ullala

➤ ಉಳ್ಳಾಲ: ತಲವಾರಿನಿಂದ ಕಡಿದು ಕೊಲೆಗೆ ಯತ್ನ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 08. ಮನೆಯಲ್ಲಿರಲು ನಿರಾಕರಿಸಿದ ಹಿನ್ನೆಲೆ ವ್ಯಕ್ತಿಯೋರ್ವನನ್ನು ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿರುವ ಘಟನೆ ಕೋಟೆಕಾರು ಗ್ರೌಂಡ್‌ ಬಳಿ ನಡೆದಿದೆ. ಹಲ್ಲೆಗೊಳಗಾದವರನ್ನು ಅಬೂಬಕರ್‌ ಸಿದ್ದೀಖ್‌ ಎಂದು ಗುರುತಿಸಲಾಗಿದೆ. ಆರೋಪಿ ಮಂಜೇಶ್ವರ ಪಾವೂರು ಗುಂಡಾಪು ನಿವಾಸಿ ಉಮ್ಮರ್‌ ನವಾಫ್‌ ಎಂದು ಗುರುತಿಸಲಾಗಿದೆ. ಈತ ರಾತ್ರಿ 11ರ ವೇಳೆಗೆ ಪರಿಚಿತರೇ ಆಗಿರುವ ಅಬೂಬಕರ್‌ ಸಿದ್ದೀಖ್‌ ರವರಿಗೆ ಕರೆ ಮಾಡಿ ಅರ್ಜೆಂಟಾಗಿ ಕೋಟೆಕಾರು ಗ್ರೌಂಡಿಗೆ ಬರುವಂತೆ ತಿಳಿಸಿದ್ದ. ಅದರಂತೆ ನಡೆದುಕೊಂಡು ಹೋದ ಅಬೂಬಕರ್‌ ರವರು ಅಜ್ಜಿನಡ್ಕ […]

➤ ಉಳ್ಳಾಲ: ತಲವಾರಿನಿಂದ ಕಡಿದು ಕೊಲೆಗೆ ಯತ್ನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮ ಹತ್ಯೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 08. ಯುವತಿಯೋರ್ವಳು ಗೃಹ ಪ್ರವೇಶಗೈದ ಐದೇ ದಿನಕ್ಕೆ ಮನೆ ಕೋಣೆಯೊಳಗೆ 24 ಪುಟಗಳ ಡೆತ್ ನೋಟ್ ಬರೆದಿಟ್ಟು ನೇಣುಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೈದ ಯುವತಿಯನ್ನು ಫರಂಗಿಪೇಟೆ ಮೂಲದ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿ ಅಶ್ವಿನಿ ಬಂಗೇರ (25)ಎಂದು ಗುರುತಿಸಲಾಗಿದೆ. ಈಕೆ ನಿನ್ನೆ ರಾತ್ರಿ ತನ್ನ‌ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಾಳೆ ಎನ್ನಲಾಗಿದ್ದು, ಸ್ನೇಹಿತೆ ಬೆಳಿಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ

ಮಂಗಳೂರು: ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಮೆಹಂದಿ ಶಾಸ್ತ್ರದ ದಿನವೇ ನಾಪತ್ತೆಯಾಗಿದ್ದ ಯುವಕ ಬಳ್ಳಾರಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. ಮೆಹಂದಿ ಶಾಸ್ತ್ರದ ದಿನ ನಾಪತ್ತೆಯಾಗಿದ್ದ ಮದುಮಗನೋರ್ವ ಬಳ್ಳಾರಿಯಲ್ಲಿ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ನಾಪತ್ತೆಯಾದ ಯುವಕನನ್ನು ವರ್ಕಾಡಿ ದೇವಂದಪಡ್ಪುವಿನ ಉದ್ಯಮಿ ಐತಪ್ಪ ಶೆಟ್ಟಿ ಅವರ ಪುತ್ರ ಕಿಶನ್‌ ಶೆಟ್ಟಿ ಎಂದು ಗುರುತಿಸಲಾಗಿದೆ. ಮೇ. 31ರಂದು ರಾತ್ರಿ ಮೆಹಂದಿ ಶಾಸ್ತ್ರಕ್ಕೆ ಹಣ್ಣು ತರಲೆಂದು ಹೋಗಿದ್ದ ಕಿಶನ್‌ ನಾಪತ್ತೆಯಾಗಿದ್ದರು. ಆ ಬಳಿಕ ಭಾನುವಾರದಂದು ಮಧ್ಯಾಹ್ನ ಕಿಶನ್‌ ಶೆಟ್ಟಿ ತನ್ನ ತಂಗಿ ಮೊಬೈಲ್ಗೆ ಸಂದೇಶ ಕಳುಹಿಸಿ ನಾನು ಬಳ್ಳಾರಿಯಲ್ಲಿ ಇದ್ದು, ಸ್ಕೂಟರ್ ಮೆಲ್ಕಾರ್ ಆರ್‌ಟಿಒ ಕಚೇರಿ

ಉಳ್ಳಾಲ: ಮೆಹಂದಿ ಶಾಸ್ತ್ರದ ದಿನವೇ ನಾಪತ್ತೆಯಾಗಿದ್ದ ಯುವಕ ಬಳ್ಳಾರಿಯಲ್ಲಿ ಪತ್ತೆ Read More »

ಕರಾವಳಿ

ಉಳ್ಳಾಲ: ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಢಿಕ್ಕಿ     ➤  ಯುವಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಉಳ್ಳಾಲ, ಫೆ.23. ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಢಿಕ್ಕಿ ಹೊಡೆದು ಸ್ಕೂಟರಿನಲ್ಲಿದ್ದ ಸವಾರ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಉಳ್ಳಾಲದಲ್ಲಿ ವರದಿಯಾಗಿದೆ. ಅಂಗರಗುಂಡಿ ನಿವಾಸಿ ಮೊಹಮ್ಮದ್ ನೌಫಾಲ್ (26)ಮೃತ ಯುವಕ ಎಮದು ಗುರುತಿಸಲಾಗಿದೆ. ಸಹಸವಾರ ಉಮ್ಮರ್ ಫಾರುಕ್ ಎಂಬವರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಪಂಪ್ವೆಲ್ ಕಡೆಯಿಂದ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಈ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.    

ಉಳ್ಳಾಲ: ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಢಿಕ್ಕಿ     ➤  ಯುವಕನೋರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಟಯರ್ ಸಿಡಿದು ಟೆಂಪೋ ಪಲ್ಟಿ ➤ ರಸ್ತೆಯಲ್ಲಿ ಮೀನು ಚಲ್ಲಾಪಿಲ್ಲಿ

(ನ್ಯೂಸ್ ಕಡಬ)newskadaba.com ಉಳ್ಳಾಲ, ಫೆ.06. ತೊಕ್ಕೊಟ್ಟು ಕಲ್ಲಾಪು ಎಂಬಲ್ಲಿ ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಘಟನೆ ವರದಿಯಾಗಿದೆ. ಲಾರಿ ಚಾಲಕ ಸಾದಿಕ್ ಸ್ವಲ್ಪ ಗಾಯದಿಂದ ಪಾರಾಗಿದ್ದಾರೆ. ಮಂಗಳೂರು ಧಕ್ಕೆಯಿಂದ ಉಳ್ಳಾಲ ಫಿಷ್ ಮಿಲ್ ಗೆ ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋ, ಚಾಲಕನ ನಿಯಂತ್ರಣ ತಪ್ಪಿ ವಾಲಿದ್ದು, ಈ ವೇಳೆ ಟಯರ್ ಸಿಡಿದು ರಸ್ತೆಗೆ ಉರುಳಿದೆ ಎನ್ನಲಾಗಿದೆ. ಘಟನೆಯಿಂದ ರಸ್ತೆಯಲ್ಲಿ ಮೀನು ಚಲ್ಲಾಪಿಲ್ಲಿಯಾಗಿ ಹರಡಿಕೊಂಡಿದ್ದು ರಸ್ತೆ ಸಂಚಾರದಲ್ಲಿ ಅಡಚಣೆಯುಂಟಾಗಿದೆ. ಮಂಗಳೂರು

ಉಳ್ಳಾಲ: ಟಯರ್ ಸಿಡಿದು ಟೆಂಪೋ ಪಲ್ಟಿ ➤ ರಸ್ತೆಯಲ್ಲಿ ಮೀನು ಚಲ್ಲಾಪಿಲ್ಲಿ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ವೀರ ರಾಣಿ ಅಬ್ಬಕ್ಕನ ಥೀಮ್ ಪಾರ್ಕ್ ನಿರ್ಮಾಣವಾಗಬೇಕು ➤ ಶೋಭಾ ಕರಂದ್ಲಾಜೆ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.05. ತೊಕ್ಕೊಟ್ಟಿನ ಉದ್ದೇಶಿತ ಜಾಗದಲ್ಲಿ ಉಳ್ಳಾಲದ ರಾಣಿ ಅಬ್ಬಕ್ಕ ಹೆಸರಲ್ಲಿ ಭವನ ನಿರ್ಮಾಣ ಮಾತ್ರವಲ್ಲದೆ ಜೀಟಿಗೆ ಹಿಡಿದು ಪೋರ್ಚುಗೀಸರನ್ನ ಸೋಲಿಸಿದ ವೀರರಾಣಿಯ ಚರಿತ್ರೆ ದೇಶಕ್ಕೆ ತಿಳಿಸುವ ಥೀಮ್ ಪಾರ್ಕ್ ನಿರ್ಮಾಣವಾಗಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಹೇಳಿದ್ದಾರೆ. ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ನೆರಳಲ್ಲಿ ಉಳ್ಳಾಲದ ಮಹಾತ್ಮ ಗಾಂಧಿ ರಂಗ ಮಂದಿರದಲ್ಲಿ ನಡೆದ “ವೀರ ರಾಣಿ ಅಬ್ಬಕ್ಕ ಉತ್ಸವ”ದಲ್ಲಿ ಸಭಾಧ್ಯಕ್ಷತೆ ವಹಿಸಿ ಶೋಭಾ ಕರಂದ್ಲಾಜೆಯವರು ಮಾತನಾಡಿದರು. ರಾಣಿ ಅಬ್ಬಕ್ಕನಂತಹ ವೀರ

ಉಳ್ಳಾಲ: ವೀರ ರಾಣಿ ಅಬ್ಬಕ್ಕನ ಥೀಮ್ ಪಾರ್ಕ್ ನಿರ್ಮಾಣವಾಗಬೇಕು ➤ ಶೋಭಾ ಕರಂದ್ಲಾಜೆ Read More »

ಕರಾವಳಿ

ಉಳ್ಳಾಲ: ಸಮುದ್ರದಲ್ಲಿ ವೃದ್ದೆಯ ಶವ ಪತ್ತೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಫೆ.03. ಉಳ್ಳಾಲದ ಮುಕ್ಕಚ್ಚೇರಿ ಸಮುದ್ರ ಕಿನಾರೆಯಲ್ಲಿ ಅಪರಿಚಿತ ವೃದ್ದೆಯ ಮೃತದೇಹ ಪತ್ತೆಯಾಗಿದೆ. ಸುಮಾರು 60-70 ವರ್ಷದ ಮಹಿಳೆಯ ಶವ ಇದಾಗಿದೆ ಎಂದು ಅಂದಾಜಿಸಲಾಗಿದೆ. ಸೀರೆ ಉಟ್ಟಿರುವ ಮಹಿಳೆ ಸಮುದ್ರಕ್ಕೆ ಬಿದ್ದಿರುವ ಸಂಶಯ ವ್ಯಕ್ತವಾಗಿದೆ. ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶವ ತೇಲುತ್ತಿರುವುದನ್ನು ಕಂಡು ಸ್ಥಳೀಯರು ಉಳ್ಳಾಲ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ.  

ಉಳ್ಳಾಲ: ಸಮುದ್ರದಲ್ಲಿ ವೃದ್ದೆಯ ಶವ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಸಮುದ್ರ ತೀರದಲ್ಲಿ ಟ್ರಾಲ್‌ಬೋಟ್ ಅವಘಡ.! ➤ 8 ಮೀನುಗಾರರ ರಕ್ಷಣೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಫೆ.03. ಸಮುದ್ರ ತೀರದಿಂದ ಸುಮಾರು 12.5 ನಾಟಿಕಲ್ ದೂರದಲ್ಲಿ ಟ್ರಾಲ್‌ ಬೋಟ್‌ವೊಂದು ಅವಘಡಕ್ಕೀಡಾಗಿದ್ದು, ಭಾರೀ ನಷ್ಟ ಸಂಭವಿಸಿರುವ ಘಟನೆ ಉಳ್ಳಾಲದಲ್ಲಿ ನಡೆದಿದ್ದು, ಬೋಟಿನಲ್ಲಿದ್ದ 8 ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಬಾಲಕೃಷ್ಣ ಎಂಬವರ ಮಾಲಕತ್ವದ ಜಲ-ಮಾತಾ ಬೋಟು ಮೀನುಗಾರಿಕೆಗೆ ತೆರಳುತ್ತಿದ್ದಾಗ ಹಡಗಿನ ಅವಶೇಷಗಳಿಗೆ ತಾಗಿ ಜಖಂಗೊಂಡಿದೆ ಎನ್ನಲಾಗಿದೆ. ಇನ್ನು ತಕ್ಷಣ ಹತ್ತಿರದಲ್ಲೇ ಇದ್ದ ಲಲಿತಾ ಸಾಗರ ಎಂಬ ಹೆಸರಿನ ಬೋಟಿನಲ್ಲಿದ್ದ ಮೀನುಗಾರರು ಅಪಾಯಕ್ಕೆ ಸಿಲುಕಿದ್ದ ಮೀನುಗಾರರನ್ನು ರಕ್ಷಿಸಿದ್ದಾರೆ. ಈ

ಉಳ್ಳಾಲ: ಸಮುದ್ರ ತೀರದಲ್ಲಿ ಟ್ರಾಲ್‌ಬೋಟ್ ಅವಘಡ.! ➤ 8 ಮೀನುಗಾರರ ರಕ್ಷಣೆ Read More »

ಕರಾವಳಿ

ಉಳ್ಳಾಲ:  27 ಲಕ್ಷ ಮೌಲ್ಯದ ಭಾರೀ ಪ್ರಮಾಣದ ಗಾಂಜಾ‌ ವಶ   ➤ ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ)newskadaba.com ಉಳ್ಳಾಲ, ಫೆ.02. ಕೊಣಾಜೆ ಪೊಲೀಸ್ ಠಾಣಾ ಪಿಎಸ್ಸೈ ಶರಣಪ್ಪ ಭಂಡಾರಿಯವರು ಖಚಿತ ಮಾಹಿತಿ ಮೇರೆಗೆ ಕೇರಳ-ಕರ್ನಾಟಕ ಗಡಿ ಪ್ರದೇಶ ನೆತ್ತಿಲಪದವು ಎಂಬಲ್ಲಿ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಕಾರನ್ನು ವಶಕ್ಕೆ ಪಡೆದು ಸುಮಾರು 27 ಲಕ್ಷ ಮೌಲ್ಯದ ಗಾಂಜಾವನ್ನು ಸ್ವಾಧೀನಪಡಿಸಿದ್ದು, ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಕಡಪುರಂ ,ಹೊಸಬೆಟ್ಟು ನಿವಾಸಿ ಅಬೂಬಕ್ಕರ್ ಸಿದ್ದೀಕ್(35) ಅಲಿಯಾಸ್ ಹ್ಯಾರೀಸ್, ಕಾಸರಗೋಡು ಜಿಲ್ಲೆಯ ಮುದ್ರಾನ್ ಗ್ರಾಮದ ಕುಂಬಿ ನಿವಾಸಿ ಅಖಿಲ್‌ ಎಮ್(25) ಉದ್ಯಾವರ ,ಮಾಡ ನಿವಾಸಿ ಹೈದರ್

ಉಳ್ಳಾಲ:  27 ಲಕ್ಷ ಮೌಲ್ಯದ ಭಾರೀ ಪ್ರಮಾಣದ ಗಾಂಜಾ‌ ವಶ   ➤ ಆರೋಪಿಗಳು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ವಿಶೇಷ ಚೇತನ ಯುವತಿಯ ಶವ ಪತ್ತೆ ➤ ಕೊಲೆ ಶಂಕೆ…

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.01. ಯುವತಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದ್ದು, ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದರೂ ಬಾಯಿಗೆ ಬಟ್ಟೆಯನ್ನು ಗಟ್ಟಿಯಾಗಿ ಕಟ್ಟಿರುವುದು ಕೊಲೆ ಸಂಶಯ ವ್ಯಕ್ತಪಡಿಸಿದೆ. ಛತ್ತೀಸಗಢ ಮೂಲದ ಸರಿತಾ ವರ್ಮ(23) ನಿಗೂಢ ರೀತಿಯಲ್ಲಿ ಸಾವನ್ನಪ್ಪಿದಾಕೆ ಎನ್ನಲಾಗಿದೆ. ಇಬ್ಬರು ಸಹೋದರರು ಹಾಗೂ ಅತ್ತಿಗೆ ಜೊತೆ ಸರಿತಾ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಘಟನೆ ವೇಳೆ ಸಹೋದರರಿಬ್ಬರು ಕೆಲಸಕ್ಕೆ ತೆರಳಿದ್ದರೆ, ಅತ್ತಿಗೆ ಆಸ್ಪತ್ರೆಗೆ ತೆರಳಿದ್ದರು.

ಉಳ್ಳಾಲ: ವಿಶೇಷ ಚೇತನ ಯುವತಿಯ ಶವ ಪತ್ತೆ ➤ ಕೊಲೆ ಶಂಕೆ… Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top