vittal

ವಿಟ್ಲ: ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03. ಜಿಲ್ಲೆಯ  ವಿಟ್ಲ ಶಿಶು ಅಭಿವೃದ್ಧಿ ಯೋಜನೆಯ ಖಾಲಿಯಿರುವ ಈ ಕೆಳಕಂಡ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆ/ ಸಹಾಯಕಿಯರ ಗೌರವಸೇವೆಯ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ವೆಬ್‍ ಸೈಟ್ ವಿಳಾಸ https:karnemakaone.kar.nic.in/abcd/  ನಲ್ಲಿ ಆನ್‍ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 26 ಕೊನೆಯ  ದಿನ. ಖಾಲಿಹುದ್ದೆಗಳ, ಅಂಗನವಾಡಿಗಳ ಸ್ಥಳ ಹಾಗೂ ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ […]

ವಿಟ್ಲ: ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ವಿಟ್ಲ: ನೇಣುಬಿಗಿದು ಆಟೋಚಾಲಕ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ವಿಟ್ಲ, ಆ. 26. ಆಟೋ ಚಾಲಕರೋರ್ವರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಸಮೀಪದ ಶಿವಾಜಿನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ರಮೇಶ್ ಶಿವಾಜಿನಗರ (40) ಮೃತ ಎಂದು ಗುರುತಿಸಲಾಗಿದೆ. ಆಟೋ ಚಾಲಕರಾಗಿದ್ದ ರಮೇಶ್ ರವರು ಬಾಡಿಗೆ ಮನೆಯಲ್ಲಿ ವಾಸವಿದ್ದು, ರಮೇಶ್ ರವರ ಮನೆಯ ಆರ್ಥಿಕ ಸ್ಥಿತಿಗತಿ ಸರಿ ಇಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ವಿಟ್ಲ: ನೇಣುಬಿಗಿದು ಆಟೋಚಾಲಕ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ

➤ ಚಾಲಕ ಪವಾಡಸದೃಶ ಪಾರು (ನ್ಯೂಸ್ ಕಡಬ) newskadaba.com ವಿಟ್ಲ, ಜು. 03. ವಿದ್ಯುತ್ ಕಂಬವೊಂದಕ್ಕೆ ಕಾರು ಢಿಕ್ಕಿ ಹೊಡೆದು, ಚಾಲಕ ಪವಾಡಸದೃಶ ಪಾರಾದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ. ವಿದ್ಯುತ್ ಕಂಬಕ್ಕೆ ಕಾರು ಗುದ್ದಿದ ರಭಸಕ್ಕೆ ಹೊಂಡದಲ್ಲಿದ್ದ ವಿದ್ಯುತ್ ಕಂಬ ಮೇಲಕ್ಕೆದ್ದು, ಕಾರಿನ ಮೇಲೆಯೇ ಮುರಿದು ಬಿದ್ದಿದೆ. ಚಾಲಕ ಯಾವುದೇ ಅಪಾಯವಿಲ್ಲದೇ ಪವಾಡ ಸದೃಶ ಪಾರಾಗಿದ್ದಾರೆ ಎನ್ನಲಾಗಿದೆ.

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಸವಾರರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 17.  ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ವಿಟ್ಲ ಸಮೀಪ ನಡೆದಿದೆ. ಗಾಯಗೊಂಡವರನ್ನು ಧ್ಯಾನ್ ಹಾಗೂ ರಮೇಶ್ ಎಂದು ಅವರಿಬ್ಬರನ್ನೂ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ವಿಟ್ಲ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಸವಾರರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಹೃದಯಾಘಾತ- ಬಸ್ ಚಾಲಕ ನಿಧನ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 17. ಖಾಸಗಿ ಬಸ್ ಚಾಲಕರೋರ್ವರು ಹೃದಯಾಘಾತದಿಂದ ನಿಧನರಾದ ಘಟನೆ ಕನ್ಯಾನ ಬಂಡಿತ್ತಡ್ಕ ಸಮೀಪ ಶನಿವಾರ ಬೆಳಗ್ಗೆ ನಡೆದಿದೆ. ಮೃತರನ್ನು ಕನ್ಯಾನ ಬಂಡಿತ್ತಡ್ಕ ನಿವಾಸಿ ರಮೇಶ್ ಎಂದು ಗುರುತಿಸಲಾಗಿದೆ. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ವಿಟ್ಲ: ಹೃದಯಾಘಾತ- ಬಸ್ ಚಾಲಕ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಜೂ. 21ರಂದು ಹೃದಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 15. ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಕಾರ್ಡಿಯಾಲಜಿ ಡೋರ್ ಸ್ಟೆಪ್ ಫೌಂಡೇಶನ್ ಸಂಸ್ಥೆ, ಲಯನ್ಸ್ ಕ್ಲಬ್ ವಿಟ್ಲ ಹಾಗೂ ಜೆಸಿಐ ಅವರ ಸಂಯುಕ್ತಾಶ್ರಯದಲ್ಲಿ ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಹಾಗೂ ತಂಡದವರಿಂದ ಹೃದಯ ವೈಶಾಲ್ಯ ಯೋಜನೆ ಹೃದಯ ತಜ್ಞ ಮನೆ ಬಾಗಿಲಿಗೆ ಹೃದಯ ಸಂಬಂಧಿತ ಕಾಯಿಲೆಗಳ ಉಚಿತ ತಪಾಸಣಾ ಶಿಬಿರವನ್ನು ಇದೇ ಜೂ. 21ರ ಬುಧವಾರ ಬೆಳಿಗ್ಗೆ 9

ವಿಟ್ಲ: ಜೂ. 21ರಂದು ಹೃದಯ ತಪಾಸಣಾ ಶಿಬಿರ Read More »

ಕರಾವಳಿ

ವಿಟ್ಲ: ರಸ್ತೆಗೆ ಅಡ್ಡಲಾಗಿ ಬಂದ ದನವನ್ನು ತಪ್ಪಿಸುವ ಭರದಲ್ಲಿ ಪಲ್ಟಿಯಾದ ಆಟೋರಿಕ್ಷಾ ➤ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 13. ಚಲಿಸುತ್ತಿದ್ದ ಆಟೋರಿಕ್ಷಾಕ್ಕೆ ಅಡ್ಡಲಾಗಿ ಬಂದ ದನವನ್ನು ತಪ್ಪಿಸುವ ವೇಳೆ ನಿಯಂತ್ರಣ ತಪ್ಪಿದ ಆಟೋರಿಕ್ಷಾದಿಂದ ಚಾಲಕ ರಸ್ತೆಗೆ ಎಸೆಯಲ್ಪಟ್ಟು ಮೃತಪಟ್ಟ ಘಟನೆ ಪುಣಚದಲ್ಲಿ ನಡೆದಿದೆ. ಮೃತ ಚಾಲಕನನ್ನು ಜಗನ್ನಾಥ ಪೈಸಾರಿ(57) ಎಂದು ಗುರುತಿಸಲಾಗಿದೆ. ಇವರು ಮಂಗಳವಾರದಂದು ಮಧ್ಯಾಹ್ನ ಊಟದ ಬಳಿಕ ಪುಣಚದ ರಿಕ್ಷಾ ಪಾರ್ಕಿಂಗ್ ಸ್ಥಳಕ್ಕೆ ಬರುತ್ತಿದ್ದ ವೇಳೆ ಆಟೋರಿಕ್ಷಾ ಮಣಿಲ ಎಂಬಲ್ಲಿಗೆ ತಲುಪುತ್ತಿದ್ದಂತೆಯೇ ರಸ್ತೆಗೆ ಪಲ್ಟಿಯಾಗಿ ಬಿದ್ದ ಪರಿಣಾಮ, ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣವೇ ಅವರನ್ನು ಪುತ್ತೂರು ಆಸ್ಪತ್ರೆಗೆ

ವಿಟ್ಲ: ರಸ್ತೆಗೆ ಅಡ್ಡಲಾಗಿ ಬಂದ ದನವನ್ನು ತಪ್ಪಿಸುವ ಭರದಲ್ಲಿ ಪಲ್ಟಿಯಾದ ಆಟೋರಿಕ್ಷಾ ➤ ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಾಣಿ: ಅಗ್ನಿ ಅವಘಡ ➤ ಮನೆ ಸಂಪೂರ್ಣ ಬೆಂಕಿಗಾಹುತಿ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 19. ಮನೆಯೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ಮನೆ ಸಂಪೂರ್ಣ ಸುಟ್ಟುಹೋದ ಘಟನೆ ಮಾಣಿಯಲ್ಲಿ ನಡೆದಿದೆ. ಮಾಣಿ ಗ್ರಾಮದ ಕಾಪಿಕಾಡು ಸಮೀಪದ ಜನತಾ ಕಾಲೊನಿ ನಿವಾಸಿ ರಮಾ ಅಶೋಕ ಪೂಜಾರಿ ಎಂಬವರ ಮನೆ ಬೆಂಕಿಗಾಹುತಿಯಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೆಂಕಿಯನ್ನು ಗಮನಿಸಿದ ಪಕ್ಕದ ಮನೆಯವರು ನೀಡಿದ ಮಾಹಿತಿಯಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅಷ್ಟರಲ್ಲೇ ಮನೆ ಸಂಪೂರ್ಣ ಸುಟ್ಟುಕರಕಲಾಗಿತ್ತು. ಸ್ಥಳಕ್ಕೆ

ಮಾಣಿ: ಅಗ್ನಿ ಅವಘಡ ➤ ಮನೆ ಸಂಪೂರ್ಣ ಬೆಂಕಿಗಾಹುತಿ Read More »

ಕರ್ನಾಟಕ

ವಿಟ್ಲ: ಆಟೋರಿಕ್ಷಾ ಹಾಗೂ ಕಾರು ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 30. ರಿಕ್ಷಾ ಮತ್ತು ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಪ್ರಯಾಣಿಕರು ಗಾಯಗೊಂಡ ಘಟನೆ ಕೊಡಾಜೆ ಎಂಬಲ್ಲಿ ನಡೆದಿದೆ. ಮಾಣಿಯಿಂದ ಅನಂತಾಡಿಗೆ ತೆರಳುತ್ತಿದ್ದ ಅಟೋರಿಕ್ಷಾ ಹಾಗೂ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಆಲ್ಟೋ ಕಾರು ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಟ್ಲ: ಆಟೋರಿಕ್ಷಾ ಹಾಗೂ ಕಾರು ನಡುವೆ ಢಿಕ್ಕಿ Read More »

ಕರಾವಳಿ, ಕರ್ನಾಟಕ

ವಿಟ್ಲ: ಅಪರಿಚಿತ ಮೃತದೇಹದ ಗುರುತು ಪತ್ತೆ..!

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 21. ಗುಡ್ಡದಲ್ಲಿ ಪತ್ತೆಯಾಗಿದ್ದ ಅಪರಿಚಿತ ಕೊಳೆತ ಮೃತದೇಹದ ಗುರುತು ಪತ್ತೆಯಾಗಿದೆ. ಮೃತರನ್ನು ಪುಣಚ ಗ್ರಾಮದ ಕೆದುಮೂಲೆ ದಿ. ವೀರಪ್ಪ ನಾಯ್ಕ್ ಎಂಬವರ ಪುತ್ರ ಕಮಲಾಕ್ಷ ಎಂದು ಗುರುತಿಸಲಾಗಿದೆ. ಮನೆಯಿಂದ ಕೆಲಸಕ್ಕೆಂದು ತೆರಳುತ್ತಿದ್ದ ಕಮಲಾಕ್ಷ ರವರು ತುಂಬಾ ಸಮಯದವರೆಗೆ ಮನೆಗೆ ಮರಳಿ ಬರುತ್ತಿರಲಿಲ್ಲ. ಹೀಗೇ ಮಾಡುತ್ತಿದ್ದ ಇವರು ಕೆಲದಿನಗಳ ಹಿಂದೆ ಕೆಲಸಕ್ಕೆಂದು ತೆರಳಿ ಬಳಿಕ ಮನೆಗೆ ಹಿಂತಿರುಗಿ ಬರಲಿಲ್ಲ ಎಂದು ಮನೆಯವರು ಮಾಹಿತಿ ನೀಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಕುರಿತು

ವಿಟ್ಲ: ಅಪರಿಚಿತ ಮೃತದೇಹದ ಗುರುತು ಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top