uppinangady

ಉಪ್ಪಿನಂಗಡಿ: ಬಾರ್ & ರೆಸ್ಟೋರೆಂಟ್ ಗೆ ದಾಳಿ: ಕಿಶೋರ ಕಾರ್ಮಿಕ ಪತ್ತೆ

(ನ್ಯೂಸ್ ಕಡಬ) newskadaba.com ಜು. 25. ಕಾರ್ಮಿಕ ಇಲಾಖಾ ಅಧಿಕಾರಿಗಳು, ಪುತ್ತೂರು ಹಾಗೂ ಚೈಲ್ಡ್ ಲೈನ್ ಸಂಯೋಜಕರು  ಶುಕ್ರವಾರದಂದು ಅನಿರೀಕ್ಷಿತ  ತಪಾಸಣೆ ನಡೆಸಿದಾಗ ಉಪ್ಪಿನಂಗಡಿಯಲ್ಲಿ ಕಾರ್ಯಾಚರಿಸುತ್ತಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್‍ನಲ್ಲಿ ಬಿಹಾರ ಮೂಲದ 15 ವರ್ಷದ ಕಿಶೋರ ಕಾರ್ಮಿಕನನ್ನು ದುಡಿಸಿಕೊಳ್ಳುತ್ತಿದ್ದು ಪತ್ತೆಯಾಗಿದ್ದು, ಕ್ಲೀನರ್ ಕೆಲಸಕ್ಕೆ ನೇಮಿಸಿಕೊಂಡಿದ್ದ ಕಿಶೋರ ಕಾರ್ಮಿಕನನ್ನು ಕೆಲಸದಿಂದ ಬಿಡುಗಡೆಗೊಳಿಸಿ ಮಕ್ಕಳ ಕಲ್ಯಾಣ ಸಮಿತಿಯಲ್ಲಿ ಪುನರ್ ವಸತಿಗಾಗಿ ಹಾಜರುಪಡಿಸಲಾಯಿತು. ಕಾರ್ಯಚರಣೆಯಲ್ಲಿ ಕಾರ್ಮಿಕ ಇಲಾಖೆಯ ಹಿರಿಯ ಕಾರ್ಮಿಕ ನಿರೀಕ್ಷಕ ( ಪುತ್ತೂರು ವೃತ್ತ) ವಿರೇಂದ್ರ ಕುಂಬಾರ್, ಜಿಲ್ಲಾ […]

ಉಪ್ಪಿನಂಗಡಿ: ಬಾರ್ & ರೆಸ್ಟೋರೆಂಟ್ ಗೆ ದಾಳಿ: ಕಿಶೋರ ಕಾರ್ಮಿಕ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 10ನೇ ತರಗತಿ ವಿದ್ಯಾರ್ಥಿನಿ ಸಾವು

(ನ್ಯೂಸ್‌ ಕಡಬ) newskadaba.com,  ನ.13: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 15 ವರ್ಷದ ಬಾಲಕಿಯೊಬ್ಬಳು ನವೆಂಬರ್ 12ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಮೃತ ವಿದ್ಯಾರ್ಥಿನಿಯನ್ನು ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಶ್ರೀಧರ ಕುಂಬಾರ ಅವರ ಮಗಳು ಹರ್ಷಿತಾ (15) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ ಹರ್ಷಿತಾ ಅವರು, ನವೆಂಬರ್ 4ರಂದು ತಲೆನೋವು ಎಂದು ಶಾಲೆಗೆ ರಜೆ ಹಾಕಿ ಮನೆಯಲ್ಲಿದ್ದಳು. ಈ ವೇಳೆ ಮನೆಯಲ್ಲಿ ಕೀಟನಾಶಕವನ್ನು ಸೇವಿಸಿ ಅಸ್ವಸ್ಥಳಾಗಿದ್ದ ಅವಳನ್ನು ತಕ್ಷಣವೇ ತಾಯಿ

ಉಪ್ಪಿನಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 10ನೇ ತರಗತಿ ವಿದ್ಯಾರ್ಥಿನಿ ಸಾವು Read More »

ಕರಾವಳಿ

ಉಪ್ಪಿನಂಗಡಿ: ನೇತ್ರಾವತಿ ನದಿ ಕಿನಾರೆಯಲ್ಲಿ೩೯ನೇ ವರ್ಷದ ‘ಉಬಾರ್ ಕಂಬಳೋತ್ಸವ’

(ನ್ಯೂಸ್ ಕಡಬ) newskadaba.com ಮಾ. 21  ಪುತ್ತೂರು: ಜೀವನದಿಯಾಗಿರುವ ನೇತ್ರಾವತಿಯ ಕಿನಾರೆಯ ಉಪ್ಪಿನಂಗಡಿಯಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಕೋಡಿಂಬಾಡಿ ಅವರ ನೇತೃತ್ವದಲ್ಲಿ ೩೯ನೇ ವರ್ಷದ ವಿಜಯ-ವಿಕ್ರಮ ಜೋಡುಕರೆ ‘ಉಬಾರ್ ಕಂಬಳೋತ್ಸವ’ ಮಾರ್ಚ್ ೨೨ ರಂದು ಅದ್ದೂರಿಯಾಗಿ ನಡೆಯಲಿದೆ ಎಂದು ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು ಅವರು ತಿಳಿಸಿದರು. ಉಪ್ಪಿನಂಗಡಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ೨೪ ಗಂಟೆಯ ಮಿತಿಯೊಳಗೆ ಈ ಬಾರಿ ಕಂಬಳೋತ್ಸವವನ್ನು ಮುಗಿಸುವ ಚಿಂತನೆ ಸಮಿತಿಗಿದೆ. ಈ ಬಾರಿ ೧೫೦ ಜತೆ ಕೋಣಗಳು

ಉಪ್ಪಿನಂಗಡಿ: ನೇತ್ರಾವತಿ ನದಿ ಕಿನಾರೆಯಲ್ಲಿ೩೯ನೇ ವರ್ಷದ ‘ಉಬಾರ್ ಕಂಬಳೋತ್ಸವ’ Read More »

ಕರಾವಳಿ

ಉಪ್ಪಿನಂಗಡಿ: ನಿಲ್ಲಿಸಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಮುಂದಕ್ಕೆ ಚಲಿಸಿ ಹೆದ್ದಾರಿ ಬದಿಗೆ ಪಲ್ಟಿ

(ನ್ಯೂಸ್ ಕಡಬ)com ಜ.25 ಪ್ರಯಾಗ್ ರಾಜ್: ಚಾಲಕ ನಿಲ್ಲಿಸಿ ಹೋಗಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಮುಂದಕ್ಕೆ ಚಲಿಸಿ ಹೆದ್ದಾರಿ ಬದಿಗೆ ಮಗುಚಿ ಬಿದ್ದ ಘಟನೆ 34 ನೆಕ್ಕಿಲಾಡಿಯ ಬೊಳ್ಳಾರು ಎಂಬಲ್ಲಿನ ಮಂಗಳೂರು- ಬೆಂಗಳೂರು ರಾ ಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಈ ಸಂದರ್ಭ ಟ್ಯಾಂಕರ್ ನಿಂದ ಯಾವುದೇ ಗ್ಯಾಸ್ ಸೋರಿಕೆಯಾಗದ್ದರಿಂದ ಸಂಭವನೀಯ ಅನಾಹುತ ತಪ್ಪಿದಂತಾಗಿದೆ. ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರ್ ಮಂಗಳೂರಿನಿಂದ ತಮಿಳುನಾಡಿಗೆ ತೆರಳುತ್ತಿತ್ತು. ಈ ನಡುವೆ ಟ್ಯಾಂಕರ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಹೀಗಾಗಿ

ಉಪ್ಪಿನಂಗಡಿ: ನಿಲ್ಲಿಸಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಮುಂದಕ್ಕೆ ಚಲಿಸಿ ಹೆದ್ದಾರಿ ಬದಿಗೆ ಪಲ್ಟಿ Read More »

ಕರಾವಳಿ

ಹೆರಿಗೆ ವೇಳೆ ತೀವ್ರ ರಕ್ತಸ್ರಾವ- ತಾಯಿ ಮೃತಪಟ್ಟ ಪ್ರಕರಣ ➤ ಒಂದೇ ದಿನದೊಳಗೆ ಹಸುಗೂಸು ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ. 23. ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ಉಂಟಾಗಿ ಬಾಣಂತಿ ಆಶಾ ಕಾರ್ಯಕರ್ತೆ ಮೃತಪಟ್ಟ ಬೆನ್ನಲ್ಲೇ ಇದೀಗ ಅವರ ಹಸುಗೂಸು ಕೂಡ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಆಶಾ ಕಾರ್ಯಕರ್ತೆ ಭವ್ಯರವರು ತನ್ನ ಮೂರನೇ ಹೆರಿಗೆಗಾಗಿ ಜೂ. 20ರಂದು ದಾಖಲಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಸಂದರ್ಭ ತೀವ್ರ ರಕ್ತಸ್ರಾವ ಉಂಟಾಗಿ ಮೃತಪಟ್ಟಿದ್ದರು. ಕಳೆದ ಮಂಗಳವಾರ ರಾತ್ರಿ ಮಗುವನ್ನು ಮಂಗಳೂರಿನ ವೆನ್‍ ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ

ಹೆರಿಗೆ ವೇಳೆ ತೀವ್ರ ರಕ್ತಸ್ರಾವ- ತಾಯಿ ಮೃತಪಟ್ಟ ಪ್ರಕರಣ ➤ ಒಂದೇ ದಿನದೊಳಗೆ ಹಸುಗೂಸು ಮೃತ್ಯು Read More »

ಕರಾವಳಿ

ಆತೂರು: ಕೆಮ್ಮಾರ ಸ.ಉ.ಹಿ.ಪ್ರಾ.ಶಾಲೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾನ ಕೋರಿ ಶಾಸಕ ಅಶೋಕ್ ರೈಗೆ ಮನವಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ. 20. ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಗೆ ನೂತನ ಕಟ್ಟಡ ನಿರ್ಮಾಣಕ್ಕಾಗಿ ಅನುದಾನ ಕೋರಿ ಸ್ಥಳೀಯ ಶಾಸಕರಾದ ಅಶೋಕ್ ಕುಮಾರ್ ರೈ ಯವರಿಗೆ ಕೆಮ್ಮಾರ ಶಾಲಾಭಿವೃದ್ಧಿ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು. 1954 ರಲ್ಲಿ ಪ್ರಾರಂಭಗೊಂಡು 69 ವರ್ಷ ಹಳೆಯದಾದ ಕೆಮ್ಮಾರ ಸರಕಾರಿ ಶಾಲೆಯ ಕಟ್ಟಡವು ತೀರಾ ಶಿಥಿಲಗೊಂಡಿದ್ದು, ಮೇಲ್ಚಾವಣಿ ಗೆದ್ದಲು ಹಿಡಿದಿರುತ್ತದೆ. ಆದರೆ ಇಷ್ಟರವರೆಗೆ ಸರಕಾರದಿಂದ ಯಾವುದೇ ಹೊಸ ಕಟ್ಟಡಕ್ಕೆ ಅನುದಾನ ಒದಗಿ ಬಂದಿರುವುದಿಲ್ಲ. ಪ್ರಾರಂಭದಿಂದ ಈ

ಆತೂರು: ಕೆಮ್ಮಾರ ಸ.ಉ.ಹಿ.ಪ್ರಾ.ಶಾಲೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾನ ಕೋರಿ ಶಾಸಕ ಅಶೋಕ್ ರೈಗೆ ಮನವಿ Read More »

ಕರಾವಳಿ

ನೆಲ್ಯಾಡಿ: ನೀರುಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ. 27. ಮೀನು ಹಿಡಿಯಲೆಂದು ಹೋಗಿ ನೇತ್ರಾವತಿ ನದಿಯಲ್ಲಿ ಡಿ. 26ರಂದು ನೀರುಪಾಲಾಗಿದ್ದ ವ್ಯಕ್ತಿಯ ಮೃತದೇಹವು ಇಂದು ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಮೃತರನ್ನು ಮೊಗ್ರು ದಂಡುಗ ನಿವಾಸಿ ಜನಾರ್ಧನ ಎಂದು ಗುರುತಿಸಲಾಗಿದೆ. ಜನಾರ್ಧನ ಹಾಗೂ ಮಹೇಶ್ ಎಂಬವರು ಮುಗೇರಡ್ಕದ ಕಾಮಗಾರಿ ಹಂತದ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲೆಂದು ಹೋಗಿದ್ದ ಸಂದರ್ಭ ಜನಾರ್ಧನ ರವರು ನೀರುಪಾಲಾಗಿದ್ದರು. ಆದರೆ ಜೊತೆಗಿದ್ದ ಮಹೇಶ್ ವಿಷಯ ಯಾರಿಗೂ ತಿಳಿಸದೇ ತನ್ನ ಪಾಡಿಗೆ ವಾಪಸ್ ಬಂದಿದ್ದರು.

ನೆಲ್ಯಾಡಿ: ನೀರುಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ನಾಯಿ ಅಡ್ಡ ಬಂದು ಸ್ಕೂಟರ್ ಪಲ್ಟಿ ➤ ಸಹಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 26. ನಾಯಿಯೊಂದು ರಸ್ತೆಗೆ ಅಡ್ಡ ಬಂದು ಆಕ್ಟಿವಾ ಹೋಂಡಾಗೆ ಢಿಕ್ಕಿಯಾದ ಪರಿಣಾಮ ಆಕ್ಟಿವಾ ಪಲ್ಟಿಯಾಗಿ ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಕಡವಿನಬಾಗಿಲು ತಿರುವಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಇಳಂತಿಲ ಗ್ರಾಮದ ಕಡವಿನಬಾಗಿಲು ನಿವಾಸಿ ರಮ್ಲಾನ್ ಫಯಾಝ್ ಹಾಗೂ ಇಮ್ರಾನ್ ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಉಪ್ಪಿನಂಗಡಿಯಿಂದ ಕಡವಿನಬಾಗಿಲಿನ ತಮ್ಮ ಮನೆಗೆ ಹೋಗುವ ವೇಳೆ ಈ ಅವಘಡ ಸಂಭವಿಸಿದೆನ್ನಲಾಗಿದೆ‌. ಅಪಘಾತದಿಂದ ಫಯಾಝ್ ಎಂಬವರ ಕೈ ಹಾಗೂ ಕಾಲು ಮೂಳೆ ಮುರಿತಕ್ಕೊಳಗಾಗಿದ್ದು,

ಉಪ್ಪಿನಂಗಡಿ: ನಾಯಿ ಅಡ್ಡ ಬಂದು ಸ್ಕೂಟರ್ ಪಲ್ಟಿ ➤ ಸಹಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಉಪ್ಪಿನಂಗಡಿ: ಗುಜಿರಿ ಹೆಕ್ಕುವ ನೆಪದಲ್ಲಿ ಕಳ್ಳತನ ➤ ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 14. ಗುಜಿರಿ ಹೆಕ್ಕುವ ನೆಪದಲ್ಲಿ ಮನೆಯಂಗಳಕ್ಕೆ ಭೇಟಿ ನೀಡಿ ಮನೆಯಲ್ಲಿರುವ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದ ಘಟನೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಉಪ್ಪಿನಂಗಡಿಯಲ್ಲಿ ಮಂಗಳವರಾದಂದು ನಡೆದಿದೆ. ಬಂಧಿತರನ್ನು ದಾವಣಗೆರೆಯ ಹರಪ್ಪನಹಳ್ಳಿ ತಾಲೂಕಿನ ಹರ್‌ಕರಣ್ ಹಳ್ಳಿ ನಿವಾಸಿ ಶಿವ ಯಾನೆ ಧರ್ಮ ನಾಯಕ್ (39) ಹಾಗೂ ಇನ್ನೊಬ್ಬ ಗದಗ ಜಿಲ್ಲೆಯ ಮುಂಡರಿಲ್ಲಾ ನಿವಾಸಿ ಪ್ರದೀಪ್ ಯಾನೆ ಚಟ್ರಪ್ಪ (27) ಎಂದು ತಿಳಿದು ಬಂದಿದೆ. ಇವರು ಮಂಗಳವಾರದಂದು ನಸುಕಿನ ವೇಳೆ

ಉಪ್ಪಿನಂಗಡಿ: ಗುಜಿರಿ ಹೆಕ್ಕುವ ನೆಪದಲ್ಲಿ ಕಳ್ಳತನ ➤ ಇಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಿಕ್ಷಾ ಕಳವು ಮಾಡಿ ಸ್ನೇಹಿತನಿಗೆ ಕೊಟ್ಟ ಕಡಬದ ವ್ಯಕ್ತಿ ➤ ಕೊರಗಜ್ಜನ ಮೊರೆಯಿಂದ ರಿಕ್ಷಾ ಪತ್ತೆ

(ನ್ಯೂಸ್ ಕಡಬ) newskadaba.com  ಉಪ್ಪಿನಂಗಡಿ, ಜೂ.22. ಮನೆಯಂಗಳದ ಶೆಡ್ ನಲ್ಲಿರಿಸಲಾಗಿದ್ದ ಅಟೋ ರಿಕ್ಷಾವೊಂದನ್ನು ಕಳ್ಳರು ಕದ್ದೊಯ್ದ ಪ್ರಕರಣದಲ್ಲಿ ಕಳವಾದ ಅಟೋ ರಿಕ್ಷಾವು ಉಪ್ಪಿನಂಗಡಿಯಲ್ಲೇ ಮಂಗಳವಾರದಂದು ಪತ್ತೆಯಾಗಿದೆ. ಇಲ್ಲಿನ ನಟ್ಟಿಬೈಲು ನಿವಾಸಿ ನವೀನ್ ಎಂಬವರು ಚಲಾಯಿಸುತ್ತಿದ್ದ ಅಟೋ ರಿಕ್ಷಾವನ್ನು ಕಳೆದ ಶುಕ್ರವಾರದಂದು ಅವರ ಮನೆಯಂಗಳದ ಶೆಡ್‌ನಲ್ಲಿ ರಾತ್ರಿ ವೇಳೆ ನಿಲ್ಲಿಸಲಾಗಿದ್ದು, ಶನಿವಾರ ಮುಂಜಾನೆ ರಿಕ್ಷಾ ಕಳವಾಗಿರುವುದು ಅರಿವಿಗೆ ಬಂದಿತ್ತು.  ಈ ಬಗ್ಗೆ ಪೊಲೀಸರಿಗೂ ದೂರು ನೀಡಲಾಗಿತ್ತು. ತನ್ನ ಜೀವನಧಾರವಾಗಿದ್ದ ಅಟೋ ರಿಕ್ಷಾ ಕಳವಿಗೀಡಾಗಿ ಕಂಗಾಲಾಗಿದ್ದ ನವೀನ್ ಈ ಬಗ್ಗೆ

ರಿಕ್ಷಾ ಕಳವು ಮಾಡಿ ಸ್ನೇಹಿತನಿಗೆ ಕೊಟ್ಟ ಕಡಬದ ವ್ಯಕ್ತಿ ➤ ಕೊರಗಜ್ಜನ ಮೊರೆಯಿಂದ ರಿಕ್ಷಾ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top