uppinangadi

ಉಪ್ಪಿನಂಗಡಿ : ಅನುಸ್ಮರಣೆ ಹಾಗೂ ಪ್ರಚಾರ ಸಮ್ಮೇಳನ

(ನ್ಯೂಸ್ ಕಡಬ) newskadaba.com, ಉಪ್ಪಿನಂಗಡಿ, ಡಿ.18.  ವರಕ್ಕಲ್ ಮುಲ್ಲ ಕೋಯಾ ತಂಗಳ್ ರವರು ಸ್ಥಾಪಿಸಿದ ಸಮಸ್ತವನ್ನು ಉಳಿವಿಗೆ ಶ್ರಮಿಸಬೇಕೆಂದು ದ ಕ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಹೇಳಿದರು. ಉಪ್ಪಿನಂಗಡಿ ರೇಂಜ್ ಜಂ-ಇಯ್ಯತುಲ್ ಮಅಲ್ಲೀಮೀನ್, ಮದ್ರಸ ಮ್ಯಾನೇಜ್ಮೆಂಟ್ ಎಸ್.ಕೆ.ಎಸ್.ಎಸ್ ಎಫ್ ಉಪ್ಪಿನಂಗಡಿ ವಲಯ ಮಾಲಿಕ್ ದಿನಾರ್ ಜುಮಾ ಮಸೀದಿ ಉಪ್ಪಿನಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಶಂಸುಲ್ ಉಲಮಾ, ಮಿತ್ತಬೈಲ್ ಉಸ್ತಾದ್, ಎಂ ಎ ಖಾಸಿಂ ಮುಸ್ಲಿಯಾರ್ ಹಾಗೂ ಅಗಲಿದ ಸಮಸ್ತ ನೇತಾರರ ಅನುಸ್ಮರಣೆ ಹಾಗೂ ಸಮಸ್ತ ಜಂ-ಇಯ್ಯತುಲ್ […]

ಉಪ್ಪಿನಂಗಡಿ : ಅನುಸ್ಮರಣೆ ಹಾಗೂ ಪ್ರಚಾರ ಸಮ್ಮೇಳನ Read More »

ಕರಾವಳಿ

ಉಪ್ಪಿನಂಗಡಿ: ಬೃಹತ್ ಕಂಟೇನರ್ ನಲ್ಲಿ ಅಕ್ರಮ ಗೋ ಸಾಗಾಟ ಪತ್ತೆ ➤ 800 ಕೆಜಿ ಮಾಂಸ ವಶಕ್ಕೆ, ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.08. ಅಕ್ರಮವಾಗಿ ಗೋವನ್ನು ವಧಿಸಿ ಕಂಟೈನರ್ ನಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಉಪ್ಪಿನಂಗಡಿ ಪೊಲೀಸರು ಓರ್ವನನ್ನು ಬಂಧಿಸಿ, ಕಂಟೈನರ್ ಸಹಿತ 800 ಕೆಜಿ ಗೋ ಮಾಂಸವನ್ನು ವಶಪಡಿಸಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಶಿರಾಡಿ ಗ್ರಾಮದ ಗುಂಡ್ಯ ಬಳಿ ಉಪ್ಪಿನಂಗಡಿ ಪೊಲೀಸರು ತಪಾಸಣೆ ನಿರತರಾಗಿದ್ದ ವೇಳೆ ಕಂಟೈನರ್ ಲಾರಿಯೊಂದರಲ್ಲಿ ಯಾರಿಗೂ ಅನುಮಾನ ಬಾರದಂತೆ ಭಾರೀ ಪ್ರಮಾಣದ ದನದ ಮಾಂಸ ಸಾಗಾಟ ಮಾಡಲಾಗುತ್ತಿರುವುದು ಕಂಡು ಬಂದಿದೆ. ಕಂಟೈನರ್

ಉಪ್ಪಿನಂಗಡಿ: ಬೃಹತ್ ಕಂಟೇನರ್ ನಲ್ಲಿ ಅಕ್ರಮ ಗೋ ಸಾಗಾಟ ಪತ್ತೆ ➤ 800 ಕೆಜಿ ಮಾಂಸ ವಶಕ್ಕೆ, ಓರ್ವನ ಬಂಧನ Read More »

ಕರಾವಳಿ

ಉಪ್ಪಿನಂಗಡಿ: ಬಡ ಯುವಕನಿಗೆ ದಾನಿಗಳ ನೆರವು ಬೇಕಾಗಿದೆ

(ನ್ಯೂಸ್ ಕಡಬ) newskadaba.comಉಪ್ಪಿನಂಗಡಿ,  ಜ.09. ಉಪ್ಪಿನಂಗಡಿ: ಕೂಲಿ ಕೆಲಸದ ಮಾಡಿಕೊಂಡು ಮನೆಗೆ ಆಧಾರ ಸ್ತಂಭವಾಗಿದ್ದ ಯುವಕನೀಗ ತನ್ನೆರಡೂ ಕಿಡ್ನಿ ವೈಫಲ್ಯಗೊಂಡಿದ್ದರಿಂದ ದುಡಿಯಲಾರದ ಸ್ಥಿತಿ ತಲುಪಿದ್ದಾನೆ. ತನ್ನ ಕಿಡ್ನಿ ನೀಡಿ ಮಗನಿಗೆ ಬದುಕು ನೀಡಲು ಮುಂದಾದ ತಾಯಿಯೀಗ ಅದಕ್ಕೆ ತಗಲುವ ವೈದ್ಯಕೀಯ ವೆಚ್ಚ ಭರಿಸಲಾಗದೆ ಕಂಗಾಲಾಗಿದ್ದು, ದಾನಿಗಳಲ್ಲಿ ಮಗನ ವೈದ್ಯಕೀಯ ಚಿಕಿತ್ಸಾ ವೆಚ್ಚಕ್ಕಾಗಿ ಸಹಾಯ ಯಾಚಿಸಿದ್ದಾರೆ. ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ಹರಿನಗರ ನಿವಾಸಿ ಜಯಂತಿ ಅವರ ಕುಟುಂಬದ ಕರುಣಾಜನಕ ಕಥೆ. ಕೂಲಿ ಮಾಡಿ ಜೀವಿಸುವ ತೀರಾ ಬಡಕುಟುಂಬದ ಜಯಂತಿ

ಉಪ್ಪಿನಂಗಡಿ: ಬಡ ಯುವಕನಿಗೆ ದಾನಿಗಳ ನೆರವು ಬೇಕಾಗಿದೆ Read More »

ಕರಾವಳಿ

ಉಪ್ಪಿನಂಗಡಿ: ವರ್ಷದ ಹಿಂದೆ ಪ್ರೇಮಿಸಿ ವಿವಾಹವಾಗಿದ್ದ ತರುಣಿ ವಿಷಸೇವಿಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com.ಉಪ್ಪಿನಂಗಡಿ, ಜ.1. ವರ್ಷದ ಹಿಂದೆಯಷ್ಟೇ ಪ್ರೇಮ ವಿವಾಹವಾಗಿದ್ದ ಯುವತಿ ವಿಷ ಸೇವಿಸಿ ಸಾವನ್ನಪ್ಪಿದ್ದ ಘಟನೆ ಜ.1 ರಂದು ಮಂಗಳವಾರ ಉಪ್ಪಿನಂಗಡಿಯ ಹಿರೇಬಂಡಾಡಿಯಲ್ಲಿ ನಡೆದಿದೆ. ತವರು ಮನೆಯಲ್ಲಿದ್ದ ದಿವ್ಯಾ ಪೂಜಾರಿ ಉಪ್ಪಿನಂಗಡಿಯ ಹಿರೇಬಂಡಾಡಿಯಲ್ಲಿರುವ ಗಂಡನ ಮನೆಗೆ ಡಿ.31 ರಂದು ತೆರಳಿದ್ದರು. ಆದರೆ ಜ.1 ರಂದು ಮುಂಜಾನೆ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಪ್ರಯತ್ನಿಸಿದ್ದಾರೆ. ಸುಮಾರು 10 ಗಂಟೆ ವೇಳೆಗೆ ತಾವು ವಿಷ ಸೇವನೆ ಮಾಡಿರುವುದಾಗಿ ಗಂಡನ ಮನೆಯವರಿಗೆ ತಿಳಿಸಿದ್ದು ತಕ್ಷಣ ಮನೆ ಮಂದಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಉಪ್ಪಿನಂಗಡಿ: ವರ್ಷದ ಹಿಂದೆ ಪ್ರೇಮಿಸಿ ವಿವಾಹವಾಗಿದ್ದ ತರುಣಿ ವಿಷಸೇವಿಸಿ ಆತ್ಮಹತ್ಯೆ Read More »

ಕರಾವಳಿ

ಆತೂರು ದಿಕ್ರ್ ಹಲ್ಖಾ ವಾರ್ಷಿಕೋತ್ಸವ ► ದಿಕ್ರ್, ಸ್ವಲಾತ್ ಹೇಳುವಾತನ ಜೀವನ ಧನ್ಯ ಆಗಲಿದೆ-ಮುರ್ಷಿದ್ ಫೈಝಿ

(ನ್ಯೂಸ್ ಕಡಬ) newskadaba.com.ಉಪ್ಪಿನಂಗಡಿ,ಡಿ.31  ದಿಕ್ರ್, ಸ್ವಲಾತ್‍ಗೆ ಅದರದ್ದೇ ಆದ ಪಾವಿತ್ರತೆ ಇದೆ, ಅದನ್ನು ಹೇಳುವಾತ ಸ್ವರ್ಗವಾಸಿ ಆಗಲಿದ್ದಾನೆ, ಆತನ ಜೀವನ ಧನ್ಯ ಆಗಲಿದೆ ಎಂದು ಆತೂರುಮುಹಿಯುದ್ದೀನ್ ಜುಮಾ ಮಸೀದಿ ಖತೀಬ್ ಮುಹಿಯುದ್ದೀನ್ ಮುರ್ಷಿದ್ ಫೈಝಿ ಹೇಳಿದರು.ಅವರು ಡಿ. 29ರಂದು ಆತೂರು ಬದ್ರಿಯಾ ಜುಮಾ ಮಸೀದಿ ವತಿಯಿಂದ ಪ್ರತೀ ತಿಂಗಳು ಆಚರಿಸಿಕೊಂಡು ಬರುತ್ತಿರುವ ದಿಕ್ರ್ ಹಲ್ಖಾ ಇದರ 18ನೇ ವಾರ್ಷಿಕೋತ್ಸವ ಸಮಾರಂಭದ ಸಲುವಾಗಿ ಹಮ್ಮಿಕೊಳ್ಳಲಾದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಬಹಳಷ್ಟು ಮಂದಿ ದಿಕ್ರ್ ನಮಾಜು ಬಳಿಕ

ಆತೂರು ದಿಕ್ರ್ ಹಲ್ಖಾ ವಾರ್ಷಿಕೋತ್ಸವ ► ದಿಕ್ರ್, ಸ್ವಲಾತ್ ಹೇಳುವಾತನ ಜೀವನ ಧನ್ಯ ಆಗಲಿದೆ-ಮುರ್ಷಿದ್ ಫೈಝಿ Read More »

ಕರಾವಳಿ

ಉಪ್ಪಿನಂಗಡಿ: ಬಾಲಕ ನಾಪತ್ತೆ ► ಅಪಹರಣ ಶಂಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20. ಮಂಜನಾಡಿ ಅಲ್ ಮದೀನಾ ವಿದ್ಯಾರ್ಥಿನಿಲಯದಲ್ಲಿದ್ದ ಬಾಲಕ ನಾಪತ್ತೆಯಾಗಿರುವ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಉಪ್ಪಿನಂಗಡಿ ಮೂಲದ ಜಾಫರ್ ಸಾಧೀಕ್ (15) ಎಂಬಾತನು ಡಿ. 5ರಂದು ಸ್ಥಳೀಯ ಮಸೀದಿಯಲ್ಲಿ ವಿದ್ಯಾರ್ಥಿಗಳು ಪ್ರಾರ್ಥನೆಯಲ್ಲಿದ್ದಾಗ ಹೊರಗಡೆ ಹೋದವನು ವಾಪಾಸು ಬಂದಿಲ್ಲ. ಬಾಲಕನು ಅಪ್ರಾಪ್ತ ವಯಸ್ಕನಾಗಿದ್ದು, ಯಾರೋ ಪುಸಲಾಯಿಸಿ ಅಪಹರಿಸಿರುವ ಬಗ್ಗೆ ದೂರು ನೀಡಲಾಗಿದೆ. ಅಪಹರಕ್ಕೊಳಗಾದ ಬಾಲಕನ ಚಹರೆ ಇಂತಿವೆ: ಪ್ರಾಯ-15 ವರ್ಷ, ಎತ್ತರ-152 ಸೆಂ.ಮೀ, ಮೈಬಣ್ಣ-ಗೋಧಿ ಮೈಬಣ್ಣ, ಮುಖ-ಕೋಲು ಮುಖ, ಬಲಕಾಲು ಊನ(ಅಂಗವಿಕಲ) ಸಾಧಾರಣ ಮೈಕಟ್ಟು

ಉಪ್ಪಿನಂಗಡಿ: ಬಾಲಕ ನಾಪತ್ತೆ ► ಅಪಹರಣ ಶಂಕೆ Read More »

ಕರಾವಳಿ

ಉಪ್ಪಿನಂಗಡಿ: ದರೋಡೆ ಪ್ರಕರಣದ ಆರೋಪಿ ಪೊಲೀಸ್ ಬಲೆಗೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.18. ದರೋಡೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳಲ್ಲಿ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ಸೋಮವಾರದಂದು ನಡೆದಿದೆ. ಬಂಧಿತ ಆರೋಪಿಯನ್ನು ಕುಖ್ಯಾತ ಕ್ರಿಮಿನಲ್ ಮಹಮ್ಮದ್ ಅಲ್ತಾಫ್ ಎಂದು ಗುರುತಿಸಲಾಗಿದೆ. ಅಲ್ತಾಫ್ ತಲೆಮರೆಸಿಕೊಂಡಿರುವ ಇನ್ನೋರ್ವ ಆರೋಪಿಯೊಂದಿಗೆ ಸೇರಿಕೊಂಡು ಪಾರ್ಕ್, ನಿರ್ಜನ ಪ್ರದೇಶದಲ್ಲಿ ಸಿಗುವ ಪ್ರೇಮಿಗಳನ್ನು, ಒಬ್ಬಂಟಿ ವ್ಯಕ್ತಿಗಳನ್ನು ಬೆದರಿಸಿ ಚಿನ್ನಾಭರಣ ಹಾಗೂ ಹಣವನ್ನು ದೋಚುವುದನ್ನೇ ವೃತ್ತಿಯಾಗಿಸಿಕೊಂಡಿದ್ದರು. ಆದರೆ ಮರ್ಯಾದೆಗೆ ಅಂಜಿ ಯಾರು ಕೂಡಾ ಈ ಬಗ್ಗೆ ದೂರು ದಾಖಲಿಸಲು ಮುಂದಾಗುತ್ತಿರಲಿಲ್ಲ. ಇತ್ತೀಚೆಗೆ

ಉಪ್ಪಿನಂಗಡಿ: ದರೋಡೆ ಪ್ರಕರಣದ ಆರೋಪಿ ಪೊಲೀಸ್ ಬಲೆಗೆ Read More »

ಕರಾವಳಿ

ಟಿಪ್ಪು ಸುಲ್ತಾನ್ ಮತ್ತು ಸಿದ್ದರಾಮಯ್ಯರವರ ಅವಹೇಳನ ► ಓರ್ವ ಉಪ್ಪಿನಂಗಡಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.27. ಸ್ವಾತಂತ್ರ ಸೇನಾನಿ ಟಿಪ್ಪು ಸುಲ್ತಾನ್ ಹಾಗೂ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರವನ್ನು ಅಸಹ್ಯವಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ ಎಂದು ಆರೋಪಿಸಿ ಉಪ್ಪಿನಂಗಡಿ ಯುವ ಕಾಂಗ್ರೆಸ್ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ನೀಡಿದ್ದ ದೂರಿನ ಮೇರೆಗೆ ಓರ್ವನನ್ನು ವಶಕ್ಕೆ ತೆಗೆದುಕೊಂಡ ಘಟನೆ ಶುಕ್ರವಾರ ನಡೆದಿದೆ. 34ನೇ ನೆಕ್ಕಿಲಾಡಿಯಲ್ಲಿನ ಕಾರ್ ಕ್ಲಬ್ ಮಾಲಕ ಸದಾನಂದ ಹಾಗೂ ಯೊಗೀಶ್ ಪ್ರಭು ಅವರ ಮೇಲೆ ದೂರು ದಾಖಲಾಗಿದ್ದು, ಯೊಗೀಶ್ ಪ್ರಭು ಎಂಬವರು ಸ್ವಾತಂತ್ರ್ಯ ಸೇನಾನಿ ಟಿಪ್ಪು ಸುಲ್ತಾನ್

ಟಿಪ್ಪು ಸುಲ್ತಾನ್ ಮತ್ತು ಸಿದ್ದರಾಮಯ್ಯರವರ ಅವಹೇಳನ ► ಓರ್ವ ಉಪ್ಪಿನಂಗಡಿ ಪೊಲೀಸರ ವಶಕ್ಕೆ Read More »

ಕರಾವಳಿ

ಉಪ್ಪಿನಂಗಡಿ: ಬೈಕ್ – ಬಸ್ ಢಿಕ್ಕಿ ► ದಂಪತಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.17. ಬೈಕ್ ಹಾಗೂ ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಗಂಡ-ಹೆಂಡತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಉಪ್ಪಿನಂಗಡಿ ನೇತ್ರಾವತಿ ಸೇತುವೆಯ ಮೇಲೆ ನಡೆದಿದೆ. ಮೃತಪಟ್ಟ ದಂಪತಿಯನ್ನು ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕೊಯಿಲತಡ್ಡ ನಿವಾಸಿ ಶೀನಪ್ಪ ಆಚಾರ್ಯ ಹಾಗೂ ಅವರ ಪತ್ನಿ ವಿಶಾಲಾಕ್ಷಿ ಎಂದು ಗುರುತಿಸಲಾಗಿದೆ. ಇವರು ಉಪ್ಪಿನಂಗಡಿಯಿಂದ ಗುರುವಾಯನಕೆರೆ ಕಡೆಗೆ ತೆರಳುತಿದ್ದಾಗ ಉಪ್ಪಿನಂಗಡಿಯಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ವರುಣ್ ಟ್ರಾವೆಲ್ಸ್ ಎಂಬ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿದ್ದು, ಢಿಕ್ಕಿಯ

ಉಪ್ಪಿನಂಗಡಿ: ಬೈಕ್ – ಬಸ್ ಢಿಕ್ಕಿ ► ದಂಪತಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಶಿರಾಡಿ: ಗುಂಡ್ಯ ಹೊಳೆಯಲ್ಲಿ ಅಪರಿಚಿತ ಶವ ಪತ್ತೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.13. ಠಾಣಾ ವ್ಯಾಪ್ತಿಯ ಶಿರಾಡಿ ಬಳಿಯ ಗುಂಡ್ಯ ಹೊಳೆಯಲ್ಲಿ ಅಪರಿಚಿತ ಶವವೊಂದು ಬುಧವಾರ ಅಪರಾಹ್ನ ಪತ್ತೆಯಾಗಿದೆ. ಸುಮಾರು 35 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಶವವಾಗಿದ್ದು, ಸುಮಾರು 4 – 5 ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಶಿರಾಡಿ: ಗುಂಡ್ಯ ಹೊಳೆಯಲ್ಲಿ ಅಪರಿಚಿತ ಶವ ಪತ್ತೆ Read More »

ಕರಾವಳಿ
Scroll to Top