ullala

ತಲಪಾಡಿ: ಮೂವರ ಸಾವಿಗೆ ವಿಷಾನಿಲ ಸೇವನೆ ಕಾರಣ ► ಜನರೇಟರ್ ಹೊಗೆಯಿಂದ ಉಂಟಾದ ಕಾರ್ಬನ್ ಮಾನಾಕ್ಸೈಡ್ ಗೆ ಮೂವರು ಬಲಿ

(ನ್ಯೂಸ್ ಕಡಬ) newskadaba.com ತಲಪಾಡಿ, ನ.07, ಇಲ್ಲಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ಮೂವರ ಅನುಮಾನಾಸ್ಪದ ಸಾವಿಗೆ ಕಾರ್ಬನ್‌ ಮಾನಾಕ್ಸೈಡ್ ಕಾರಣ ಎಂದು ತಿಳಿದುಬಂದಿದೆ. ಕೋಟೆಕಾರು ಶಾಖೆಯ ಭದ್ರತಾ ಸಿಬ್ಬಂದಿಗಳಾದ ಉಮೇಶ್, ಸಂತೋಷ್ ಮತ್ತು ಸೋಮನಾಥ್ ಎಂಬವರು ಸೋಮವಾರದಂದು ಗುಡುಗು ಮಳೆ ಇದ್ದ ಹಿನ್ನೆಲೆಯಲ್ಲಿ ಜನರೇಟರ್ ಚಾಲನೆ ಮಾಡಿ ಫ್ಯಾನ್ ಹಾಕಿ‌ ಶಾಖೆಯ ಒಳಗಡೆ ಮಲಗಿದ್ದು, ಜನರೇಟರ್ ನ ಹೊಗೆಯಿಂದ ಉತ್ಪತ್ತಿಯಾಗುವ ಕಾರ್ಬನ್ ಮಾನಾಕ್ಸೈಡ್ ವಿಷಾನಿಲ ಸೇವಿಸಿ ಮೃತಪಟ್ಟಿದ್ದಾರೆನ್ನಲಾಗಿದೆ‌. ಈ ಬಗ್ಗೆ ಶಾಖೆಯ ಸಿಸಿ […]

ತಲಪಾಡಿ: ಮೂವರ ಸಾವಿಗೆ ವಿಷಾನಿಲ ಸೇವನೆ ಕಾರಣ ► ಜನರೇಟರ್ ಹೊಗೆಯಿಂದ ಉಂಟಾದ ಕಾರ್ಬನ್ ಮಾನಾಕ್ಸೈಡ್ ಗೆ ಮೂವರು ಬಲಿ Read More »

ಕರಾವಳಿ

ಉಳ್ಳಾಲ: ವಾಚು, ಚಪ್ಪಲಿ, ಕನ್ನಡಕ, ಸೇತುವೆ ಮೇಲಿಟ್ಟು ► ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಕಡಬ,ಅ12. ಅಪರಿಚಿತ ವ್ಯಕ್ತಿಯೊರ್ವ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಉಳ್ಳಾಲ ಸಮೀಪ  ಬೆಳಕಿಗೆ ಬಂದಿದೆ. ಅಪರಿಚಿತ ವ್ಯಕ್ತಿ ತನ್ನ ವಾಚು, ಚಪ್ಪಲಿ, ಕನ್ನಡಕ, ನೇತ್ರಾವತಿ ಸೇತುವೆಯ ಮೇಲಿಟ್ಟು ನದಿಗೆ ಹಾರಿದ್ದಾನೆ. ದಾರಿಯಲ್ಲಿ ಸಾಗುವ ವಾಹನ ಚಾಲಕರು ವ್ಯಕ್ತಿಯನ್ನು ತಡೆಯಲು ಮುಂದಾಗುತ್ತಿದ್ದಂತೆ ನದಿಗೆ ಹಾರಿದ್ದಾನೆ ಎನ್ನಲಾಗಿದೆ. ಈ ಕುರಿತು ಉಳ್ಳಾಲ ಠಾಣೆಗೆ ಮಾಹಿತಿ ನೀಡಲಾಗಿದ್ದು, ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಉಳ್ಳಾಲ: ವಾಚು, ಚಪ್ಪಲಿ, ಕನ್ನಡಕ, ಸೇತುವೆ ಮೇಲಿಟ್ಟು ► ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಶರಣು Read More »

ಕರಾವಳಿ

ಲಾರಿ ಹರಿದು ಯುವಕ ದಾರುಣ ಮೃತ್ಯು ► ಮೃತನ ವಾಹನದಲ್ಲಿ ಗಾಂಜ ಪತ್ತೆ..!!!

(ನ್ಯೂಸ್ ಕಡಬ) newskadaba.com ಉಳ್ಳಾಲ ,ಅ.12. ವೇಗವಾಗಿ ಬಂದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ  ದ್ವಿಚಕ್ರ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ತೊಕ್ಕಟಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತ ಯುವಕನ್ನು ಬೆಳ್ತಂಗಡಿ ಮೂಲದ ಸಲೀಂ(30) ಕೇ.ಸಿ.ರೋಡ್ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದ ಸ್ಟಾಂಡ್ ಹಾಕಿ ವಾಹನ ಚಲಿಸಿದ್ದೇ ಈ ದುರ್ಘಟನೆಗೆ ಕಾರಣ ಎಂದು ಹೇಳಲಾಗ್ತಿದೆ. ಮೃತನ ದ್ವಿಚಕ್ರ ವಾಹನದಲ್ಲಿ ಎರಡು ಪ್ಯಾಕೆಟ್ ಗಾಂಜ ಪತ್ತೆಯಾಗಿದ್ದು ಈತ ಗಾಂಜ ಸೇವಿಸಿ ವಾಹನ ಚಲಾಯಿಸಿದ್ದಾನೆಯೇ ಎಂಬುದು ಇನ್ನು ನಿಖರವಾಗಿ ತಿಳಿದು ಬಂದಿಲ್ಲ.

ಲಾರಿ ಹರಿದು ಯುವಕ ದಾರುಣ ಮೃತ್ಯು ► ಮೃತನ ವಾಹನದಲ್ಲಿ ಗಾಂಜ ಪತ್ತೆ..!!! Read More »

ಕರಾವಳಿ

ಉಳ್ಳಾಲ: ಬಿಜೆಪಿ ಕಾರ್ಯಕರ್ತ ಝುಬೈರ್ ಕೊಲೆ ಪ್ರಕರಣ ► ಆರೋಪಿಗಳ ಬಂಧನ

 (ನ್ಯೂಸ್ ಕಡಬ) newskadaba.com ಮಂಗಳೂರು, ಅ.12. ಬಿಜೆಪಿ ಕಾರ್ಯಕರ್ತ ಝುಬೈರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಹೈಲ್, ನಿಜಾಮುದ್ದೀನ್, ಮಹಮ್ಮದ್ ಮುಸ್ತಫಾ, ತಾಜುದ್ದೀನ್ ಮತ್ತು ಆಸಿಫ್ ಬಂಧಿತ ಆರೋಪಿಗಳಾಗಿದ್ದು, ಹಳೇ ದ್ವೇಷದಿಂದ ಝುಬೈರ್ ನನ್ನು ಕೊಲೆ ಮಾಡಲಾಗಿದೆ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ. ಕೊಲೆಗೆ ಸಂಚು ರೂಪಿಸಿದ್ದ ಇನ್ನೂ ಮೂವರು ಆರೋಪಿಗಳಿಗೆ ಶೋಧ ನಡೆಯುತ್ತಿದೆ. ರೌಡಿಸಂ ಮಟ್ಟ ಹಾಕಲು ಎರಡು ತಂಡಗಳ ರಚನೆಯಾಗಿದ್ದು, ಶೀಘ್ರದಲ್ಲಿ ಆರೋಪಿಗಳನ್ನು ಮಟ್ಟ ಹಾಕಲಿದ್ದೇವೆ ಎಂದು ಪೊಲೀಸ್ ಕಮಿಷನರ್ ಟಿ.ಆರ್

ಉಳ್ಳಾಲ: ಬಿಜೆಪಿ ಕಾರ್ಯಕರ್ತ ಝುಬೈರ್ ಕೊಲೆ ಪ್ರಕರಣ ► ಆರೋಪಿಗಳ ಬಂಧನ Read More »

ಕರಾವಳಿ

ಸಚಿವ ಯು.ಟಿ ಖಾದರ್ ಕಾರಿಗೆ ಕಲ್ಲು ಎಸೆದು ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಮಂಗಳೂರು, ಅ.7. ಉಳ್ಳಾಲ ಮುಕ್ಕಚ್ಚೇರಿ ಸಮೀಪ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಝುಬೈರ್ ಅವರ ಮನೆಗೆ ಭೇಟಿ ನೀಡಲು ಬಂದ ಆಹಾರ ಸಚಿವ ಯು.ಟಿ ಖಾದರ್ ಅವರನ್ನು ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿರುವ ಘಟನೆ ನಡೆದಿದೆ. ಖಾದರ್ ರವರ ಸ್ವಕ್ಷೇತ್ರ ಉಳ್ಳಾಲದ ಮುಕ್ಕಚ್ಚೇರಿಯಲ್ಲಿರುವ ಝುಬೈರ್ ಮನೆಗೆ ಬೇಟಿ ನೀಡಲು ಹೋಗುತ್ತಿದ್ದ ವೇಳೆಯಲ್ಲಿ, ಖಾದರ್ ಕಾರ್‍ಗೆ ಬಿಜೆಪಿ ಕಾರ್ಯಕರ್ತರು ಕಲ್ಲು ಎಸೆದು ಮುತ್ತಿಗೆ ಹಾಕಿದ್ದಾರೆ. ನಂತರ ಖಾದರ್ ಬೇರೆ ಕಾರಿನಲ್ಲಿ ಹೋಗಿದ್ದಾರೆ. ಖಾದರ್ ಮಾತನಾಡಿ, ಎಸಿಪಿ

ಸಚಿವ ಯು.ಟಿ ಖಾದರ್ ಕಾರಿಗೆ ಕಲ್ಲು ಎಸೆದು ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು Read More »

ಕರಾವಳಿ

ನೇತ್ರಾವತಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ರಿಕ್ಷಾ ಚಾಲಕನ ಮೃತ ದೇಹ ಪತ್ತೆ..

 (ನ್ಯೂಸ್ ಕಡಬ) newskadaba.com ಮಂಗಳೂರು, ಅ.6. ಆಟೋ ಚಾಲಕರೊಬ್ಬರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಸಮೀಪದಲ್ಲಿ ಗುರುವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ ಕೋಡಿಕಲ್ ಅಶೋಕ ನಗರದ ಮಹಮ್ಮದ್ ಬಶೀರ್ (35) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ತೊಕ್ಕೊಟು ಕಡೆಗೆ ಹೋಗುತ್ತಿದ್ದ ವೇಳೆ ಆಟೋ ನಿಲ್ಲಿಸಿ ನದಿಗೆ ಹಾರಿದ್ದಾರೆ. ಹಾರಿದ ಕೆಲವೇ ಕ್ಷಣದಲ್ಲಿ ಸಾರ್ವಜನಿಕರು ಜಮಾಯಿದ್ದು ಕೂಡಲೆ ಪೊಲೀಸರಿಗೆ ಸುದ್ಧಿ ಮುಟ್ಟಿದ್ದಾರೆ. ನದಿಗೆ ಬಿದ್ದು ನೀರಿನಲ್ಲಿ ವಿಲವಿಲ ಒದ್ದಾಡಿದ ದೃಶ್ಯ ಮೊಬೈಲ್ ನಲ್ಲಿ

ನೇತ್ರಾವತಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ರಿಕ್ಷಾ ಚಾಲಕನ ಮೃತ ದೇಹ ಪತ್ತೆ.. Read More »

ಕರಾವಳಿ

ಉಳ್ಳಾಲ: ಯುವಕರಿಬ್ಬರಿಗೆ ಚೂರಿ ಇರಿತ ► ಓರ್ವ ಮೃತ್ಯು, ಇನ್ನೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.03. ಮುಸುಕುಧಾರಿಗಳ ತಂಡವೊಂದು ಯುವಕರಿಬ್ಬರ ಮೇಲೆ ತಲವಾರಿನಿಂದ ದಾಳಿ ನಡೆಸಿದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಉಳ್ಳಾಲ ಸಮೀಪದ ಮುಕ್ಕಚ್ಚೇರಿ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ಜುಬೈರ್ ಎಂದು ಗುರುತಿಸಲಾಗಿದ್ದು, ಜತೆಗಿದ್ದ ಇಲ್ಯಾಸ್ ಎಂಬವರ ಕೈ, ಕಾಲು ಸೇರಿದಂತೆ ಹಲವೆಡೆ ಇರಿಯಲಾಗಿದೆ. ದುಷ್ಕರ್ಮಿಗಳ ದಾಳಿಗೆ ಒಳಗಾದ ಜುಬೈರ್ ಆಸ್ಪತ್ರೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆನ್ನಲಾಗಿದೆ‌. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ

ಉಳ್ಳಾಲ: ಯುವಕರಿಬ್ಬರಿಗೆ ಚೂರಿ ಇರಿತ ► ಓರ್ವ ಮೃತ್ಯು, ಇನ್ನೋರ್ವ ಗಂಭೀರ Read More »

ಕರಾವಳಿ

ಉಳ್ಳಾಲ: ವ್ಯಕ್ತಿಯ ಕೊಲೆ‌ ಮಾಡಲೆಂದು ಮನೆಗೆ ನುಗ್ಗಿದ ದುಷ್ಕರ್ಮಿಗಳು ► ಮನೆಯವರಿಗೆ ಮಚ್ಚಿನಿಂದ ಹಲ್ಲೆ ಮಾಡಿ ಪರಾರಿ..!!!

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.03, ಪವಿತ್ರ ಉಳ್ಳಾಲ ದರ್ಗಾ ಸಮೀಪವಿರುವ ಮನೆಮನೆಯೊಂದಕ್ಕೆ ನುಗ್ಗಿದ 15 ಜನ ದುಷ್ಕರ್ಮಿಗಳ ತಂಡ ವೊಂದು ಮನೆಯವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಶನಿವಾರ ರಾತ್ರಿ 11.30 ರ ಸುಮಾರಿಗೆ ಈ ಘಟನೆ ಜರುಗಿದ್ದು, 15 ಜನರ ಗುಂಪೊಂದು ಲಾಂಗು ಮಚ್ಚು ಹಿಡಿದು ಮನೆ ಮಾಲೀಕ ಖಾಸಿಮ್, ಪತ್ನಿ ಮೈಮುನಾ ಮಕ್ಕಳಾದ ಸೋಯಲ್, ಅಮಿನ್ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ಖಾಸಿಮ್‌

ಉಳ್ಳಾಲ: ವ್ಯಕ್ತಿಯ ಕೊಲೆ‌ ಮಾಡಲೆಂದು ಮನೆಗೆ ನುಗ್ಗಿದ ದುಷ್ಕರ್ಮಿಗಳು ► ಮನೆಯವರಿಗೆ ಮಚ್ಚಿನಿಂದ ಹಲ್ಲೆ ಮಾಡಿ ಪರಾರಿ..!!! Read More »

ಕರಾವಳಿ
Scroll to Top