ullala

ಉಳ್ಳಾಲ : ಭೀಕರ ಕಾರು ಅಪಘಾತ ➤ ಇನ್ನೋರ್ವ ಗಾಯಾಳು ಮೃತ್ಯು

(ನ್ಯೂಸ್ ಕಡಬ)newskadaba.com ಉಳ್ಳಾಲ, ಜ.31. ಕೊಲ್ಯ -ಅಡ್ಕ ನಡುವೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಪಘಾತ ನಡೆದ ಸ್ಥಳದಲ್ಲಿಯೇ ಕಾರು ಚಲಾಯಿಸುತ್ತಿದ್ದ ಸಹೋದರ ಅಬ್ದುಲ್ ರಿಫಾಯಿ ಮೃತಪಟ್ಟಿದ್ದು, ಉಪ್ಪಳ ಹಿದಾಯತ್ ನಗರದ ಬಾಷರ್ ಅಹಮ್ಮದ್ (22) ಇಂದು ಮೃತಪಟ್ಟಿದ್ದು, ಅವರು ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಸಿಎ ವಿದ್ಯಾರ್ಥಿಯಾಗಿದ್ದರು. ಗಲ್ಫ್ ನಿಂದ ಆಗಮಿಸಿದ್ದ ಮಹಮ್ಮದ್ ರಿಫಾಯಿ ತಂದೆಯ ಸಹೋದರನ ಪುತ್ರ ಬಾಷರ್ ಅಹಮ್ಮದ್ ಸೇರಿದಂತೆ ಆತನ ಸಹಪಾಠಿಗಳಾದ […]

ಉಳ್ಳಾಲ : ಭೀಕರ ಕಾರು ಅಪಘಾತ ➤ ಇನ್ನೋರ್ವ ಗಾಯಾಳು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ವಸತಿನಿಲಯ ತಲುಪಲು ಕತ್ತಲಲ್ಲಿ ವಿದ್ಯಾರ್ಥಿನಿಯರ ಪರದಾಟ ➤ ತುರ್ತು ಪರಿಹಾರಕ್ಕೆ ಸ್ಥಳೀಯರ ಆಗ್ರಹ

(ನ್ಯೂಸ್ ಕಡಬ)newskadaba.com ಉಳ್ಳಾಲ, ಜ. 25. ಕಗ್ಗತ್ತಲು ಆವರಿಸಿದ 500 ಮೀ ಉದ್ದದ ನಿರ್ಜನ ಪ್ರದೇಶದ ದಾರಿಯಲ್ಲಿ ಮೊಬೈಲ್ ಟಾರ್ಚ್ ಹಿಡಿದುಕೊಂಡೇ ವಿದ್ಯಾರ್ಥಿನಿಯರ ಪ್ರಯಾಣ, ಕೆಂಪು ತೈಲ ಮಿಶ್ರಿತ ಹಾಸ್ಟೆಲ್ ಬಾವಿ ನೀರು, ವಠಾರವಿಡೀ ತುಂಬಿದ ಶೌಚಾಲಯದ ಹೊಂಡದ ನೀರು, ಬಸ್ ವ್ಯವಸ್ಥೆಯಿಲ್ಲದೆ ವಿದ್ಯಾರ್ಥಿನಿಯರ ನರಕಯಾತನೆ. ಒಂದು ವರ್ಷದ ಹಿಂದೆ ನಿರ್ಮಾಣವಾದ ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ (ಶ್ರೀಮತಿ ಇಂದಿರಾಗಾಂಧಿ) ಮಹಿಳಾ ನರ್ಸಿಂಗ್ ವಿದ್ಯಾರ್ಥಿನಿ ನಿಲಯದ ವ್ಯಥೆ. ಮುಖ್ಯ ರಸ್ತೆಯಲ್ಲಿ ಬಸ್ಸಿನಿಂದ ಇಳಿಯುವ ವಿದ್ಯಾರ್ಥಿನಿಯರು 500

ಉಳ್ಳಾಲ: ವಸತಿನಿಲಯ ತಲುಪಲು ಕತ್ತಲಲ್ಲಿ ವಿದ್ಯಾರ್ಥಿನಿಯರ ಪರದಾಟ ➤ ತುರ್ತು ಪರಿಹಾರಕ್ಕೆ ಸ್ಥಳೀಯರ ಆಗ್ರಹ Read More »

ಕರಾವಳಿ
crime, arrest, suspected

ಉಳ್ಳಾಲ: ದರೋಡೆಗೆ ಹೊಂಚು ಹಾಕುತ್ತಿದ್ದ ಖದೀಮರು ಅರೆಸ್ಟ್…!

(ನ್ಯೂಸ್ ಕಡಬ) newskadaba.com  ಉಳ್ಳಾಲ, ಜ.14. ಕತ್ತಲಲ್ಲಿ ಅಂಗಡಿಗಳ ಬಳಿ ರಾಡಿನ ಜೊತೆಗೆ ಕುಳಿತಿದ್ದ ಇಬ್ಬರನ್ನು ಗಸ್ತು ತಿರುಗುತ್ತಿದ್ದ ಉಳ್ಳಾಲ ಪೊಲೀಸರು ಬಂಧಿಸಿದ್ದು, ಇಬ್ಬರು ಅಂಗಡಿ, ಎಟಿಎಂ, ಮನೆಗಳನ್ನು ದರೋಡೆ ನಡೆಸುವ ಹುನ್ನಾರ ಇಟ್ಟುಕೊಂಡು ಕುಳಿತಿರುವ ಸಂಶಯದಿಂದ ಪ್ರಕರಣ ದಾಖಲಿಸಲಾಗಿದೆ. ಮುಕ್ಕಚ್ಚೇರಿಯ ರಾಯಿಸ್ ಖಾನ್ (23) ಕುಂಪಲ ಯತೀಂ ಖಾನದ ಮಹಮ್ಮದ್ ಮುಜಾಂಬಿಲ್ (28) ಬಂಧಿತರು ಎಂದು ಗುರುತಿಸಲಾಗಿದೆ. ಜಂಕ್ಷನ್ನಿನ ಬಳಿಯ ಅಂಗಡಿಗಳ ಬಾಗಿಲು ಬಳಿ ಕತ್ತಲಲ್ಲಿ ಕುಳಿತಿದ್ದರು. ಗಸ್ತು ತಿರುಗುತ್ತಿದ್ದ ಉಳ್ಳಾಲ ಪೊಲೀಸರು ಅವರನ್ನು ಹಿಡಿದಾಗ

ಉಳ್ಳಾಲ: ದರೋಡೆಗೆ ಹೊಂಚು ಹಾಕುತ್ತಿದ್ದ ಖದೀಮರು ಅರೆಸ್ಟ್…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಜ್ವರದಿಂದ ಬಳಲುತ್ತಿದ್ದ ಬಾಲಕ ಮೃತ್ಯು..!

(ನ್ಯೂಸ್  ಕಡಬ) newskadaba.com ಉಳ್ಳಾಲ, ಡಿ. 30. ತಲೆನೋವು ಹಾಗೂ ಜ್ವರದಿಂದ ಬಳಲುತ್ತಿದ್ದ ಬಾಲಕನೋರ್ವ ಮೃತಪಟ್ಟ ಘಟನೆ ಉಳ್ಳಾಲದಲ್ಲಿ ವರದಿಯಾಗಿದೆ. ಮೃತ ಬಾಲಕನನ್ನು ಆಶ್ವಿತ್ ಎಂದು ಗುರುತಿಸಲಾಗಿದೆ. ಉಚ್ಚಿಲ ಬೋವಿ ಆಂಗ್ಲ ಮಾಧ್ಯಮದಲ್ಲಿ ಆರನೇ ತರಗತಿ ಓದುತ್ತಿದ್ದ ಬಾಲಕ ಮೆದುಳು ಜ್ವರದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಮೃತ ಬಾಲಕನ ತಂದೆ ಎರಡು ವರ್ಷಗಳ ಹಿಂದೆ ಅವಘಡವೊಂದರಲ್ಲಿ ಮೃತಪಟ್ಟಿದ್ದರು. ಆಶ್ವಿನ್ ಶಾಲೆಯಲ್ಲೂ ಪ್ರತಿಭಾನ್ವಿತನಾಗಿದ್ದು ಶಿಕ್ಷಕರ ಪ್ರೀತಿಗೆ ಪಾತ್ರನಾಗಿದ್ದ ಎಂದು ತಿಳಿದು ಬಂದಿದೆ.  

ಉಳ್ಳಾಲ: ಜ್ವರದಿಂದ ಬಳಲುತ್ತಿದ್ದ ಬಾಲಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಗೃಹ ಪ್ರವೇಶದ ಮನೆಯಲ್ಲಿ ಕಳ್ಳನ ಕೈಚಳಕ

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 21. ಕಳ್ಳನೋರ್ವ ಗೃಹ ಪ್ರವೇಶದ ಸಂದರ್ಭದಲ್ಲಿ ಎಲ್ಲರ ಮುಂದೆ ಕಳ್ಳತನ ಮಾಡಿ ನಂತರ ಅದೇ ದಿನ ರಾತ್ರಿ ನೆರೆ ಮನೆಯಿಂದಲೂ ಲಕ್ಷಾಂತರ ಮೌಲ್ಯದ ನಗದನ್ನು ದೋಚಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಾರು ಬಳಿ ನಡೆದಿದೆ. ಈತ ಹೋಮ ನಡೆಯುತ್ತಿದ್ದ ವೇಳೆ ಮನೆಯೊಳಗೆ ನುಗ್ಗಿ ಬ್ಯಾಗಲ್ಲಿದ್ದ ರೂ 15,000 ನಗದು, ಮೊಬೈಲ್ ಜಾರ್ಜರ್ ಮತ್ತು ಬೆಲೆ ಬಾಳುವ ಕಾಸ್ಮೆಟಿಕ್ಸ್ ಕಳವು ಮಾಡಿ ಹೊರಬಂದ ದೃಶ್ಯ ಹಾಗೂ ಅದೇ ದಿನ

ಉಳ್ಳಾಲ: ಗೃಹ ಪ್ರವೇಶದ ಮನೆಯಲ್ಲಿ ಕಳ್ಳನ ಕೈಚಳಕ Read More »

ಕರಾವಳಿ, ಕರ್ನಾಟಕ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಪೊಲೀಸ್ ಬಲೆಗೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 13. ತೆಂಗಿನಕಾಯಿ ಕೀಳಲೆಂದು ಬಂದವ ಮನೆಯಲ್ಲಿ ಒಂಟಿಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ಬಂಧಿತನನ್ನು ಮಂಜನಾಡಿ ನಿವಾಸಿ ಬಶೀರ್(28) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ತೆಂಗಿನಕಾಯಿ ಕೀಳುವ ಕೆಲಸ ಮಾಡುತ್ತಿದ್ದ ಈತ, ಬಾಲಕಿಯ ಮನೆಮಂದಿಗೆ ಪರಿಚಿತ. ಈತ ಸೋಮವಾರದಂದು ಮಧ್ಯಾಹ್ನದ ವೇಳೆ ತೆಂಗಿನಕಾಯಿ ತೆಗೆಯುವುದಾಗಿ ಹೇಳಿಕೊಂಡು ಬಂದಿದ್ದು, ಈ ವೇಳೆ ಬಾಲಕಿ ಒಂಟಿಯಾಗಿರುವುದನ್ನು ಕಂಡು

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಪೊಲೀಸ್ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಯುವಕನೋರ್ವನಿಂದ ಮಹಿಳೆಗೆ ಲೈಂಗಿಕ ಕಿರುಕುಳ ➤ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಉಳ್ಳಾಲ ಡಿ.08. ಯುವಕನೋರ್ವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬುಧವಾರದಂದು ರಾತ್ರಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿ  ಅಡ್ಯಾರ್ ಪದವು ನಿವಾಸಿ ಮುನೀರ್ (27) ಎಂದು ಗುರುತಿಸಲಾಗಿದೆ.  ಮುನೀರ್ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು ಅದೇ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ವರದಿಯಾಗಿದೆ. ಇವರು ಪರಸ್ಪರ ಪ್ರೀತಿಸುತ್ತಿದ್ದು ಬುಧವಾರ ರಾತ್ರಿ ಮುನೀರ್ ಮಹಿಳೆಯನ್ನು ಭೇಟಿಯಾಗಿದ್ದ ವೇಳೆ ಹಿಂದೂ ಸಂಘಟನೆಗಳ

ಯುವಕನೋರ್ವನಿಂದ ಮಹಿಳೆಗೆ ಲೈಂಗಿಕ ಕಿರುಕುಳ ➤ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲದ ಮಹಿಳೆಗೆ ಕೊರೊನಾ ಪಾಸಿಟಿವ್‌ ➤ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಭೀತಿ..!!!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.24,. ಬೇಧಿಯ ಕಾರಣದಿಂದ 8 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಉಳ್ಳಾಲದ ಅಝಾದ್‌ ನಗರದ ಮಹಿಳೆಗೆ ಕೊರೊನಾ ಪಾಸಿಟಿವ್‌ ಆಗಿದ್ದು ಆಸ್ಪತ್ರೆಯಲ್ಲಿದ್ದ ಸಿಬ್ಬಂದಿಗಳಿಗೆ ಹಾಗೂ ಇತರ ರೋಗಿಗಳಿಗೆ ಭೀತಿ ಉಂಟಾಗಿದೆ. ಉಳ್ಳಾಲದ ಅಝಾದ್‌ ನಗರದ 57 ವರ್ಷದ ಮಹಿಳೆಯನ್ನು ಬೇಧಿಯ ಕಾರಣದಿಂದ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 8 ದಿನಗಳ ಕಾಲ ಅವರು ಅಲ್ಲಿಯೇ ಚಿಕಿತ್ಸೆ ಪಡೆದಿದ್ದರು. ನಂತರ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಪಾಸಿಟಿವ್‌

ಉಳ್ಳಾಲದ ಮಹಿಳೆಗೆ ಕೊರೊನಾ ಪಾಸಿಟಿವ್‌ ➤ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಭೀತಿ..!!! Read More »

ಕರಾವಳಿ

ಉಳ್ಳಾಲ: ಮುಂದುವರಿದ ಕಡಲ‌ಬ್ಬರ ► ರೆಸಾರ್ಟ್ ತಡೆಗೋಡೆ ಕುಸಿತ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.03. ಓಖಿ ಚಂಡಮಾರುತದ ಪರಿಣಾಮದಿಂದಾಗಿ ಸೋಮೇಶ್ವರ, ಉಳ್ಳಾಲ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿಯಿಂದ ಎದ್ದಿರುವ ಸಮುದ್ರದ ಅಲೆಗಳ ಅಬ್ಬರವು ಭಾನುವಾರ ಬೆಳಗ್ಗೆಯೂ ಮುಂದುವರಿದಿದೆ. ಶನಿವಾರ ರಾತ್ರಿಯಿಂದ ಸಮುದ್ರದ ಬೃಹತ್ ಅಲೆಗಳು ಸೋಮೇಶ್ವರ, ಉಚ್ಚಿಲ ಪರಿಸರದ ಕೆಲವು ಮನೆಗಳಿಗೆ ಅಪ್ಪಳಿಸಿ ಸಮುದ್ರ ತೀರದ ನಿವಾಸಿಗಳನ್ನು ಆತಂಕಗೊಳಿಸಿತ್ತು. ಉಳ್ಳಾಲದ ರೆಸಾರ್ಟ್ ಒಂದರ ತಡೆಗೋಡೆಯು ಸಮುದ್ರದ ಅಲೆಗಳಿಗೆ ಸಿಲುಕಿ ಕುಸಿದಿತ್ತು. ಶನಿವಾರ ತಡರಾತ್ರಿಯಿಂದ ಸಮುದ್ರವು ಶಾಂತವಾಗತೊಡಗಿದ್ದು ಅಲೆಗಳ ಅಬ್ಬರ ಮಾತ್ರ ಮುಂದುವರಿದಿದೆ. ಮುಂಜಾಗ್ರತ ಕ್ರಮವಾಗಿ ಪರಿಸರದ ವಿವಿಧೆಡೆ

ಉಳ್ಳಾಲ: ಮುಂದುವರಿದ ಕಡಲ‌ಬ್ಬರ ► ರೆಸಾರ್ಟ್ ತಡೆಗೋಡೆ ಕುಸಿತ Read More »

ಕರಾವಳಿ

ಮೈಸೂರಲ್ಲಿ ಭೀಕರ ಅಪಘಾತ ► ಉಳ್ಳಾಲ ಮೂಲದ ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ನ.14. ಇಲ್ಲಿನ ಹುಣಸೂರು ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ ಮಂಗಳೂರು ನಗರದ ಉಳ್ಳಾಲ ಮೂಲದ ಮೂವರು ಸಾವನಪ್ಪಿದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಮೃತರನ್ನು ತೊಕ್ಕೊಟು ಸಮೀಪದ ಉಳ್ಳಾಲದ ಅಬ್ದುಲ್ ಹಮೀದ್(47), ಸಹೋದರ ಮಹಮದ್ ಇಕ್ಬಾಲ್(37) ಹಾಗೂ ಹಮೀದ್ ಪುತ್ರ ಶೇಕ್ ಹಕೀಬ್(18) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರ ಸಂಜೆ ಪ್ರವಾಸಕ್ಕೆಂದು ತೊಕ್ಕೊಟ್ಟು ವಿನಿಂದ ಊಟಿಗೆ ಕುಟುಂಬ ಸಮೇತ ತೆರಳುತ್ತಿದ್ದರು. ಈ ವೇಳೆ ಮೈಸೂರಿನ ಬಸರಿಕಟ್ಟೆ ಬಳಿ ಟೆಂಪೋ

ಮೈಸೂರಲ್ಲಿ ಭೀಕರ ಅಪಘಾತ ► ಉಳ್ಳಾಲ ಮೂಲದ ಮೂವರು ಮೃತ್ಯು Read More »

ಕರಾವಳಿ
Scroll to Top