Udupi

SSLC ವಿದ್ಯಾರ್ಥಿನಿಯೋರ್ವಳಿಗೆ ಕೊರೊನಾ ದೃಢ

(ನ್ಯೂಸ್ ಕಡಬ) newskadaba.com ಕಾಪು,ಜೂ.28:  ಕಾಪು ತಾಲೂಕಿನ ಎಸ್‌ಎಸ್‌‌ಎಲ್‌‌ಸಿ ವಿದ್ಯಾರ್ಥಿನಿಯೋರ್ವಳಿಗೆ ಕೊರೊನಾ ಸೋಂಕು ದೃಢಪಟ್ಟಿರುವುದಾಗಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ವಿದ್ಯಾರ್ಥಿನಿ ಜು.25ರ ಎಸ್‌.ಎಸ್‌.ಎಲ್‌.ಸಿಯ ಕನ್ನಡ ಹಾಗೂ ಜು.27ರಂದು ನಡೆದ ಗಣಿತ ಪರೀಕ್ಷೆ ಬರೆದಿದ್ದರು. ಜೂನ್‌‌ 27ರಂದು ಈಕೆಯ ತಂದೆಯ ಗಂಟಲು ದ್ರವದ ಮಾದರಿ ಪರೀಕ್ಷೆ ಬಂದ ಹಿನ್ನೆಲೆ ಈಕೆಯನ್ನು ಕೂಡಾ ಅದೇ ದಿನ ಕೊರೊನಾ ಪರೀಕ್ಷೆಗೊಳಪಡಿಸಲಾಗಿತ್ತು. ಕೊರೊನಾ ಪರೀಕ್ಷಾ ವರದಿ ಜೂ 28ರಂದು ಬಂದಿದ್ದು, ವರದಿಯಲ್ಲಿ ಪಾಸಿಟಿವ್‌ ಎಂದು ಖಚಿತವಾಗಿತ್ತು. […]

SSLC ವಿದ್ಯಾರ್ಥಿನಿಯೋರ್ವಳಿಗೆ ಕೊರೊನಾ ದೃಢ Read More »

ಕರಾವಳಿ, ಕರ್ನಾಟಕ

ಭಾರತದ ಪ್ರಾಂತ್ಯದ ಮೇಲೆ ಕಣ್ಣಿಟ್ಟವರಿಗೆ ಸರಿಯಾದ ಪ್ರತ್ಯುತ್ತರ ನೀಡಲಾಗಿದೆ ➤ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ ,ಜೂ.28:  ಗಡಿ ಮತ್ತು ಸಾರ್ವಭೌಮತ್ವವನ್ನು ರಕ್ಷಿಸುವಲ್ಲಿ ಭಾರತದ ಬದ್ಧತೆಯನ್ನು ಜಗತ್ತು ಕಂಡಿದೆ. ಪೂರ್ವ ಲಡಾಕ್‌ನಲ್ಲಿ, ಭಾರತದ ಪ್ರಾಂತ್ಯಗಳನ್ನು ಬಯಸುವವರಿಗೆ ತಕ್ಕ ಉತ್ತರವನ್ನು ನಮ್ಮ ಸೇನೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.   ಆಕಾಶವಾಣಿಯ ತಿಂಗಳ ಕೊನೆಯ ಭಾನುವಾರದ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕೊರೋನಾ ಸಂಕಷ್ಟದ ನಡುವೆ ಈ ವರ್ಷ ನಮ್ಮ ದೇಶ ಹಲವು ಸವಾಲುಗಳಿಗೆ ಎದುರಾಯಿತು, ಆಂಫಾನ್ ಚಂಡಮಾರುತ, ನಿಸರ್ಗ ಚಂಡಮಾರುತ, ಮಿಡತೆ ದಾಳಿ,

ಭಾರತದ ಪ್ರಾಂತ್ಯದ ಮೇಲೆ ಕಣ್ಣಿಟ್ಟವರಿಗೆ ಸರಿಯಾದ ಪ್ರತ್ಯುತ್ತರ ನೀಡಲಾಗಿದೆ ➤ ಪ್ರಧಾನಿ ನರೇಂದ್ರ ಮೋದಿ Read More »

ರಾಷ್ಟ್ರೀಯ ನ್ಯೂಸ್

ಭಾರತ: ಒಂದೇ ದಿನ 19,906 ಕೋವಿಡ್ -19 ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ನವದೆಹಲಿ,ಜೂ.28: ಭಾರತದಲ್ಲಿ ಒಂದೇ ದಿನ 19,906 ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,28,859ಕ್ಕೆ ಏರಿಕೆಯಾಗಿದೆ. 16,095 ಜನರು ಮೃತಪಟ್ಟಿದ್ದಾರೆ. ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 19,906 ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದ್ದು, 410 ಜನರು ಮೃತಪಟ್ಟಿದ್ದಾರೆ. ಇದು ಒಂದೇ ದಿನದಲ್ಲಿ ದಾಖಲಾದ ಅತಿ ಹೆಚ್ಚಿನ ಪ್ರಕರಣಗಳಾಗಿವೆ. ಇದೇ ಮೊದಲ ಬಾರಿಗೆ ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಒಂದೇ ದಿನದಲ್ಲಿ 19 ಸಾವಿರದ ಗಡಿ ದಾಟಿದೆ

ಭಾರತ: ಒಂದೇ ದಿನ 19,906 ಕೋವಿಡ್ -19 ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

11 ಗಂಟೆಗೆ ಮೋದಿ ಮನ್ ಕಿ ಬಾತ್ ➤ ಜನತಾ ಸಲಹೆಗಳ ಬುತ್ತಿ ಬಿಚ್ಚಿಡಲಿರುವ ಪ್ರಧಾನಿ

(ನ್ಯೂಸ್ ಕಡಬ) newskadaba.com ನವದೆಹಲಿ,ಜೂ.28:  ಮಾರಕ ಕೊರೊನಾ ವೈರಸ್ ಹಾವಳಿ, ನಡುವೆ, ಇಂದು(ಭಾನುವಾರ) ಪ್ರಧಾನಿ ಮೋದಿ ತಮ್ಮ ಮನ್ ಕಿ ಬಾತ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಮನ್ ಕಿ ಬಾತ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿದ್ದು, ಪ್ರಮುಖವಾಗಿ ಈ ಕಾರ್ಯಕ್ರಮಕ್ಕೆ ಜನರು ಕಳುಹಿಸಿರುವ ಸಲಹೆಗಳನ್ನು ಪ್ರಧಾನಿ ಮೋದಿ ದೇಶದ ಮುಂದಿಡಲಿದ್ದಾರೆ.   ಪ್ರಮುಖವಾಗಿ ಕೊರೊನಾ ವೈರಸ್ ಹಾವಳಿ ವಿಷಯವೇ ಚರ್ಚೆಗೆ ಬರಲಿದ್ದು, ಮಾರಕ ವೈರಾಣುವನ್ನು ನಿಯಂತ್ರಿಸುವ ಕುರಿತು ಪ್ರಧಾನಿ ಮೋದಿ

11 ಗಂಟೆಗೆ ಮೋದಿ ಮನ್ ಕಿ ಬಾತ್ ➤ ಜನತಾ ಸಲಹೆಗಳ ಬುತ್ತಿ ಬಿಚ್ಚಿಡಲಿರುವ ಪ್ರಧಾನಿ Read More »

ರಾಷ್ಟ್ರೀಯ ನ್ಯೂಸ್

ಕಾರ್ಯನಿರತ ಪತ್ರಕರ್ತರನ್ನು ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು ➤ H.D. ಕುಮಾರಸ್ವಾಮಿ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.27:  ಪತ್ರಕರ್ತರನ್ನು ಕೇವಲ ಹೆಸರಿಗೆ ಮಾತ್ರ ಕೊರೋನಾ ವಾರಿಯರ್ಸ್ ಎಂದು ಘೋಷಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ದೃಶ್ಯ ಮತ್ತು ಮುದ್ರಣ ಮಾಧ್ಯಮದ ಕಾರ್ಯನಿರತ ಪತ್ರಕರ್ತರನ್ನು ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೊರೋನಾ ಸೋಂಕು ತಗುಲಿದ ಪತ್ರಕರ್ತರಿಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಉಚಿತವಾಗಿ ಚಿಕಿತ್ಸೆ ಒದಗಿಸಲು ರಾಜ್ಯಸರ್ಕಾರ ತಕ್ಷಣವೇ ನಿರ್ಧಾರ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.    

ಕಾರ್ಯನಿರತ ಪತ್ರಕರ್ತರನ್ನು ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು ➤ H.D. ಕುಮಾರಸ್ವಾಮಿ Read More »

ಕರಾವಳಿ, ಕರ್ನಾಟಕ

SSLC ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್‌

(ನ್ಯೂಸ್ ಕಡಬ) newskadaba.com ಹಾಸನ,ಜೂ.27:  ಹಾಸನದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್‌ ಆಗಿದೆ. ಅರಕಲಗೂಡು ತಾಲ್ಲೂಕಿನ ಮಲ್ಲಿಪಟ್ಟಣ ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ ೧೬ ವರ್ಷ ಪ್ರಾಯದ ವಿದ್ಯಾರ್ಥಿ ಪರೀಕ್ಷೆ ಬರೆದಿದ್ದು ಎರಡು ದಿನಗಳ ಹಿಂದೆ ವಿದ್ಯಾರ್ಥಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಶನಿವಾರ ಬಂದ ವರದಿಯಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ ಎಂದು ವರದಿ ತಿಳಿಸಿದೆ.  

SSLC ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್‌ Read More »

ಕರಾವಳಿ, ಕರ್ನಾಟಕ

ಪುತ್ತೂರು; ಕಾನೂನು ಮಹಾವಿದ್ಯಾಲಯದಲ್ಲಿ ಕಳವಿಗೆ ಯತ್ನ

(ನ್ಯೂಸ್ ಕಡಬ) newskadaba.com ಪುತ್ತೂರು,ಜೂ.27: ನೆಹರು ನಗರ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಛೇರಿ ಮತ್ತು ಪ್ರಾಂಶುಪಾಲ ಕೊಠಡಿ ಬೀಗ ಮುರಿದು ಕಳ್ಳರು ಒಳನುಗ್ಗಿ ಕಳವಿಗೆ ಯತ್ನಿಸಿದ ಘಟನೆ ಶುಕ್ರವಾರ ದಂದು ಬೆಳಕಿಗೆ ಬಂದಿದೆ. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಛೇರಿಯ ಬೀಗ ಮುರಿಯಲೆತ್ನಿಸಿದ ಕಳ್ಳರು ಪ್ರಾಶುಂಪಾಲರ ಕೊಠಡಿಯ ಬೀಗ ಮುರಿದು ಕಪಾಟಿನೊಳಗಿದ್ದ ದಾಖಲೆಪತ್ರಗಳನ್ನು ಚೆಲ್ಲಾಪಿಲ್ಲಿ ಮಾಡಿ ಕಳವಿಗೆ ಯತ್ನಿಸಿದ್ದಾರೆ. ಕಾಲೇಜಿನ ಸಿಬ್ಬಂದಿಗಳು ಎಂದಿನಂತೆ ಶುಕ್ರವಾರ ಬೆಳಿಗ್ಗೆ ಕಚೇರಿಗೆ ಆಗಮಿಸಿದ ವೇಳೆ ಕಳವಿಗೆ ಯತ್ನಿಸಿದ ವಿಚಾರ ಬೆಳಕಿಗೆ ಬಂದಿದೆ. ಘಟನೆ

ಪುತ್ತೂರು; ಕಾನೂನು ಮಹಾವಿದ್ಯಾಲಯದಲ್ಲಿ ಕಳವಿಗೆ ಯತ್ನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕರಾವಳಿಯಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.27:  ಕಳೆದ ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಭಾರತೀಯ ಹವಾಮಾನ ಇಲಾಖೆಯು “ಆರೆಂಜ್‌ ಅಲರ್ಟ್‌’ ಘೋಷಣೆ ಮಾಡಿದೆ.   ಈ ವೇಳೆ ಕರಾವಳಿ ಭಾಗದಲ್ಲಿ 115.6 ಮಿ.ಮೀ. ನಿಂದ 204.4 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ.ಮಂಗಳೂರು ನಗರದಲ್ಲಿ ಶುಕ್ರವಾರದಂದು ಬಿಸಿಲು ಮತ್ತು ಸೆಕೆಯಿಂದ ಕೂಡಿದ ವಾತಾವರಣ ಇತ್ತು. ರಾತ್ರಿ ಭಾರೀ ಮಳೆಯಾಗಿದ್ದು ರಸ್ತೆಯಲ್ಲಿ ನೀರು ನಿಂತ ಕಾರಣ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಕರಾವಳಿಯಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ Read More »

ಕರಾವಳಿ, ಕರ್ನಾಟಕ

SSLC ಪರೀಕ್ಷೆ ➤ ಬೋಟ್‌ನಲ್ಲಿ ಬಂದ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.27:  ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭಗೊಂಡಿದ್ದು, ವಿದ್ಯಾರ್ಥಿಗಳು ಪರೀಕ್ಷಾ ತಯಾರಿಯಲ್ಲಿ ಮಗ್ನರಾಗಿದ್ದಾರೆ. ಆದ್ರೇ ಕೆಲವೆಡೆ ಪರೀಕ್ಷಾ ಕೆಂದ್ರಗಳನ್ನ ತಲುಪುವುದೆ ವಿದ್ಯಾರ್ಥಿಗಳಿಗೆ ಸವಾಲಾಗಿದೆ. ಕೊರೊನಾ ಕಾರಣದಿಂದಾಗಿ ಬೆಂಗ್ರೆ ಪ್ರದೇಶದಿಂದ ಬೋಟ್‌ಗಳನ್ನು ಬಂದ್‌ ಮಾಡಲಾಗಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ರಸ್ತೆ ಮಾರ್ಗವಾಗಿ ಸುತ್ತು ಬಳಸಿ ಬರಬೇಕಾಗಿತ್ತು.   ಅದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗಾಗಿ ಬೋಟ್‌ ಪ್ರಯಾಣ ಆರಂಭಿಸಲಾಗಿದ್ದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಎದುರಿಸಲು ದ್ವೀಪ ಪ್ರದೇಶವಾಗಿರುವ ತೋಟಬೆಂಗ್ರೆಯ 15 ಕ್ಕೂ ಅಧಿಕ

SSLC ಪರೀಕ್ಷೆ ➤ ಬೋಟ್‌ನಲ್ಲಿ ಬಂದ ವಿದ್ಯಾರ್ಥಿಗಳು Read More »

ಕರಾವಳಿ

ಉಡುಪಿ : ಸಿಂಧೂರಿ ಮನೆಗೆ ಶಾಸಕ ರಘುಪತಿ ಭಟ್‌ ಭೇಟಿ

(ನ್ಯೂಸ್ ಕಡಬ) newskadaba.com ಉಡುಪಿ,ಜೂ.26: ಸಾದಿಸೋ ಛಲವೊಂದಿದ್ದಾರೆ ಎಂತವರು ಸಾಧನ ಮಾಡಿಯೇ ಮಾಡುತ್ತಾರೆ. ಇಂತಹ ಮಾತಿಗೆ ಅಪ್ಪಟ್ಟ ಉದಾಹಣೆಯೇ, ಕೃಷ್ಣ ನಗರಿಯ ಬೆಡಗಿ ಈ ಕುವರಿ ನಿಂಧೂರಿ,ಅಂಗ ನ್ಯೂನತೆಯಿದ್ದರೂ, ಒಂದೇ ಕೈಯಿಂದ ಸುಮಾರು 15 ಮಾಸ್ಕ್ ತಯಾರಿಸಿ ಶಾಲೆಗೆ ನೀಡಿ ಕೋವಿಡ್‌-19 ಕೋವಿಡ್‌ ವಾರಿಯರ್ಸ್‌ಗೆ ಬೆಂಬಲ ನೀಡಿದ ಬಾಲಕಿ ಸಿಂಧೂರಿ. ಕೋವಿಡ್‌-19 ಕೋವಿಡ್‌ ವಾರಿಯರ್ಸ್‌ಗೆ ಬೆಂಬಲ ನೀಡಿದ ಬಾಲಕಿ ಸಿಂಧೂರಿ.ಅವರ ತೆಂಕನಿಡಿಯೂರು ಮನೆಗೆ ಶಾಸಕ ಕೆ.ರಘುಪತಿ ಭಟ್‌ ಗುರುವಾರ ಭೇಟಿ ನೀಡಿದರು. ಬಾಲಕಿಯ ಸಾಧನೆಯನ್ನು ಗುರುತಿಸಿ, ಅಭಿನಂದಿಸಿದರು.

ಉಡುಪಿ : ಸಿಂಧೂರಿ ಮನೆಗೆ ಶಾಸಕ ರಘುಪತಿ ಭಟ್‌ ಭೇಟಿ Read More »

ಕರಾವಳಿ, ಕರ್ನಾಟಕ
Scroll to Top