ಟೇಬಲ್‌‌‌ ಗಣೇಶ್‌‌ ಕಾಮತ್‌ ಹಾಗೂ ಇಬ್ಬರು ಸಿಬ್ಬಂದಿ ತಪಾಸಣೆ ನಿರತರಾಗಿದ್ದರು. ಈ ಸಂದರ್ಭ ಬೈಕ್‌ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಯೋರ್ವ ಮುಖ್ಯ ಪೇದೆ ಗಣೇಶ್‌ ಕಾಮತ್‌ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ

ಮಂಗಳೂರು :ಕರ್ತವ್ಯ ನಿರತ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಮೇಲೆ ತಲವಾರಿನಿಂದ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಗ್ರಾ.ಪಂ. ಚುನಾವಣೆ ಹಿನ್ನಲೆ ➤ ಚುನಾವಣಾ ಆಯೋಗದಿಂದ ಮತಗಟ್ಟೆಗಳಿಗೆ ಕೋವಿಡ್ ಕಿಟ್ ಸರಬರಾಜು

(ನ್ಯೂಸ್ ಕಡಬ) newskadaba.com ಉಡುಪಿ, ಡಿ.16: ಜಿಲ್ಲೆಯಲ್ಲಿ ಡಿಸೆಂಬರ್ 22 ಮತ್ತು 27 ರಂದು ನಡೆಯುವ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯು ಜಿಲ್ಲೆಯ ಒಟ್ಟು 153 ಗ್ರಾಮ ಪಂಚಾಯತ್ ಗಳಲ್ಲಿ ನಡೆಯಲಿದ್ದು, ಕೋವಿಡ್19 ಹಿನ್ನೆಲೆಯಲ್ಲಿ ಈ ಎಲ್ಲಾ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಕೊರೋನಾ ಸುರಕ್ಷಿತ ಕಿಟ್‌ಗಳನ್ನು ರಾಜ್ಯ ಚುನಾವಣಾ ಆಯೋಗ ಸರಬರಾಜು ಮಾಡಿದೆ.   ಎಂ.ಎಸ್.ಐ.ಲ್ ನಿಂದ ಸರಬರಾಜು ಮಾಡಿರುವ ಈ ಕಿಟ್‌ಗಳಲ್ಲಿ, 500 ಎಂಲ್‌ನ 4 ಸ್ಯಾನಿಟೈಸ್ ಬಾಟೆಲ್, 100 ಎಂಎಲ್‌ನ

ಗ್ರಾ.ಪಂ. ಚುನಾವಣೆ ಹಿನ್ನಲೆ ➤ ಚುನಾವಣಾ ಆಯೋಗದಿಂದ ಮತಗಟ್ಟೆಗಳಿಗೆ ಕೋವಿಡ್ ಕಿಟ್ ಸರಬರಾಜು Read More »

ಕರಾವಳಿ, ಕರ್ನಾಟಕ

ಹಸಿ ಮೀನುಗಳಿಗೆ ಫಾರ್ಮಾಲಿನ್ ಬಳಸಿದರೆ ಕ್ರಿಮಿನಲ್ ಕೇಸ್ ➤ ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.16: ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಕಳೆದ ಕೆಲವು ತಿಂಗಳುಗಳಿಂದ ಹಸಿ ಮೀನುಗಳಲ್ಲಿ ಜನರ ಆರೋಗ್ಯಕ್ಕೆ ಹಾನಿಯುಂಟು ಮಾಡುವ ಫಾರ್ಮಾಲಿನ್‌ಗಳನ್ನು ವಿಪರೀತವಾಗಿ ಬಳಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಜಿಲ್ಲಾಧಿಕಾರಿ ಕಚೇರಿಗೆ ದೂರುಗಳು ಬಂದಿರುತ್ತವೆ.   ಈ ಹಿನ್ನೆಲೆಯಲ್ಲಿ ಹಸಿ ಮೀನುಗಳಿಗೆ ಫಾರ್ಮಾಲಿನ್ ಕಂಡುಬಂದಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.ಜನರ ಆರೋಗ್ಯಕ್ಕೆ ಹಾನಿಯುಂಟು ಮಾಡುವ ಇಂತಹ ಹಾನಿಕಾರಕ ಫಾರ್ಮಾಲಿನ್‌ಗಳನ್ನು ಬಳಸಿಕೊಂಡು ಅನೈತಿಕ ವ್ಯಾಪಾರಗಳಲ್ಲಿ ತೊಡಗಿಕೊಳ್ಳುವವರ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ

ಹಸಿ ಮೀನುಗಳಿಗೆ ಫಾರ್ಮಾಲಿನ್ ಬಳಸಿದರೆ ಕ್ರಿಮಿನಲ್ ಕೇಸ್ ➤ ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ Read More »

ಕರಾವಳಿ

ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ ➤ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳ ಹಂಚಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.15: ಪ್ರಸ್ತುತ ಸಾಲಿನ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್ ಚುನಾವಣೆಯು ಪಕ್ಷರಹಿತ ಚುನಾವಣೆಯಾಗಿರುತ್ತದೆ. ಕರ್ನಾಟಕಗ್ರಾಮ ಸ್ವರಾಜ್ ಮತ್ತು ಪಂಚಾಯತ್‍ರಾಜ್ ಅಧಿನಿಯಮ, 1993ರ ಪ್ರಕರಣ 7(2)ರಂತೆ ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ. ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಸಭೆ, ಸಮಾರಂಭಗಳನ್ನು ಏರ್ಪಡಿಸಿ, ವೇದಿಕೆ ಮೇಲೆ ಪಕ್ಷದ ಬಾವುಟ, ಬ್ಯಾನರ್‍ಗಳನ್ನು ಬಳಸುವಂತಿಲ್ಲ. ಸ್ಪರ್ಧಿಸುವ ಅಭ್ಯರ್ಥಿಗಳನ್ನು ತಮ್ಮ ಪಕ್ಷದ/ಬೆಂಬಲಿತ

ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ ➤ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳ ಹಂಚಿಕೆ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ➤ ಇಬ್ಬರು ಯುವತಿಯರನ್ನು ರಕ್ಷಿಸಿದ ಖಾಕಿ ತಂಡ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.15: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆಯಲ್ಲಿ ನಿರತರಾಗಿದ್ದ ಇಬ್ಬರು ಮಹಿಳೆಯರೂ ಸೇರಿದಂತೆ ಮೂವರು ಆರೋಪಿತರನ್ನು ಬಂಟ್ವಾಳ ಡಿವೈಎಸ್‌ಪಿ ವೆಲೆಂಟೈನ್ ಡಿಸೋಜಾ ಅವರ ನೇತೃತ್ವದ ಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅವರ ತಂಡ ಪತ್ತೆಹಚ್ಚಿದೆ. ಮೇಲಂತಬೆಟ್ಟು ಗ್ರಾಮದ ಕಲ್ಲಗುಡ್ಡೆ ಎಂಬಲ್ಲಿರುವ ರಾಮಚಂದ್ರ ದೇವಾಡಿಗ ಎಂಬವರು ಪಡೆದಿದ್ದ ಬಾಡಿಗೆ ಮನೆಯಲ್ಲಿ  ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತಪಡಿಸಿಕೊಂಡ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ಬಂದ ಮಾಹಿತಿಯಂತೆ ನಡೆಸಿದ ಕಾರ್ಯಾಚರಣೆ ಯಲ್ಲಿ ಕೃತ್ಯ ಬೆಳಕಿಗೆ ಬಂದಿದೆ. ಬಂಧಿತರನ್ನು ಜನಾರ್ದನ

ಬೆಳ್ತಂಗಡಿ: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ➤ ಇಬ್ಬರು ಯುವತಿಯರನ್ನು ರಕ್ಷಿಸಿದ ಖಾಕಿ ತಂಡ Read More »

ಕರಾವಳಿ

ಉಡುಪಿ: ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರು ನಿಧನ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.13: ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರು ವಯೋಸಹಜ ಅನಾರೋಗ್ಯದಿಂದ (85) ನಿಧನರಾಗಿದ್ದಾರೆ. .ಪದ್ಮಶ್ರೀ ಪುರಸ್ಕೃತ ಬನ್ನಂಜೆ ಗೋವಿಂದಾಚಾರ್ಯರು ಉಡುಪಿಯ ಅಂಬಲಪಾಡಿ ನಿವಾಸದಲ್ಲಿಂದು ಕೊನೆಯುಸಿರೆಳೆದಿದ್ದಾರೆ. ಪ್ರವಚನಕಾರ, ಮಧ್ವ ಸಿದ್ಧಾಂತದ ಪ್ರತಿಪಾದಕ ಹಾಗೂ ಪತ್ರಕರ್ತರಾಗಿಯೂ ಗುರುತಿಸಿಕೊಂಡಿದ್ದ ಅವರು ನಟ ಡಾ.ವಿಷ್ಣುವರ್ಧನ್ ಗೆ ಆಧ್ಯಾತ್ಮಿಕ ಗುರುಗಳಾಗಿದ್ದರು. ಹಲವಾರು ಕೃತಿಗಳನ್ನು ಸಂಸ್ಕೃತದಿಂದ ಕನ್ನಡಕ್ಕೆ ಅನುವಾದಿಸಿದ್ದು, ಕನ್ನಡದ ಪ್ರಮುಖ ಮೂರು ಚಲನಚಿತ್ರಗಳಾದ ಮಧ್ವಾಚಾರ್ಯ, ಶಂಕರಾಚಾರ್ಯ, ರಾಮಾನುಜಾಚಾರ್ಯಕ್ಕೆ ಸಂಭಾಷಣೆಯನ್ನು ಬರೆದಿದ್ದರು.1936ರಲ್ಲಿ ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ ಜನಿಸಿದ್ದ ಗೋವಿಂದಾಚಾರ್ಯರು ಅಪಾರ ವಿದ್ವತ್ ಉಳ್ಳವರಾಗಿದ್ದರು.ಬನ್ನಂಜೆ

ಉಡುಪಿ: ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರು ನಿಧನ Read More »

ಕರಾವಳಿ, ಕರ್ನಾಟಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಆರಂಭ ➤ ಡಿ.14ರಂದು ಶ್ರೀ ದೇವರ ಲಕ್ಷದೀಪೋತ್ಸವ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.13: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಡಿ.14ರಂದು ಶ್ರೀ ದೇವರ ಲಕ್ಷದೀಪೋತ್ಸವ ನೆರವೇರಲಿದೆ. ಇದಕ್ಕೆ ಸರ್ವ ಭಕ್ತರ ಸಹಕಾರ ಅಗತ್ಯ. ಲಕ್ಷ ದೀಪೋತ್ಸವದಂದು ಲಕ್ಷ ದೀಪಗಳು ಉರಿದು ಕ್ಷೇತ್ರವು ಹಣತೆ ಬೆಳಕಿನಿಂದ ಪ್ರಜ್ವಲಿಸಬೇಕು ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್‌.ಅಂಗಾರ ಹೇಳಿದರು. ಶ್ರೀ ದೇವಳದ ಆಡಳಿತ ಕಚೇರಿ ಮೇಲ್ಮಹಡಿಯಲ್ಲಿ ಶನಿವಾರ ನಡೆದ ಸಾರ್ವಜನಿಕರ ಮತ್ತು ವರ್ತಕರ ಸಭೆಯಲ್ಲಿಅಧ್ಯಕ್ಷತೆ ವಹಿಸಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಆರಂಭ ➤ ಡಿ.14ರಂದು ಶ್ರೀ ದೇವರ ಲಕ್ಷದೀಪೋತ್ಸವ Read More »

ಕರಾವಳಿ
Scroll to Top