Udupi

ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೂ ಪ್ರವೇಶಿಸಿದ ಸೋಂಕು ➤ ಎಸ್ಐ, ಓರ್ವ ಕಾನ್ಸ್‌ಟೇಬಲ್‌ಗೆ ಪಾಸಿಟಿವ್

(ನ್ಯೂಸ್ ಕಡಬ) newskadaba.com ಪುತ್ತೂರು,ಜು.13: ಪುತ್ತೂರು ಮಹಿಳಾ ಪೋಲೀಸ್ ಠಾಣೆಗೆ ಮತ್ತೆ ಕೊರೋನಾ ವಕ್ಕರಿಸಿದೆ. ಈ ಹಿಂದೆ ವಿಟ್ಲ ಪೋಲೀಸ್ ಕಾನ್ಸ್‌ಟೇಬಲ್ ಸಂಪರ್ಕ ಹಿನ್ನಲೆಯಲ್ಲಿ ಪುತ್ತೂರು ಮಹಿಳಾ ಪೋಲೀಸ್ ಠಾಣೆಯ ಕೆಲವರನ್ನು ಕ್ವಾರೈಂಟೈನ್ ಗೆ ಒಳಪಡಿಸಲಾಗಿತ್ತು. ಆ ಸಂದರ್ಭದಲ್ಲಿ ಠಾಣೆಯ ಯಾವೊಬ್ಬ ಸಿಬ್ಬಂದಿಯಲ್ಲೂ ಕೊರೋನಾ ಪಾಸಿಟಿವ್ ಪತ್ತೆಯಾಗಿರಲಿಲ್ಲ. ಆದರೆ ಈ ಬಾರಿ ಠಾಣೆಯ ಎಸ್‌ಐ ಮತ್ತು ಕಾನ್ಸ್‌ಟೇಬಲ್‌ ಓರ್ವರಿಗೆ ಕೊರೋನಾ ದೃಢಪಟ್ಟಿದೆ.   ಪುತ್ತೂರು ನಗರ ಪೋಲೀಸ್ ಠಾಣೆಯ ಕಾನ್ಸ್‌ಟೇಬಲ್‌ನಲ್ಲಿ ಪಾಸಿಟೀವ್ ಪತ್ತೆಯಾದ ಹಿನ್ನಲೆಯಲ್ಲಿ ಮಹಿಳಾ ಪೋಲೀಸ್ […]

ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೂ ಪ್ರವೇಶಿಸಿದ ಸೋಂಕು ➤ ಎಸ್ಐ, ಓರ್ವ ಕಾನ್ಸ್‌ಟೇಬಲ್‌ಗೆ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಜು.16 ರಿಂದ ಒಂದು ವಾರ ದ.ಕ ಜಿಲ್ಲೆ ಲಾಕ್ ಡೌನ್ ➤ ಜಿಲ್ಲಾ ಉಸ್ತುವಾರಿ ಸಚಿವರ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.13: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಕೊರೊನಾ ಸೋಂಕು ಆತಂಕಕ್ಕೆ ಕಾರಣವಾಗಿರುವ ಹಿನ್ನಲೆಯಲ್ಲಿ ಜು.16 ರಿಂದ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಗೆ ತರಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.  ಸೋಮವಾರ 11  ಗಂಟೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೊಂದಿಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್, ಹಾಗೂ

ಜು.16 ರಿಂದ ಒಂದು ವಾರ ದ.ಕ ಜಿಲ್ಲೆ ಲಾಕ್ ಡೌನ್ ➤ ಜಿಲ್ಲಾ ಉಸ್ತುವಾರಿ ಸಚಿವರ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ ಲಾಕ್ ಡೌನ್ ➤ ಜಿಲ್ಲಾಧಿಕಾರಿಗಳಿಗೆ ತಿರ್ಮಾನ ಬಿಟ್ಟ ಸಿ ಎಂ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.13: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಕೊರೋನಾ ಆತಂಕದ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಮಾಡುವಂತೆ ಮನವಿ ಮಾಡಿದ್ದು, ಲಾಕ್ ಡೌನ್ ಮಾಡುವುದಕ್ಕೆ ಅವಕಾಶ ಕೊಡಿ ಎಂದು ಮುಖ್ಯಮಂತ್ರಿಗೆ ಇಂದು ನಳೀನ್ ಕುಮಾರ್ ಕಟೀಲ್ ರವರು ವೀಡಿಯೋ ಕಾನ್ಫರೆನ್ಸ್ ನಲ್ಲಿ ಮನವಿ ಮಾಡಿದ್ದಾರೆ.  ಜಿಲ್ಲಾಡಳಿತವೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸಿ ಎಂ ಬಿ ಎಸ್ ಯಡಿಯೂರಪ್ಪರವರು ಸೂಚಿಸಿದ್ದರೆ. ವಿಡಿಯೋ ಕಾನ್ಫರೆನ್ಸ್ ನಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ

ದಕ್ಷಿಣ ಕನ್ನಡ ಲಾಕ್ ಡೌನ್ ➤ ಜಿಲ್ಲಾಧಿಕಾರಿಗಳಿಗೆ ತಿರ್ಮಾನ ಬಿಟ್ಟ ಸಿ ಎಂ Read More »

ಕರಾವಳಿ, ಕರ್ನಾಟಕ

ದ.ಕ.ಲಾಕ್‌ಡೌನ್ ಸಿಎಂ ಜತೆ ಚರ್ಚಿಸಿ ತೀರ್ಮಾನ ➤ ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಪಷ್ಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಲಾಕ್‌ಡೌನ್ ಜಾರಿ ಬಗ್ಗೆ ಅಂತಿಮ ನಿರ್ಧಾರ ಆಗಿಲ್ಲ. ಸೋಮವಾರ ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿ ಜತೆ, ತಾನು, ಸಂಸದರು, ಹಾಗೂ ಜಿಲ್ಲಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದು, ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.   ಜಿಲ್ಲೆಯ ಕೋವಿಡ್ ಪರಿಸ್ಥಿತಿ ಅಧ್ಯಯನಕ್ಕೆ ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಲಾಕ್‌ಡೌನ್

ದ.ಕ.ಲಾಕ್‌ಡೌನ್ ಸಿಎಂ ಜತೆ ಚರ್ಚಿಸಿ ತೀರ್ಮಾನ ➤ ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಕಡಬದ ಫೋಟೋಗ್ರಾಫರ್ ಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ ,ಜು.13: ಕಡಬದ ಫೋಟೋಗ್ರಾಫರ್ ಒಬ್ಬರಿಗೆ ಇಂದು ಕೊರೋನಾ ಪಾಸಿಟಿವ್ ಬಂದಿದ್ದು, ಕಡಬದಲ್ಲಿ ಇದೀಗಾ ಆಂತಕ ಮನೆ ಮಾಡಿದೆ.  ದಿನಕಳೆದಂತೆ ಒಂದೊಂದೆ ಕೊರೋನಾ ಪ್ರಕರಣಗಳು ಕಡಬ ವಲಯದಲ್ಲಿ ಸದ್ದು ಮಾಡುತ್ತಿದೆ. ಸಾರ್ವಜನಿಕರು ಮಾತ್ರ ಇನ್ನು ಎಚ್ಚೆತ್ತುಕೊಳ್ಳದೆ, ಸಾಮಾಜಿಕ ಅಂತರ ಮರೆತು, ಮಾಸ್ಕ್ ಹಾಕದೆ ಬೇಕಾಬಿಟ್ಟಿಯಾಗಿ ಕಡಬ ಪೇಟೆಯಲ್ಲಿ ತಿರುಗುತ್ತಿದ್ದಾರೆ. ಇನ್ನಾದರೂ ಎಚೆತ್ತುಕೊಳ್ಳದಿದ್ದರೆ, ಕೊರೋನಾ ನಿಮ್ಮ ಮನೆ ಬಾಗಿಲಿಗೆ ಬಂದರು ಅಚ್ಚರಿ ಪಡಬೇಕಾಗಿಲ್ಲ.

ಕಡಬದ ಫೋಟೋಗ್ರಾಫರ್ ಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಶಾಸಕ ಹರೀಶ್ ಪೂಂಜರಿಂದ ವಿನೂತನ ಪ್ರಯೋಗ ➤ SDM ಕ್ಷಯರೋಗ ಆಸ್ಪತ್ರೆ ಈಗ ಕೋವಿಡ್ ಕೇಂದ್ರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜು.13: ಮಾರಕ ಕೊವೀಡ್ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚಾಗುತ್ತಿದ್ದಂತೆ ಸರಕಾರ ತಾಳುಕಿನಲ್ಲಿರುವ ಆಸ್ಪತ್ರೆಗಲಲ್ಲೂ ಕೊರೋನಾ ಕೇಂದ್ರಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ಷಯ ರೋಗ ಆಸ್ಪತ್ರೆಯನ್ನು ಕೊವೀಡ್ ಕೇಂದರವನ್ನಾಗಿ ಪರಿವರ್ತನೆ ಮಾಡಲಾಗಿದೆ.     ಈ ಕೇಂದ್ರದಲ್ಲಿ ಕೊರೋನಾ ದೃಢಪಟ್ಟಿರುವ, ಆದರೆ ಕ್ಷಯ ರೋಗ ಲಕ್ಷನವಿಲ್ಲದ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತದೆ. ಈ

ಶಾಸಕ ಹರೀಶ್ ಪೂಂಜರಿಂದ ವಿನೂತನ ಪ್ರಯೋಗ ➤ SDM ಕ್ಷಯರೋಗ ಆಸ್ಪತ್ರೆ ಈಗ ಕೋವಿಡ್ ಕೇಂದ್ರ Read More »

ಕರಾವಳಿ, ಕರ್ನಾಟಕ

ಐಶ್ವರ್ಯಾ ರೈ ಹಾಗೂ ಮಗಳು ಆರಾಧ್ಯಾಗೂ ಕೊರೋನ ಪಾಸಿಟಿವ್

(ನ್ಯೂಸ್ ಕಡಬ) newskadaba.com ಮುಂಬೈ,ಜು.12: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಮತ್ತು ಮಗ ಅಭಿಷೇಕ್​ ಬಚ್ಚನ್​ ಅವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟ ಬೆನ್ನಲ್ಲೇ ಇಡೀ ಕುಟುಂಬಕ್ಕೆ ಕೊರೋನಾ ವೈರಸ್​ ಹರಡಿರುವ ಶಂಕೆ ವ್ಯಕ್ತವಾಗಿತ್ತು. ಹಾಗಾಗಿ ಕುಟುಂಬದವರೆಲ್ಲರು ಕೊರೋನಾ ಟೆಸ್ಟ್​ಗೆ ಒಳಗಾಗಿದ್ದರು. ಆದರೀಗ  ನಟಿ ಐಶ್ವರ್ಯಾ ರೈ ಬಚ್ಚನ್​ ಮತ್ತು ಮಗಳು ಆರಾಧ್ಯಾ ರೈ ಅವರಿಗೆ ಕೊರೋನಾ ಪಾಸಿಟಿವ್​ ಬಂದಿದೆ. “ನನಗೆ ಕೊರೋನಾ ಪಾಸಿಟಿವ್ ಬಂದಿದೆ. ನನ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬದ ಸದಸ್ಯರು ಮತ್ತು ಸಿಬ್ಬಂದಿವರ್ಗದವರ

ಐಶ್ವರ್ಯಾ ರೈ ಹಾಗೂ ಮಗಳು ಆರಾಧ್ಯಾಗೂ ಕೊರೋನ ಪಾಸಿಟಿವ್ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಇಂದು ಪುತ್ತೂರಿನ ನಾಲ್ವರಿಗೆ ಡೆಡ್ಲಿ ಕೊರೋನಾ ದೃಢ!

(ನ್ಯೂಸ್ ಕಡಬ) newskadaba.com ಪುತ್ತೂರು,ಜು.12: ಪುತ್ತೂರು ತಾಲೂಕಿನಲ್ಲಿ ಭಾನುವಾರ ನಾಲ್ಕು ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಓರ್ವ ವೃದ್ಧ ಮೃತಪಟ್ಟಿದ್ದಾರೆ. ಶಾಂತಿಗೋಡಿನ 15 ವರ್ಷದ ಬಾಲಕಿ, ಇಚ್ಲಾಂಪಾಡಿಯ 27 ವರ್ಷದ ಯುವಕ, ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸ್ಟಾಫ್ ನರ್ಸ್ ಆಗಿದ್ದ ಬಲ್ಯ ಹೊಸ್ಮಠದ 22 ವರ್ಷದ ಯುವತಿ, ಕ್ಯಾಂಫ್ಕೊ ವಸತಿ ಗೃಹದಲ್ಲಿನ 35 ವರ್ಷದ ಗೃಹಿಣಿಗೆ ಇಂದು ಕೋರೋನಾ ಪಾಸಿಟಿವ್ ವರದಿಯಾಗಿದೆ.   ಇಚ್ಲಾಂಪಾಡಿಯ ಸೋಂಕಿತ ಯುವಕ ಜುಲೈ 12ರಂದು ವಿದೇಶದಿಂದ ಬಂದು ಮಂಗಳೂರಿನ ಹೊಟೇಲ್‌ವೊಂದರಲ್ಲಿ ಕ್ವಾರಂಟೈನ್‌ಗೆ ಒಳಗಾಗಿದ್ದರು.

ಇಂದು ಪುತ್ತೂರಿನ ನಾಲ್ವರಿಗೆ ಡೆಡ್ಲಿ ಕೊರೋನಾ ದೃಢ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿಗಿಂದು ಕೊರೋನಾಘಾತ ➤ ಮಾಡ್ನೂರು ಗ್ರಾಮದ ವ್ಯಕ್ತಿ ಕೋವಿಡ್ ಗೆ ಬಲಿ

(ನ್ಯೂಸ್ ಕಡಬ) newskadaba.com ಪುತ್ತೂರು ,ಜು.12: ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿ ಕೋವಿಡ್ ಪಾಸಿಟಿವ್ ಆಗದ್ದ ಮಾಡ್ನೂರು ಗ್ರಾಮದ ವ್ಯಕ್ತಿ ಇಂದು ಸಾವನ್ನಪ್ಪಿದ್ದಾರೆ. ಮಾಡ್ನೂರು ಗ್ರಾಮದ ಮೂಲಡ್ಕದ 50 ವರ್ಷ ಪ್ರಾಯದ ನಿವಾಸಿಯೊಬ್ಬರಿಗೆ ಜು.10ರಂದು ಕೋವಿಡ್-19 ಸೋಂಕು ದೃಢಪಟ್ಟಿತ್ತು. ಆದರೆ ಇಂದು ತೀರಾ ಅನಾರೋಗ್ಯದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ  ಮೃತಪಟ್ಟಿದ್ದಾರೆ. ನ್ಯೂಮುನಿಯಾ ಹಿನ್ನೆಲೆಯಲ್ಲಿ ಮೊದಲು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರನ್ನು ತೀರಾ ಗಂಭೀರ ಸ್ಥಿತಿಗೆ ಒಳಗಾದ ಕಾರಣ ಮಂಗಳೂರಿನ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರ

ಪುತ್ತೂರಿಗಿಂದು ಕೊರೋನಾಘಾತ ➤ ಮಾಡ್ನೂರು ಗ್ರಾಮದ ವ್ಯಕ್ತಿ ಕೋವಿಡ್ ಗೆ ಬಲಿ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ ತಾಲೂಕಿನಲ್ಲಿ ಕೋವಿಡ್ ಸೋಂಕಿಗೆ ಮೊದಲ ಮೃತ್ಯು !

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜು.12: ಕೋವಿಡ್ ಸೋಂಕಿಗೆ ಬೆಳ್ತಂಗಡಿ ತಾಲೂಕಿನಲ್ಲಿ ಮೊದಲ ಸಾವು ಸಂಭವಿಸಿದೆ. ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಸುಮಾರು 60ವರ್ಷ ಪ್ರಾಯದ ವೃದ್ಧ ರವಿವಾರ ಮುಂಜಾನೆ ತಮ್ಮ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ. ಅನಾರೋಗ್ಯದ ಕಾರಣದಿಂದ 2 ದಿನದ ಹಿಂದೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಲಾಗಿತ್ತು. ಅದರ ವರದಿ ಕೈ ಸೇರಿದ್ದು ಸೋಂಕು ದೃಢ ಪಟ್ಟಿತ್ತು. ಮೃತ ದೇಹ ಮನೆಯಲಿದ್ದು ಸ್ಥಳಕ್ಕೆ ಪೊಲೀಸ್, ತಹಶೀಲ್ದಾರ್, ವೈದ್ಯರು ಭೇಟಿ ನೀಡಿ ಮುಂಜಾಗ್ರತಾ ಕ್ರಮ

ಬೆಳ್ತಂಗಡಿ ತಾಲೂಕಿನಲ್ಲಿ ಕೋವಿಡ್ ಸೋಂಕಿಗೆ ಮೊದಲ ಮೃತ್ಯು ! Read More »

ಕರಾವಳಿ, ಕರ್ನಾಟಕ
Scroll to Top