Videos

ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಮಠದ ನಡುವಿನ ವಿವಾದದ ಹಿನ್ನೆಲೆ ► ಚೈತ್ರಾ ಕುಂದಾಪುರ ಮತ್ತು ಹಿಂಜಾವೇ ಮುಖಂಡರ ಮಧ್ಯೆ ನಡು ರಸ್ತೆಯಲ್ಲೇ ಹೊಡೆದಾಟ ► ಹಿಂಜಾವೇ ಮುಖಂಡ ಗುರುಪ್ರಸಾದ್ ಪಂಜರವರಿಗೆ ಗಂಭೀರ ಹಲ್ಲೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.24. ಕಳೆದ ಕೆಲವು ದಿನಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸರ್ಪಸಂಸ್ಕಾರ ವಿಚಾರದಲ್ಲಿ ಚರ್ಚೆಯನ್ನು ಹುಟ್ಟು ಹಾಕಿದ್ದ ತನ್ನ ಹೇಳಿಕೆಯ ಬಗ್ಗೆ ಪ್ರಶ್ನಿಸಲು ಕುಕ್ಕೇ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಚೈತ್ರಾ ಕುಂದಾಪುರ ಮತ್ತು ಸಂಗಡಿಗರು ಹಾಗೂ ವಿರೋಧಿ ತಂಡದ ಮಧ್ಯೆ ಹೊಡೆದಾಟ ಉಂಟಾದ ಪರಿಣಾಮ ಹಿಂಜಾವೇ ಸುಳ್ಯ ತಾಲೂಕು ಕಾರ್ಯದರ್ಶಿ ಗುರುಪ್ರಸಾದ್ ಪಂಜರವರು ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ.   ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ಸರ್ಪಸಂಸ್ಕಾರದ ಬಗ್ಗೆ ಚೈತ್ರಾ

ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಮಠದ ನಡುವಿನ ವಿವಾದದ ಹಿನ್ನೆಲೆ ► ಚೈತ್ರಾ ಕುಂದಾಪುರ ಮತ್ತು ಹಿಂಜಾವೇ ಮುಖಂಡರ ಮಧ್ಯೆ ನಡು ರಸ್ತೆಯಲ್ಲೇ ಹೊಡೆದಾಟ ► ಹಿಂಜಾವೇ ಮುಖಂಡ ಗುರುಪ್ರಸಾದ್ ಪಂಜರವರಿಗೆ ಗಂಭೀರ ಹಲ್ಲೆ Read More »

ಕರಾವಳಿ

ಕೇರಳ ನೆರೆ ಹಾವಳಿಗೆ ನಲುಗುವ ಬಗ್ಗೆ ಭವಿಷ್ಯ ನುಡಿದಿದ್ದ ಮಾನಸಿಕ ಅಸ್ವಸ್ಥ ► ನೆರೆಯನ್ನು ಎಚ್ಚರಿಸುವ ವ್ಯಂಗ್ಯ ಮಾತುಗಳು ಇದೀಗ ವೈರಲ್

(ನ್ಯೂಸ್ ಕಡಬ) newskadaba.com ಕೇರಳ, ಆ.19. ಭಾರೀ ಮಳೆ ಹಾಗೂ ನೆರೆಯಿಂದ ತತ್ತರಿಸಿರುವ ಕೇರಳದಲ್ಲಿ ತಿಂಗಳ ಹಿಂದೆ ಮಾನಸಿಕ ಅಸ್ವಸ್ಥ ರೀತಿಯಲ್ಲಿರುವ ವ್ಯಕ್ತಿಯೊಬ್ಬರು ನೆರೆಯನ್ನು ನೆನಪಿಸುವ ಮಾತೊಂದನ್ನು ಆಡಿದ್ದು, ಅದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಿರ್ಮಾಣ ಹಂತದ ಮನೆಯ ಮುಂಭಾಗದಲ್ಲಿ ನಿಂತು ಮಲಯಾಳಂ ಭಾಷೆಯಲ್ಲಿ ಮಾತನಾಡುವ ಆ ವ್ಯಕ್ತಿಯು ‘ಸಮಯವಿಲ್ಲ, ಯಾರಿಗೂ ಸಮಯವಿಲ್ಲ, ಎಲ್ಲರೂ ಬ್ಯುಸಿ ಆಗಿದ್ದಾರೆ. ದುಡ್ಡು ಮಾಡಿ ದೊಡ್ಡ ಬಂಗಲೆಗಳನ್ನು ಕಟ್ಟಿ ಅದರಲ್ಲಿ ದುಡ್ಡನ್ನು ಕೂಡಿಡುವುದರಲ್ಲಿ ಬ್ಯುಸಿ ಆಗಿದ್ದಾರೆ. ಆ ಬಂಗಲೆಗಳು ಒಡೆದು

ಕೇರಳ ನೆರೆ ಹಾವಳಿಗೆ ನಲುಗುವ ಬಗ್ಗೆ ಭವಿಷ್ಯ ನುಡಿದಿದ್ದ ಮಾನಸಿಕ ಅಸ್ವಸ್ಥ ► ನೆರೆಯನ್ನು ಎಚ್ಚರಿಸುವ ವ್ಯಂಗ್ಯ ಮಾತುಗಳು ಇದೀಗ ವೈರಲ್ Read More »

ಕರಾವಳಿ

ಮಹಾಮಳೆಗೆ ಮುಳುಗಿದ ಉದನೆ ತೂಗು ಸೇತುವೆ ► ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಜನಸಾಮಾನ್ಯರ ಪರದಾಟ

(ನ್ಯೂಸ್ ಕಡಬ) newskadaba.com ಕಡಬ, ಆ.09. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಉದನೆ ತೂಗು ಸೇತುವೆಯು ಗುಂಡ್ಯ ಕೆಂಪುಹೊಳೆಯ ನೆರೆ ನೀರಿನಿಂದ ಆವೃತವಾಗಿದ್ದು, ಜನ ಸಂಚಾರ ಸ್ಥಗಿತಗೊಂಡಿದೆ. ನೆರೆ ನೀರಿನ ಮಟ್ಟ ಏರಿಕೆಯಾಗಿದ್ದು, ಉದನೆ ಪೇಟೆಗೆ ನೀರು ನುಗ್ಗಿರುವುದರಿಂದ ಜನಜೀವನ ಅಸ್ತವ್ಯಸ್ತ ಗೊಂಡಿದೆ. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ, ನೇಲ್ಯಡ್ಕ ಹಾಗೂ ಶಿರಾಡಿಯಲ್ಲಿ ನೆರೆ ನೀರು ರಸ್ತೆಗೆ ಬಂದುದರಿಂದ ಹೆದ್ದಾರಿ ತಡೆಯುಂಟಾಗಿದೆ. ತೂಗು ಸೇತುವೆ ಮುಳುಗಡೆಯಿಂದಾಗಿ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಜನಸಾಮಾನ್ಯರು ಪರದಾಡುವಂತಾಗಿದೆ.

ಮಹಾಮಳೆಗೆ ಮುಳುಗಿದ ಉದನೆ ತೂಗು ಸೇತುವೆ ► ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಜನಸಾಮಾನ್ಯರ ಪರದಾಟ Read More »

ಕರಾವಳಿ

ಬಂಟ್ವಾಳ: ಹಾಡುಹಗಲೇ ತಲವಾರು ದಾಳಿ ► ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.11. ಪೂರ್ವ ದ್ವೇಷದ ಹಿನ್ನೆಲೆಯಲ್ಲಿ ಬಿಜೆಪಿ – ಕಾಂಗ್ರೆಸ್ ಕಾರ್ಯಕರ್ತರು ಹಾಡುಹಗಲೇ ಪರಸ್ಪರ ಹಲ್ಲೆ ನಡೆಸಿದ ಘಟನೆ ಬಿ.ಸಿ.ರೋಡ್ ನಲ್ಲಿ ಸೋಮವಾರದಂದು ನಡೆದಿದೆ. ತುಳು ಚಿತ್ರನಟ, ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಸುರೇಂದ್ರ ಬಂಟ್ವಾಳರ ತಂಡದಲ್ಲಿ ಗುರುತಿಕೊಂಡಿದ್ದ ಯುವಕನೋರ್ವನಿಗೆ ಬಿಜೆಪಿ ಕಾರ್ಯಕರ್ತರ ತಂಡವೊಂದು ಫೇಸ್‍ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಕಾರಣಕ್ಕೆ ಭಾನುವಾರದಂದು ಸೆಲೂನ್ ಗೆ ನುಗ್ಗಿ ಹಲ್ಲೆ ನಡೆಸಿತ್ತೆನ್ನಲಾಗಿದೆ. ಇದೇ ವೈಷಮ್ಯದಲ್ಲಿ ಸೋಮವಾರದಂದು ಬಿ.ಸಿ.ರೋಡಿನ ಬಡ್ಡಕಟ್ಟೆಯ ಹೊಟೇಲೊಂದಕ್ಕೆ ಊಟಕ್ಕೆಂದು ತೆರಳಿದ್ದ ಬಿಜೆಪಿ

ಬಂಟ್ವಾಳ: ಹಾಡುಹಗಲೇ ತಲವಾರು ದಾಳಿ ► ಇಬ್ಬರಿಗೆ ಗಾಯ Read More »

ಕರಾವಳಿ

ಹೆಬ್ರಿ: ಬ್ರೇಕ್ ವೈಫಲ್ಯಕ್ಕೀಡಾಗಿ ಚೆಕ್ ಪೋಸ್ಟ್ ಗೆ ನುಗ್ಗಿದ ಟೆಂಪೋ ಟ್ರಾವೆಲ್ಲರ್ ► ತಪ್ಪಿದ ಸಂಭಾವ್ಯ ಅನಾಹುತ

(ನ್ಯೂಸ್ ಕಡಬ) newskadaba.com ಕಾರ್ಕಳ, ಮೇ‌.01. ಬ್ರೇಕ್ ವೈಫಲ್ಯಕ್ಕೀಡಾದ ಟೆಂಪೋ ಟ್ರಾವೆಲ್ಲರೊಂದು ವಿಧಾನಸಭಾ ಚುನಾವಣಾ ದೃಷ್ಟಿಯಿಂದ ನಿರ್ಮಿಸಲಾದ ಚೆಕ್‌ಪೋಸ್ಟ್ ನಲ್ಲಿ ಬ್ಯಾರಿಕೇಡ್‌ಗಳನ್ನು ತಳ್ಳಿಕೊಂಡು ಮುನ್ನುಗ್ಗುತ್ತಿರುವ ಘಟನೆಯ ವೀಡಿಯೋ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚುನಾವಣೆಯ ಹಿನ್ನೆಲೆಯಲ್ಲಿ  ಸೋಮೇಶ್ವರದಲ್ಲಿ ಚೆಕ್‌ಪೋಸ್ಟ್ ನಿರ್ಮಿಸಲಾಗಿದ್ದು, ಸೋಮವಾರ ಸಂಜೆ ವೇಳೆಗೆ ಅಧಿಕಾರಿಗಳು ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ವೇಳೆ ಆಗುಂಬೆ ಘಾಟಿಯಿಂದ ಬರುತ್ತಿದ್ದ ಟೆಂಪೋ ಟ್ರಾವೆಲರೊಂದು ಬ್ರೇಕ್ ವೈಫಲ್ಯಕ್ಕೀಡಾಗಿ ವೇಗವಾಗಿ ಬಂದು ಚೆಕ್‌ಪೋಸ್ಟ್ ನಲ್ಲಿ ನಿಂತಿದ್ದ ವಾಹನಗಳ ಮಧ್ಯೆ ಬ್ಯಾರಿಕೇಡ್ ತಳ್ಳಿಕೊಂಡು ಮುಂದೆ ಸಾಗಿದೆ. ಇದರಿಂದಾಗಿ

ಹೆಬ್ರಿ: ಬ್ರೇಕ್ ವೈಫಲ್ಯಕ್ಕೀಡಾಗಿ ಚೆಕ್ ಪೋಸ್ಟ್ ಗೆ ನುಗ್ಗಿದ ಟೆಂಪೋ ಟ್ರಾವೆಲ್ಲರ್ ► ತಪ್ಪಿದ ಸಂಭಾವ್ಯ ಅನಾಹುತ Read More »

ಕರಾವಳಿ

ಪೆರ್ನೆ ಗ್ಯಾಸ್ ಟ್ಯಾಂಕರ್ ದುರಂತಕ್ಕೆ ಇಂದಿಗೆ ಐದು ವರ್ಷ ► ಬೆಂಕಿಯ ಕೆನ್ನಾಲಗೆಯಲ್ಲಿ ಸಜೀವ ದಹನವಾದ ಒಂಬತ್ತು ಮಂದಿಯ ನೆನಪನ್ನು ಮರುಕಳಿಸುತ್ತಾ…!

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ.09. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ‌ ಪೆರ್ನೆಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಒಂಬತ್ತು ಮಂದಿ ಸಜೀವ ದಹನವಾದ ದುರಂತ ನಡೆದು ಇಂದಿಗೆ ಐದು ವರ್ಷ ಸಂದಿದೆ. 2013 ರ ಎಪ್ರಿಲ್ 09 ಮಂಗಳವಾರದಂದು ಬೆಳಗ್ಗೆ ಅನಿಲ ತುಂಬಿದ ಟ್ಯಾಂಕರ್ ಆಡಿಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಪೆರ್ನೆಯ ಮೊದಲ ತಿರುವಿನಲ್ಲಿ ಮುಗುಚಿ ಬಿದ್ದಿತ್ತು. ಟ್ಯಾಂಕರ್ ನಲ್ಲಿದ್ದ ಗ್ಯಾಸ್ ಸೋರಿಕೆಯಾಗಿ ಕ್ಷಣಾರ್ಧದಲ್ಲಿ ದಟ್ಟ ಕಪ್ಪು ಹೊಗೆ

ಪೆರ್ನೆ ಗ್ಯಾಸ್ ಟ್ಯಾಂಕರ್ ದುರಂತಕ್ಕೆ ಇಂದಿಗೆ ಐದು ವರ್ಷ ► ಬೆಂಕಿಯ ಕೆನ್ನಾಲಗೆಯಲ್ಲಿ ಸಜೀವ ದಹನವಾದ ಒಂಬತ್ತು ಮಂದಿಯ ನೆನಪನ್ನು ಮರುಕಳಿಸುತ್ತಾ…! Read More »

ಕರಾವಳಿ

ಪುತ್ತೂರು: ಕೆಎಸ್ಸಾರ್ಟಿಸಿ ಬಸ್ – ಕಾರು ಢಿಕ್ಕಿ ► ಯುವ ವಕೀಲೆ ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಎ.01. ವ್ಯಾಗನರ್ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಯುವ ವಕೀಲೆ ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಸಂಪ್ಯದಲ್ಲಿ ಶನಿವಾರದಂದು ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಕಂಟ್ರಮಜಲು ನಿವಾಸಿ ಜಿನ್ನಪ್ಪ‌ ಗೌಡ ಎಂಬವರ ಪುತ್ರಿ ಮಂಗಳೂರಿನ ಯುವ ವಕೀಲೆ ಗಾಯತ್ರಿ (23) ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನಿಂದ ಕುಂಬ್ರ ಕಡೆಗೆ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಇವರಿದ್ದ

ಪುತ್ತೂರು: ಕೆಎಸ್ಸಾರ್ಟಿಸಿ ಬಸ್ – ಕಾರು ಢಿಕ್ಕಿ ► ಯುವ ವಕೀಲೆ ಮೃತ್ಯು, ಓರ್ವ ಗಂಭೀರ Read More »

ಕರಾವಳಿ

ಬೈಕುಗಳಿಗೆ 50 ರೂ., ಕಾರುಗಳಿಗೆ 200 ರೂ., ಇದು ಯಾವುದೋ ಟೋಲ್ ದುಡ್ಡಲ್ಲ ► ಪೆರಿಯಶಾಂತಿಯಲ್ಲಿ ಮರ ತೆರವಿನ ನೆಪದಲ್ಲಿ ಹಗಲು ದರೋಡೆಯ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.21. ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೆರಿಯಶಾಂತಿ ಎಂಬಲ್ಲಿ ರಸ್ತೆಯಲ್ಲಿ ವಾಹನಗಳನ್ನು ಅಡ್ಡಗಟ್ಟಿ ಯುವಕರ ತಂಡವೊಂದು ಹಣ ಸಂಗ್ರಹಿಸಿದ ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪೆರಿಯಶಾಂತಿ ಎಂಬಲ್ಲಿ ಸೋಮವಾರ ಸಂಜೆ ಸುರಿದ ಭಾರೀ ಗಾಳಿ ಮಳೆಯಿಂದಾಗಿ ಬೃಹತ್ ಮರವೊಂದು ರಸ್ತೆಗೆ ಅಡ್ಡವಾಗಿ ಮುರಿದು ಬಿದ್ದಿದ್ದು, ಈ ಮರವನ್ನು ತೆರವುಗೊಳಿಸಿದ ಕೆಲವು ಮುಸ್ಲಿಂ ಯುವಕರು, ಅದೇ ರಸ್ತೆಯಲ್ಲಿ ಬರುತ್ತಿದ್ದ ಅನೇಕ ವಾಹನ ಚಾಲಕರಿಂದ ಹೆಚ್ಚುವರಿ ಹಣ ಸಂಗ್ರಹಣೆ ಮಾಡಿದ್ದಾರೆ.

ಬೈಕುಗಳಿಗೆ 50 ರೂ., ಕಾರುಗಳಿಗೆ 200 ರೂ., ಇದು ಯಾವುದೋ ಟೋಲ್ ದುಡ್ಡಲ್ಲ ► ಪೆರಿಯಶಾಂತಿಯಲ್ಲಿ ಮರ ತೆರವಿನ ನೆಪದಲ್ಲಿ ಹಗಲು ದರೋಡೆಯ ವೀಡಿಯೋ ವೈರಲ್ Read More »

ಕರಾವಳಿ

ನಾವೇನೂ ನಾಟಕ ಆಡಲು ಬಂದಿಲ್ಲ: ಪೊಲೀಸರ ವಿರುದ್ಧ ಹೇಳಿಕೆ ನೀಡುವವರಿಗೆ ಎಚ್ಚರಿಕೆ ನೀಡಿದ ಎಸ್ಪಿ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜ.11. ‘ಹಾವಿನ ಜೊತೆ ಸರಸವಾಡುವ ಕೆಲಸವನ್ನು ಯಾರೂ ಮಾಡಬೇಡಿ. ಹಾವಿನ ತಲೆಯಲ್ಲಿ ಹಿಡಿದರೂ ಹಾವು ಕಚ್ಚುತ್ತದೆ. ಬಾಲದಲ್ಲಿ ಹಿಡಿದರೂ ಹಾವು ಕಚ್ಚುತ್ತದೆ’ ಎಂದು ಮೂಡಿಗೆರೆ ಕಾಲೇಜು ವಿದ್ಯಾರ್ಥಿನಿ ಧನ್ಯಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸ್ ಇಲಾಖೆಯ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುವವರಿಗೆ ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಅಣ್ಣಾಮಲೈ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕೆಲವು ಸಂಘಟನೆಯವರು ಪೊಲೀಸ್ ಇಲಾಖೆಯ ಬಗ್ಗೆ ಬಾಯಿಗೆ ಬಂದಂತೆ ಮಾತನಾಡ್ತಿದ್ದಾರೆ. ನಾವು ಖಾಕಿ ಬಟ್ಟೆ ಹಾಕಿ ಇಲ್ಲಿಗೆ ನಾಟಕ

ನಾವೇನೂ ನಾಟಕ ಆಡಲು ಬಂದಿಲ್ಲ: ಪೊಲೀಸರ ವಿರುದ್ಧ ಹೇಳಿಕೆ ನೀಡುವವರಿಗೆ ಎಚ್ಚರಿಕೆ ನೀಡಿದ ಎಸ್ಪಿ ಅಣ್ಣಾಮಲೈ Read More »

ಕರಾವಳಿ
Scroll to Top