uppinangadi

ಉಪ್ಪಿನಂಗಡಿ: ಆಶ್ರಮದ ಹೆಸರೇಳಿಕೊಂಡು ಬಟ್ಟೆ ಬರೆ ಸಂಗ್ರಹಿಸಿ ವಂಚನೆ !

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಫೆ.22. ಆಶ್ರಮಕ್ಕೆ ಹಣ, ಹಳೆ ಬಟ್ಟೆ ಸಂಗ್ರಹಿಸುತ್ತಿದ್ದೇವೆಂದು ನಕಲಿ ಐಡಿ ಕಾರ್ಡ್ ತೋರಿಸಿ ತಂಡವೊಂದು ಭಿಕ್ಷಾಟನೆ ನಡೆಸುತ್ತಿರುವ ಘಟನೆ ಉಪ್ಪಿನಂಗಡಿಯಲ್ಲಿ ಸಕ್ರಿಯವಾಗಿದೆ. ಈ ತಂಡ ಮನೆಯೊಂದಕ್ಕೆ ತೆರಳಿದ ವೇಳೆ ಅವರ ವಂಚನೆ ಬಯಲಾಗಿದೆ. ಸಾಮಾಜಿಕ ಕಾರ್ಯಕರ್ತ ಪ್ರದೀಪ್ ಅವರ ಮನೆಗೆ ಇಬ್ಬರು ಹೆಂಗಸರು ಸೋಮವಾರ ಬಂದಿದ್ದು, ಮೈಸೂರಿನ ಇಲವಾಲದ ಬಳಿಯ ಅಂಗವಿಕಲ ಮತ್ತು ವೃದ್ದಾಶ್ರಮಕ್ಕೆ ಬಟ್ಟೆ, ಬರೆ, ಹಣಕಾಸಿನ ನೆರವು ನೀಡುತ್ತಿದ್ದೇವೆ. ಅದಕ್ಕಾಗಿ ನಮಗೆ ನಿಮ್ಮ ಸಹಕಾರ ಅಗತ್ಯ ಎಂದಿದ್ದರು ಎನ್ನಲಾಗಿದೆ.

ಉಪ್ಪಿನಂಗಡಿ: ಆಶ್ರಮದ ಹೆಸರೇಳಿಕೊಂಡು ಬಟ್ಟೆ ಬರೆ ಸಂಗ್ರಹಿಸಿ ವಂಚನೆ ! Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ)newskadab.com  ಉಪ್ಪಿನಂಗಡಿ, ಜ.18. ಟಯರ್‌ ರಿಸೋಲ್‌ ಸಂಸ್ಥೆಯೊಂದರಲ್ಲಿ ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಕಾರ್ಮಿಕ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್‌ ಬಳಿಯಲ್ಲಿ  ನಡೆದಿದೆ. ಉಪ್ಪಿನಂಗಡಿ ಗಾಂಧಿ ಪಾರ್ಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡಿಯನ್ ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಆಲಂಕಾರು ಮೂಲದ ರಾಜೇಶ್ ಪೂಜಾರಿ (43) ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಏರ್ ಕಂಪ್ರೆಸರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ರಾಜೇಶ್ ರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.  

ಉಪ್ಪಿನಂಗಡಿ: ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಕಾರ್ಮಿಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

 ಉಪ್ಪಿನಂಗಡಿ: ಟ್ಯಾಂಕರ್ ಚಲಾಯಿಸುವಾಗಲೇ ಹೃದಯಾಘಾತದಿಂದ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com   ಉಪ್ಪಿನಂಗಡಿ, ಜ.14. ಟ್ಯಾಂಕರ್ ಚಲಾಯಿಸುವಾಗಲೇ ಹೃದಯಾಘಾತಕ್ಕೀಡಾಗಿ ಚಾಲಕ ಕಿಶೋರ್ ಕುಮಾರ್ (53) ಎಂಬವರು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ವರದಿಯಾಗಿದೆ. ಮೂಲತಃ ಮಂಗಳೂರಿನ ಕಾವೂರು ನಿವಾಸಿಯಾಗಿದ್ದ ಕಿಶೋರ್ ಕುಮಾರ್ ಬೆಂಗಳೂರಿನಿಂದ ಮಂಗಳೂರಿನತ್ತ ಟ್ಯಾಂಕರ್ ಚಲಾಯಿಸುತ್ತಿದ್ದಾಗ ಉಪ್ಪಿನಂಗಡಿ ಸಮೀಪಿಸುತ್ತಿದ್ದಂತೆಯೇ ಹೃದಯಾಘಾತಕ್ಕೆ ಒಳಗಾಗಿರುವುದಾಗಿ ತಿಳಿದುಬಂದಿದೆ. ಕೂಡಲೇ ಟ್ಯಾಂಕರ್ ನಲ್ಲಿದ್ದ ಸಹ ಚಾಲಕ ಟ್ಯಾಂಕರ್‌ನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಅವರನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾದರಾದರೂ ಆಸ್ಪತ್ರೆಯಲ್ಲಿ ಅವರು ಮೃತ ಪಟ್ಟಿದ್ದಾರೆಂದು ಘೋಷಿಸಲಾಯಿತು. ಪ್ರಕರಣಕ್ಕೆ ಸಂಬಂಧಿಸಿ ನಿಶಾಂತ್ ಶೆಟ್ಟಿ ನೀಡಿದ ದೂರಿನ

 ಉಪ್ಪಿನಂಗಡಿ: ಟ್ಯಾಂಕರ್ ಚಲಾಯಿಸುವಾಗಲೇ ಹೃದಯಾಘಾತದಿಂದ ಚಾಲಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾರ್ಯಕಾರಿ ಸಭೆ ಹಾಗೂ ಜನಧ್ವನಿ ಸಮಾವೇಶ ಪೂರ್ವ ಭಾವಿ ಸಭೆ..!

(ನ್ಯೂಸ್ ಕಡಬ) newskadaba.com  ಉಪ್ಪಿನಂಗಡಿ, ಜ.13. ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಸಭೆಯು ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಟಿ ಶಕುಂತಲಾ ಶೆಟ್ಟಿಯವರ ನೇತೃತ್ವದಲ್ಲಿ ಹಾಗೂ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ.ಕೆ ಬಿ ರಾಜಾರಾಮ್ ಅವರ ಅಧ್ಯಕ್ಷತೆಯಲ್ಲಿ ಉಪ್ಪಿನಂಗಡಿ ರೋಟರಿ ಸಭಾಭವನ ರಾಮನಗರದಲ್ಲಿ ನಡೆಯಿತು. ಈ ಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಆಗಮಿಸಿದ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಜಿ ವೆಂಕಟೇಶ್ ಅವರು ಮಾತನಾಡಿ ಜನವರಿ 22 ರಂದು ಮಂಗಳೂರಲ್ಲಿ ನಡೆಯುವ ಕರ್ನಾಟಕ

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾರ್ಯಕಾರಿ ಸಭೆ ಹಾಗೂ ಜನಧ್ವನಿ ಸಮಾವೇಶ ಪೂರ್ವ ಭಾವಿ ಸಭೆ..! Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ: ಹೆಚ್ಚಾದ ಹುಚ್ಚು ನಾಯಿ ಹಾವಳಿ..! ➤ ಹಲವರಿಗೆ ಕಡಿತ

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಜ. 09. ಹುಚ್ಚುನಾಯಿಯ ಹಾವಳಿ ಮತ್ತೆ ಆರಂಭವಾಗಿದ್ದು,  ಐದಾರು ಮಂದಿಗೆ ಹುಚ್ಚು ನಾಯಿಯೊಂದು ಕಚ್ಚಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ದ್ವಿಚಕ್ರ ವಾಹನ ಚಲಾಯಿಸಲು ಮುಂದಾಗಿದ್ದ ಪತ್ರಕರ್ತರೋರ್ವರ ಮೇಲೆ ದಾಳಿ ಮಾಡಿದ ಹುಚ್ಚು ನಾಯಿ ಅವರ ಕಾಲನ್ನು ಕಚ್ಚಿ ಗಂಭೀರ ಗಾಯಗೊಳಿಸಿದೆ. ಗಾಯಾಳುವನ್ನು ಉಪ್ಪಿನಂಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ವ್ಯಕ್ತಿಯೋರ್ವರ ಮೇಲೆ ದಾಳಿ ನಡೆಸಿ ಓಡಿ ಹೋಗುವ ಸಮಯದಲ್ಲಿ ಸ್ಥಳದಲ್ಲೇ ಇದ್ದ ಕಾರ್ಮಿಕನಿಗೆ ಕಚ್ಚಿದ್ದು,

ಉಪ್ಪಿನಂಗಡಿ: ಹೆಚ್ಚಾದ ಹುಚ್ಚು ನಾಯಿ ಹಾವಳಿ..! ➤ ಹಲವರಿಗೆ ಕಡಿತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಾ. 11 ಮತ್ತು 12 ರಂದು ವಿಜಯ-ವಿಕ್ರಮ ಜೋಡುಕರೆ ಕಂಬಳ               

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 02.  ಉಪ್ಪಿನಂಗಡಿ ಇಲ್ಲಿನ ಕೂಟೇಲು ಸೇತುವೆ ಬಳಿ ನೇತ್ರಾವತಿ ನದಿ ದಡದಲ್ಲಿ ವರ್ಷಂಪ್ರತಿ ನಡೆಯುವ ವಿಜಯ-ವಿಕ್ರಮ ಜೋಡುಕರೆ ಕಂಬಳ ಮಾ. 11 ಮತ್ತು 12ರಂದು ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ, ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ತಿಳಿಸಿದರು. ಈ ಕುರಿತು ಉಪ್ಪಿನಂಗಡಿ ನೇತ್ರಾವತಿ ನದಿ ಕಿನಾರೆಯಲ್ಲಿ ವಿಜಯ-ವಿಕ್ರಮ ಕಂಬಳ ಸಮಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಂಬಳ ಈ ಹಿಂದಿಗಿಂತಲೂ ಹೆಚ್ಚಿನ ವೈಭವಯುತವಾಗಿ ನಡೆಯಲು ಎಲ್ಲರೂ ಸಹಕರಿಸಬೇಕು

ಮಾ. 11 ಮತ್ತು 12 ರಂದು ವಿಜಯ-ವಿಕ್ರಮ ಜೋಡುಕರೆ ಕಂಬಳ                Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ: ಡಾ.ಸುಪ್ರೀತ್ ಲೋಬೋರವರಿಗೆ ಆಯುರ್ವೇದದಲ್ಲಿ ಪಿಎಚ್‌.ಡಿ ಪದವಿ                                                                                                                                        

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 24. ಇಲ್ಲಿನ ಡಾ.ಕೆ.ಜಿ.ಭಟ್ ಬಿಲ್ಡಿಂಗ್‌ ನಲ್ಲಿ ಜೊಸ್ಸೀಸ್ ಆಯುರ್ವೇದ ಆಸ್ಪತ್ರೆ ಮತ್ತು ನೆಕ್ಕಿಲಾಡಿಯಲ್ಲಿ ಬಳ್ಳಿ ಆಯುರ್ಗ್ರಾಮ ಆಯುರ್ವೇದ ಆಸ್ಪತ್ರೆ ಹೊಂದಿರುವ ಡಾ. ಸುಪ್ರೀತ್ ಲೋಬೋ ಅವರು ಭುವನೇಶ್ವರದ ಉತ್ಕಲ ವಿಶ್ವವಿದ್ಯಾನಿಲಯದಿಂದ ಆಯುರ್ವೇದದಲ್ಲಿ ಪಿಎಚ್‌.ಡಿ ಪದವಿ ಗಳಿಸಿದ್ದಾರೆ. ಡಾ. ಚತುರ್ಭುಜ ಭುಯಾನ್ A COMPARATIVE CLINICAL STUDY OF AGNIKARMA WITH SUVARN SHALAKA AND PANCHADHATU SHALAKA IN JANUSANDHIGATA VATA W.S.R. TO OSTEOARTHRITIS OF KNEE JOINT

ಉಪ್ಪಿನಂಗಡಿ: ಡಾ.ಸುಪ್ರೀತ್ ಲೋಬೋರವರಿಗೆ ಆಯುರ್ವೇದದಲ್ಲಿ ಪಿಎಚ್‌.ಡಿ ಪದವಿ                                                                                                                                         Read More »

ಕರಾವಳಿ, ಕರ್ನಾಟಕ

ಟ್ರಾಕ್ಟರ್ ಗೆ ಕಂಟೈನರ್ ಲಾರಿ ಡಿಕ್ಕಿ      ➤ ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಚಾಲಕ

 (ನ್ಯೂಸ್ ಕಡಬ) newskadaba.com   ಉಪ್ಪಿನಂಗಡಿ, ಡಿ.14 ಓವರ್ಟೇಕ್ ಮಾಡುವ ಭರದಲ್ಲಿ ಕಂಟೈನರ್ ಲಾರಿಯೊಂದು ಟ್ರಾಕ್ಟರ್ ಗೆ ಡಿಕ್ಕಿ ಹೊಡೆದ ಘಟನೆ ಉಪ್ಪಿನಂಗಡಿ ಬಳಿ ಗಾಂಧಿಪಾರ್ಕ್ ಎಂಬಲ್ಲಿ ಸಂಭವಿಸಿದೆ. ಪರಿಣಾಮವಾಗಿ ಟ್ರಾಕ್ಟರ್ ಹಿಂಬದಿಯ ಟ್ರಾಲಿ ಮಗುಚಿ ಬಿದ್ದಿದ್ದು, ಅದೃಷ್ಟವಶಾತ್ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.   ನೆಲ್ಯಾಡಿ ಕಡೆಯಿಂದ ಬಿ,ಸಿ ರೋಡು ಕಡೆಗೆ ಬರುತ್ತಿದ್ದ ಕಂಟೈನರ್ ಲಾರಿಯು ಗಾಂಧಿಪಾರ್ಕ್ ಬಳಿ ಓವರ್ ಟೇಕ್ ಮಾಡಿದ್ದು, ಆಗ ಟ್ರಾಕ್ಟರ್ ಗೆ ಕಂಟೈನರ್ ಡಿಕ್ಕಿ ಹೊಡೆದಿದೆ ಎಂದು

ಟ್ರಾಕ್ಟರ್ ಗೆ ಕಂಟೈನರ್ ಲಾರಿ ಡಿಕ್ಕಿ      ➤ ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಚಾಲಕ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

➤ *ಜೀಪು ನಿಲ್ಲಿಸುವ ವೇಳೆ ಹೃದಯಾಘಾತ- ಚಾಲಕ ಸಾವು*

(ನ್ಯೂಸ್ ಕಡಬ) news kadaba.com ಉಪ್ಪಿನಂಗಡಿ, ಡಿ.7. ಉಪ್ಪಿನಂಗಡಿ:  ಜೀಪು ಚಲಾಯಿಸಿಕೊಂಡು ಅಸ್ಪತ್ರೆಗೆಂದು ಬಂದ ವ್ಯಕ್ತಿಯೊರ್ವರು  ಜೀಪು ನಿಲ್ಲಿಸುವ ವೇಳೆ ಹೃದಯಸ್ತಂಭನಕ್ಕೆ ಒಳಗಾದ ಘಟನೆ ಡಿ.7 ರಂದು ಉಪ್ಪಿನಂಗಡಿಯಲ್ಲಿ ನಡೆದಿದೆ. ಕೊಯಿಲ ಗ್ರಾಮದ ವಿಶ್ವನಾಥ (50) ಎಂಬವರು ಹೃದಯಸ್ತಂಭನಕ್ಕೆ ಒಳಗಾಗಿ ಸಾವನಪ್ಪಿರುವ  ವ್ಯಕ್ತಿಯಾಗಿದ್ದಾರೆ.  ಇವರು ಪತ್ನಿ,  ಇಬ್ಬರು ಹೆಣ್ಣು ಮಕ್ಕಳನ್ನು ಅಗಳಿದ್ದಾರೆ.

➤ *ಜೀಪು ನಿಲ್ಲಿಸುವ ವೇಳೆ ಹೃದಯಾಘಾತ- ಚಾಲಕ ಸಾವು* Read More »

ಕರಾವಳಿ, ಕ್ರೈಮ್ ನ್ಯೂಸ್

ಜೆ.ಇ.ಇ, ನಾಟಾ ಪರೀಕ್ಷೆ ➤ ಉತ್ತಮ ಸಾಧನೆಗೈದ ಇಂದ್ರಪ್ರಸ್ಧ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.14:  ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜೆ.ಇ.ಇ. ಪ್ರವೇಶ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದಿದ್ದು, ಮುಂದಿನ ಜೆ.ಇ.ಇ. ಅಡ್ವಾನ್ಸ್ ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.   ಇಂದ್ರಪ್ರಸ್ಥದ ವಿದ್ಯಾರ್ಥಿಗಳಾದ ಸುಹಾಸ್ ಎಂ.ಕೆ. ಅವರು 4512ನೇ ರ‌್ಯಾಂಕ್, ನಿಹಾಲ್ ನೂಜಿಬೈಲ್ ಅವರು 10,174 ರ‌್ಯಾಂಕ್ ಪಡೆದಿದ್ದಾರೆ. ಇನ್ನುಳಿದ ವಿದ್ಯಾರ್ಥಿಗಳಾದ ಮುಹಮ್ಮದ್ ಶಿಹಾಬ್, ಅನನ್ಯ ಪಿ.ಕೆ., ಜೀವನ್ ಎನ್., ಎ.ಯು. ನಚಿಕೇತ್ ಕುಮಾರ್, ಜೋಶನ್ ವಿ.ಜೆ., ಮುಹಮ್ಮದ್ ತೈಸಿರ್ ಅಲಿ, ಆಯಿಶತ್ ಹೀನಾ, ಚೈತನ್ಯ ಜೆ., ಮೌಲ್ಯ

ಜೆ.ಇ.ಇ, ನಾಟಾ ಪರೀಕ್ಷೆ ➤ ಉತ್ತಮ ಸಾಧನೆಗೈದ ಇಂದ್ರಪ್ರಸ್ಧ ವಿದ್ಯಾರ್ಥಿಗಳು Read More »

ಕರಾವಳಿ, ಕರ್ನಾಟಕ
Scroll to Top