well

ಬಾವಿಗೆ ಬಿದ್ದು ಕಾಡುಕೋಣ ಮೃತ್ಯು – ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 19. ಕಾಡುಕೋಣವೊಂದು ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ನರಿಮೊಗರು ಐಟಿಐ ಮೈದಾನದ ಪಕ್ಕದಲ್ಲಿ ಶನಿವಾರದಂದು ನಡೆದಿದೆ. ಪ್ರಕಾಶ್ ಎಂಬವರ ಜಾಗದಲ್ಲಿರುವ ಬಾವಿಯಲ್ಲಿ ಬೆಳಗ್ಗಿನ ಹೊತ್ತು ಕಾಡುಕೋಣವೊಂದು ಬಿದ್ದು ಮೃತಪಟ್ಟಿರುವ ಸ್ಥಿತಿಯಲ್ಲಿ ಕಂಡುಬಂದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯವರು ಕ್ರೇನ್ ಮುಖಾಂತರ ಕಾಡುಕೋಣವನ್ನು ಬಾವಿಯಿಂದ ಮೇಲಕೆತ್ತಿದ್ದಾರೆ. ಮೃತಪಟ್ಟಿರುವ ಕಾಡುಕೋಣಕ್ಕೆ ಅಂದಾಜು 4 ರಿಂದ 5 ವರ್ಷ ಪ್ರಾಯವಾಗಿರಬಹುದು ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆಯಲ್ಲಿ ಎಸಿಎಫ್ ಸುಬ್ಬಯ್ಯ ನಾಯ್ಕ, […]

ಬಾವಿಗೆ ಬಿದ್ದು ಕಾಡುಕೋಣ ಮೃತ್ಯು – ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ಇಚಿಲಂಪಾಡಿ: ಬಾವಿಗೆ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಆ.07. ತಾಲೂಕು ವ್ಯಾಪ್ತಿಯ ಇಚಿಲಂಪಾಡಿ ಪಾತಡ್ಕ ಎಂಬಲ್ಲಿ ಮಹಿಳೆಯೋರ್ವರು ಕಾಲುಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ. ಮೃತ ಮಹಿಳೆಯನ್ನು ಇಚಿಲಂಪಾಡಿ ಗ್ರಾಮದ ಪಾತಡ್ಕ ನಿವಾಸಿ ಮಹಾಬಲ ಪೂಜಾರಿ ಎಂಬವರ ಪತ್ನಿ ಹೇಮಲತಾ ಎಂದು ಗುರುತಿಸಲಾಗಿದೆ. ಇವರು ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದರೆಂದು ತಿಳಿದುಬಂದಿದೆ.

ಇಚಿಲಂಪಾಡಿ: ಬಾವಿಗೆ ಬಿದ್ದು ಮಹಿಳೆ ಮೃತ್ಯು Read More »

ಕರಾವಳಿ

ಪುತ್ತಿಗೆ: ಬಾವಿಯಲ್ಲಿ‌ ನವಜಾತ ಶಿಶುವಿನ ಶವ ಪತ್ತೆ ► ಭಾನುವಾರದಂದು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಅವಿವಾಹಿತ ಯುವತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.01. ನವಜಾತ ಶಿಶುವಿನ ಮೃತದೇಹ ಬಾವಿಯೊಂದರಲ್ಲಿ ಪತ್ತೆಯಾದ ಘಟನೆ ಇಲ್ಲಿನ ಪುತ್ತಿಗೆ ಗ್ರಾಮದ ನೆಲ್ಲಿಗುಡ್ಡೆ ನೀರಪಲ್ಕೆ ಎಂಬಲ್ಲಿ ಮಂಗಳವಾರದಂದು ಬೆಳಿಗ್ಗೆ ನಡೆದಿದೆ. ಪುತ್ತಿಗೆ ಗ್ರಾಮದ ಅವಿವಾಹಿತ ಯುವತಿಯೊಬ್ಬಳು ಭಾನುವಾರದಂದು ಇದೇ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಬಾವಿಗೆ ಹಾರಿರುವುದನ್ನು ತಿಳಿದ ಸ್ಥಳೀಯರು ಆಕೆಯನ್ನು ರಕ್ಷಣೆ ಮಾಡಿ‌ ಮಂಗಳೂರಿನ ಅಸ್ಪತ್ರೆಗೆ ದಾಖಲಿಸಿದ್ದರು. ಅಕೆ ಗರ್ಭಿಣಿಯಾಗಿದ್ದು ಇದೇ ಕಾರಣಕ್ಕಾಗಿ ಬಾವಿಗೆ ಹಾರಿ ಆತ್ಮಹತ್ಯೆ ಯತ್ನಿಸಿರಬಹುದೆಂದು‌ ಅಂದಾಜಿಸಲಾಗಿದೆ. ಬಾವಿಗೆ ಹಾರಿದ ಸಂದರ್ಭದಲ್ಲಿ ಗರ್ಭಪಾತವಾಗಿರಬಹುದೆಂದು ಅಂದಾಜಿಸಲಾಗಿದೆ.

ಪುತ್ತಿಗೆ: ಬಾವಿಯಲ್ಲಿ‌ ನವಜಾತ ಶಿಶುವಿನ ಶವ ಪತ್ತೆ ► ಭಾನುವಾರದಂದು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಅವಿವಾಹಿತ ಯುವತಿ Read More »

ಕರಾವಳಿ
Scroll to Top