Vitla

ವಿಟ್ಲ: ಸೊಸೈಟಿಯ ಶಟರ್ ಮುರಿದು ಒಳನುಗ್ಗಿದ ಕಳ್ಳರು ► ಕಳ್ಳತನಕ್ಕೆ ವಿಫಲ ಯತ್ನ

(ನ್ಯೂಸ್ ಕಡಬ) newskadaba.com ವಿಟ್ಲ, ನ.28. ನಗರದ ಹೊರವಲಯದ ಮಂಗಳಪದವಿನ ಸೊಸೈಟಿಯೊಂದರ ಶಟರ್ ಮುರಿದು ಒಳನುಗ್ಗಿರುವ ಕಳ್ಳರು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಘಟನೆ ಮಂಗಳವಾರದಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಗಾಯತ್ರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಂಗಳಪದವು ಶಾಖೆಯ ಒಳ ನುಗ್ಗಿದ ಕಳ್ಳರು ಬ್ಯಾಂಕಿನೊಳಗಿದ್ದ ಕ್ಯಾಷ್ ಡ್ರಾವರ್, ಕಪಾಟನ್ನು ಮುರಿದು ಹಣಕ್ಕಾಗಿ ಜಾಲಾಡಿದ್ದು, ಬ್ಯಾಂಕ್ ಲಾಕರನ್ನು ಮುರಿಯಲು ವಿಫಲ ಯತ್ನ ನಡೆಸಿದ್ದಾರೆ. ಮಂಗಳವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ […]

ವಿಟ್ಲ: ಸೊಸೈಟಿಯ ಶಟರ್ ಮುರಿದು ಒಳನುಗ್ಗಿದ ಕಳ್ಳರು ► ಕಳ್ಳತನಕ್ಕೆ ವಿಫಲ ಯತ್ನ Read More »

ಕರಾವಳಿ

ವಿಟ್ಲ: ಲಾರಿ – ಬೈಕ್ ಢಿಕ್ಕಿ ► ಸವಾರರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ನ.23. ಗೂಡ್ಸ್ ಲಾರಿ ಮತ್ತು ಯಮಹಾ FZ ಬೈಕ್ ನಡುವೆ ಢಿಕ್ಕಿ ಸಂಭವಿಸಿ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಗುರುವಾರದಂದು ಕಾಡುಮಠ ಸೇತುವೆ ಸಮೀಪದ ಅಪಾಯಕಾರಿ ತಿರುವಿನಲ್ಲಿ ನಡೆದಿದೆ. ಘಟನೆಯಲ್ಲಿ ಮಂಚಿ ಸಮೀಪದ ನಾಡಾಜೆ ನಿವಾಸಿಗಳಿಬ್ಬರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಡುಮಠ ಸೇತುವೆ ಕಾಮಗಾರಿಯು ಅಪೂರ್ಣವಾಗಿ ಇರುವುದರಿಂದ ಹಳೆಯ ರಸ್ತೆ ಮತ್ತು ಹೊಸ ರಸ್ತೆಯ ಬಗ್ಗೆ ವಾಹನ ಚಾಲಕರಲ್ಲಿ ಗೊಂದಲ ಉಂಟಾಗುತ್ತಿದ್ದು, ಕಳೆದ ಎರಡು ತಿಂಗಳಲ್ಲಿ

ವಿಟ್ಲ: ಲಾರಿ – ಬೈಕ್ ಢಿಕ್ಕಿ ► ಸವಾರರಿಬ್ಬರು ಗಂಭೀರ Read More »

ಕರಾವಳಿ

ವಿಟ್ಲದಲ್ಲೊಂದು ಹನಿಟ್ರ್ಯಾಪ್ ಪ್ರಕರಣ ► ಯುವಕನಿಗೆ ಹಲ್ಲೆಗೈದು ಕಾರು, ನಗದು, ಚಿನ್ನಾಭರಣ ದರೋಡೆ

(ನ್ಯೂಸ್ ಕಡಬ) newskadaba.com ವಿಟ್ಲ, ಅ.21. ಯುವಕನೋರ್ವನ ಮೇಲೆ ಹಲ್ಲೆ‌ ನಡೆಸಿ ಸ್ವತ್ತುಗಳನ್ನು ದರೋಡೆಗೈದ ಘಟನೆ ಶನಿವಾರ ಮುಂಜಾನೆ ವಿಟ್ಲ ಸಮೀಪದ ಕುಡ್ತಮೊಗೇರು ಎಂಬಲ್ಲಿ ನಡೆದಿದೆ. ಹನೀಫ್ ಎಂಬಾತನೇ ತಂಡದಿಂದ ಹಲ್ಲೆಗೊಳಗಾದ ಯುವಕ. ಕುಡ್ತಮೊಗೇರು ಫ್ಲ್ಯಾಟ್ ನಲ್ಲಿ ಮುಂಜಾನೆ ಮೂರು ಗಂಟೆ ಸುಮಾರಿಗೆ ತಂಡವೊಂದು ಹಲ್ಲೆ ನಡೆಸಿ ಹನೀಫ್ ಬಳಿಯಿದ್ದ ಸ್ವಿಫ್ಟ್ ಕಾರು, ಐದು ಪವನ್ ಚಿನ್ನಾಭರಣ ಹಾಗೂ ನಗದು ಹಣದೊಂದಿಗೆ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾಗಿರುವ ಹನೀಫ್ ನನ್ನು ವಿಟ್ಲ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಟ್ಲದಲ್ಲೊಂದು ಹನಿಟ್ರ್ಯಾಪ್ ಪ್ರಕರಣ ► ಯುವಕನಿಗೆ ಹಲ್ಲೆಗೈದು ಕಾರು, ನಗದು, ಚಿನ್ನಾಭರಣ ದರೋಡೆ Read More »

ಕರಾವಳಿ

ವಿಟ್ಲ: ವಿದ್ಯುತ್ ಶಾಕ್‍ನಿಂದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಅ.17. ವಿದ್ಯುತ್ ಶಾಕ್ ಹೊಡೆದುರ ಪರಿಣಾಮ  ಮೆಡಿಕಲ್ ಶಾಪ್ ಮಾಲಕರೋರ್ವರು ಮೃತಪಟ್ಟ ಘಟನೆ ವಿಟ್ಲದ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಮೃತರನ್ನು ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಕರೈ ನಿವಾಸಿ ದೇವಪ್ಪ ಬಂಗೇರ ಎಂಬವರ ಪುತ್ರ ರಾಜಶೇಖರ ಎಂದು ಗುರುತಿಸಲಾಗಿದೆ. ಇವರು ತೊಕ್ಕೊಟ್ಟಿನಲ್ಲಿ ಧನ್ವಂತರಿ ಆಯುರ್ವೇದ ಔಷಧಾಲಯವನ್ನು ಹೊಂದಿದ್ದು, ಇಂದು  ತನ್ನ ನಿವಾಸದ ಸಮೀಪದಲ್ಲಿನ ತನ್ನದೇ ಕೋಳಿ ಫಾರಂ ಒಳಗೆ ಏನೋ ಕೆಲಸ ಮಾಡುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದಿದೆ.

ವಿಟ್ಲ: ವಿದ್ಯುತ್ ಶಾಕ್‍ನಿಂದ ವ್ಯಕ್ತಿ ಮೃತ್ಯು Read More »

ಕರಾವಳಿ

ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ ► ಪ್ರೇಮ ವೈಫಲ್ಯ ಆತ್ಮಹತ್ಯೆಗೆ ಎಡೆಮಾಡಿತೇ…?

(ನ್ಯೂಸ್ ಕಡಬ) newskadaba.com ವಿಟ್ಲ, ಆ.19. ಆರ್ಥಿಕ ಅಡಚಣೆಯಿಂದ ಮನನೊಂದು ಮನೆಯಿಂದ ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ಗುಡ್ಡೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶನಿವಾರ ಪತ್ತೆಯಾದ ಘಟನೆ ವಿಟ್ಲ ಮುಡ್ನೂರು ಗ್ರಾಮದ ಕುಕ್ಕುತ್ತಡ್ಕ ಎಂಬಲ್ಲಿ ನಡೆದಿದೆ. ಕುಂಡಡ್ಕ ಕುಕ್ಕುತ್ತಡ್ಕ ನಿವಾಸಿ ತಿಮ್ಮಪ್ಪ ಪೂಜಾರಿ ಎಂಬವರ ಪುತ್ರ ಗಣೇಶ(27) ಆತ್ಮಹತ್ಯೆಗೆ ಶರಣಾಗಿರುವ ಯುವಕ. ಈತ ಆಗಸ್ಟ್ 14 ರಂದು ತನ್ನ ಸಹೋದರನ ಜತೆ ದಾಸಕೋಡಿಯಲ್ಲಿರುವ ತಮ್ಮ ಸಂಬಂಧಿಕರ ಮನೆಗೆಂದು ತೆರಳಿದ್ದು ಅಲ್ಲಿಂದ ಹಿಂದಿರುಗುವ ವೇಳೆ ಗಣೇಶ ಅರ್ಧದಾರಿಯಲ್ಲಿ ಇಳಿದಿದ್ದ. ಅದಾದ ಬಳಿಕ

ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ ► ಪ್ರೇಮ ವೈಫಲ್ಯ ಆತ್ಮಹತ್ಯೆಗೆ ಎಡೆಮಾಡಿತೇ…? Read More »

ಕರಾವಳಿ

ವಿಟ್ಲ: ಗ್ರೈಂಡರ್ ಗೆ ಶಾಲು ಸಿಲುಕಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಆ.08. ಗ್ರೈಂಡರ್ ನಲ್ಲಿ ತೆಂಗಿನಕಾಯಿ ರುಬ್ಬುತ್ತಿದ್ದ ವೇಳೆ ಶಾಲು ಸಿಕ್ಕಿ ಹಾಕಿಕೊಂಡು ಮಹಿಳೆಯೋರ್ವರು ಮೃತಪಟ್ಟ ಘಟನೆ ವಿಟ್ಲದ ಕಂಬಳಬೆಟ್ಟು ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ವಿಟ್ಲದ ಕಂಬಳಬೆಟ್ಟು ಕೊಳಂಬೆ ನಿವಾಸಿ ಅಬ್ಬಾಸ್ ಎಂಬವರ ಪತ್ನಿ ಹಲೀಮಮ್ಮ(45) ಮೃತಪಟ್ಟ ದುರ್ದೈವಿ. ಮಂಗಳವಾರದಂದು ಗ್ರೈಂಡರ್ ನಲ್ಲಿ ತೆಂಗಿನಕಾಯಿ ರುಬ್ಬುತ್ತಿದ್ದ ವೇಳೆ ಶಾಲು ಸಿಲುಕಿದ್ದರಿಂದ ತೀವ್ರ ಗಾಯಗೊಂಡ ಹಲೀಮಮ್ಮರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವಿಟ್ಲ: ಗ್ರೈಂಡರ್ ಗೆ ಶಾಲು ಸಿಲುಕಿ ಮಹಿಳೆ ಮೃತ್ಯು Read More »

ಕರಾವಳಿ
Scroll to Top