Videos

ಭಾರೀ ಪ್ರವಾಹದಿಂದಾಗಿ ನೀರಿನಲ್ಲಿ ಕೊಚ್ಚಿಹೋದ ಶಾಲಾ ಬಸ್..!! ➤ ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 19. ಶಾಲಾ ಮಕ್ಕಳನ್ನು ಹತ್ತಿಸಿಕೊಳ್ಳಲು ಹೋಗುತ್ತಿದ್ದ ಶಾಲಾ ಬಸ್ಸೊಂದು ನೀರಿನಲ್ಲಿ ಕೊಚ್ಚಿಹೋದ ಘಟನೆ ಉತ್ತರಾಖಂಡದ ಚಂಪಾವತ್ ನಲ್ಲಿ ನಡೆದಿದೆ. ಘಟನೆಯಲ್ಲಿ ಶಾಲಾ ಬಸ್ ಚಾಲಕ ಕಮಲೇಶ್ ಕರ್ಕಿ ಹಾಗೂ ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಅದೃಷ್ಟವಶಾತ್ ಬಸ್ ನಲ್ಲಿ ಮಕ್ಕಳಿರದೇ ಇದ್ದುದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ನೀರಿನ ಹರಿವು ಹೆಚ್ಚಿರುವುದರಿಂದ ಚಾಲಕನಿಗೆ ಸ್ವಲ್ಪ ಸಮಯ ಕಾಯಲು ಹೇಳಲಾಗಿತ್ತಾದರೂ, ಆತ ನೀರು ತುಂಬಿ ಹರಿಯುತ್ತಿದ್ದ […]

ಭಾರೀ ಪ್ರವಾಹದಿಂದಾಗಿ ನೀರಿನಲ್ಲಿ ಕೊಚ್ಚಿಹೋದ ಶಾಲಾ ಬಸ್..!! ➤ ಇಬ್ಬರು ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನರ್ಮದಾ ನದಿಗೆ ಬಿದ್ದ ಬಸ್ ➤ 12 ಮಂದಿ ದುರ್ಮರಣ

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಜು. 18. ಸೇತುವೆಯ ಮೇಲಿಂದ ನರ್ಮದಾ ನದಿಗೆ ಮಹಾರಾಷ್ಟ್ರದ ಬಸ್ ವೊಂದು ಉರುಳಿ ಬಿದ್ದು 12 ಪ್ರಯಾಣಿಕರು ಮೃತಪಟ್ಟ ಘಟನೆ ಮಧ್ಯ ಪ್ರದೇಶದ ಧರ್ ಜಿಲ್ಲೆಯಲ್ಲಿ ಇಂದು ಬೆಳಂಬೆಳಗ್ಗೆ ನಡೆದಿದೆ. ಇಂದೋರ್’ನಿಂದ ಪುಣೆಗೆ ತೆರಳುತ್ತಿದ್ದ ಬಸ್ ಖಲ್ಘಾಟ್ ಸಂಜಯ್ ಸೇತುವೆಯಿಂದ ನರ್ಮದಾ ನದಿಗೆ ಉರುಳಿ ಬಿದ್ದಿದೆ. ಪರಿಣಾಮ 12 ಮಂದಿ ಮೃತಪಟ್ಟಿದ್ದು, 15 ಮಂದಿಯನ್ನು ರಕ್ಷಿಸಲಾಗಿದೆ ಎಂದು ಮಧ್ಯ ಪ್ರದೇಶದ ಸಚಿವ ನರೋತ್ತಮ್ ಮಿಶ್ರಾ ತಿಳಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ.

ನರ್ಮದಾ ನದಿಗೆ ಬಿದ್ದ ಬಸ್ ➤ 12 ಮಂದಿ ದುರ್ಮರಣ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ➤ ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜು.06. ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಸೆಲೆರಿಯೋ ಕಾರೊಂದು ಪಲ್ಟಿಯಾದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಹಳೇಸ್ಟೇಷನ್ ಎಂಬಲ್ಲಿ ಬುಧವಾರದಂದು ನಡೆದಿದೆ. ಗಾಯಾಳುಗಳನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.    

ಕಡಬ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ➤ ಇಬ್ಬರು ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಭಾರೀ ಮಳೆ- ಮರವೂರು ಸೇತುವೆಯ ಬಳಿ ರಸ್ತೆ ಬಿರುಕು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 30. ಮುಂಜಾನೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಮರವೂರು ಸೇತುವೆಯ ಬಳಿ ರಸ್ತೆಯು ಬಿರುಕು ಬಿಟ್ಟಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಕಾಧಿಕಾರಿ, ರಸ್ತೆ ಪರಿಶೀಲನೆಗೆ ಪಿಡಬ್ಲ್ಯುಡಿ ಕಾರ್ಯನಿರ್ವಾಹಕ ಇಂಜಿನಿಯರ್ ಅವರನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಈಗಾಗಲೇ ದ.ಕ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಶಿಕ್ಷಣ ಇಲಾಖಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಎಚ್ಚರ ವಹಿಸುವಂತೆ ಸೂಚಿಸಿದ್ದಾರೆ. ಮಳೆ ಹೀಗೇ ಮುಂದುವರಿದರೆ ಶುಕ್ರವಾರ ಬೆಳಗ್ಗಿನ ಪರಿಸ್ಥಿತಿಯನ್ನು ಅವಲೋಕಿಸಿ ಶಾಲೆಗಳಿಗೆ

ಭಾರೀ ಮಳೆ- ಮರವೂರು ಸೇತುವೆಯ ಬಳಿ ರಸ್ತೆ ಬಿರುಕು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸವಾರನ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿದ ಬೈಕ್..!! ➤ ಯುವಕ ಪಾರು

(ನ್ಯೂಸ್ ಕಡಬ) newskadaba.com ಕೇರಳ, ಜೂ. 04. ಬೈಕ್ ಸವಾರನೋರ್ವ ಅತಿ ವೇಗವಾಗಿ ಬೈಕ್ ಚಲಾಯಿಸಿದ್ದ ಪರಿಣಾಮ ನಿಯಂತ್ರಣ ತಪ್ಪಿದ ಬೈಕ್ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿದ ಘಟನೆ ಕೇರಳದ ಇಡುಕಿಯಲ್ಲಿ ಸಂಭವಿಸಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೈಕ್ ಸವಾರ ವಿಷ್ಣುಪ್ರಸಾದ್ ದೊಡ್ಡ ಅನಾಹುತದಿಂದ ಅದೃಷ್ಟವಶಾತ್ ಪಾರಾಗಿದ್ದಾರೆ. ಈತ ಬೈಕ್ ನ್ನು ಅತ್ಯಂತ ವೇಗವಾಗಿ ಚಲಾಯಿಸಿಕೊಂಡು ಬಂದಿದ್ದು, ಈ ಸಂದರ್ಭ ನಿಯಂತ್ರಣ ತಪ್ಪಿದ ಬೈಕ್ ಮೂರು ಪಲ್ಟಿ ಹೊಡೆದು

ಸವಾರನ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿದ ಬೈಕ್..!! ➤ ಯುವಕ ಪಾರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ವಿದ್ಯುತ್ ತಂತಿಯಿಂದ ಬಿದ್ದ ಬೆಂಕಿ ಕಿಡಿ ➤ ಸರಕಾರಿ ಆಸ್ಪತ್ರೆಯ ಹಿಂಭಾಗದ ಗುಡ್ಡೆಗೆ ಬೆಂಕಿ

(ನ್ಯೂಸ್ ಕಡಬ) newskadaba.com ಕಡಬ, ಮಾ.03. ವಿದ್ಯುತ್ ಶಾರ್ಕ್ ಸರ್ಕ್ಯೂಟ್ ನಿಂದಾಗಿ ಒಣ ಹುಲ್ಲಿಗೆ ಬೆಂಕಿ ಬಿದ್ದ ಪರಿಣಾಮ ಕಡಬ ಸಮುದಾಯ ಆರೋಗ್ಯ ಕೇಂದ್ರದ ಹಿಂಭಾಗದ ಗುಡ್ಡೆ ಹೊತ್ತಿ‌ ಉರಿದ ಘಟನೆ ಗುರುವಾರ ಅಪರಾಹ್ನ ನಡೆದಿದೆ. ಆಸ್ಪತ್ರೆಯ ಹಿಂಭಾಗದಲ್ಲಿ ಒಣ ಹುಲ್ಲು ಇದ್ದುದರಿಂದ ವಿದ್ಯುತ್ ತಂತಿಯಲ್ಲಿ ಕಾಣಿಸಿಕೊಂಡ ಬೆಂಕಿಯು ಏಕಾಏಕಿ ಪಕ್ಕದಲ್ಲೆಲ್ಲಾ ಹಬ್ಬಿದೆ. ತಕ್ಷಣವೇ ಊರವರು ಸೇರಿಕೊಂಡು ಬೆಂಕಿ ನಂದಿಸಿದ್ದರಿಂದಾಗಿ ಅಪಾಯ ತಪ್ಪಿದಂತಾಗಿದೆ.  

ಕಡಬ: ವಿದ್ಯುತ್ ತಂತಿಯಿಂದ ಬಿದ್ದ ಬೆಂಕಿ ಕಿಡಿ ➤ ಸರಕಾರಿ ಆಸ್ಪತ್ರೆಯ ಹಿಂಭಾಗದ ಗುಡ್ಡೆಗೆ ಬೆಂಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಬೆಂಕಿ..! ➤ ಕೆಲಸಗಾರನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಅರಂತೋಡು, ಮಾ. 03. ಅರಂತೋಡು ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಸಮೀಪ ತೆಕ್ಕಿಲ್ ಸಮುದಾಯ ಭವನ ಮುಂಭಾಗದಲ್ಲಿರುವ ವಿದ್ಯುತ್ ಟ್ರಾನ್ಸ್‌‌ ಫೋರ್ಟ್ ಕಂಬದಿಂದ ಶಾರ್ಟ್ ಸರ್ಕ್ಯೂಟ್‌ ಉಂಟಾಗಿ ಬೆಂಕಿ ಅವರಿಸಿದ್ದು, ಸಮುದಾಯದ ಕೆಲಸಗಾರನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ತೆಕ್ಕಿಲ್ ಪ್ರತಿಷ್ಠಾನ ಕಾರ್ಯದರ್ಶಿ ಅಶ್ರಫ್ ಗುಂಡಿ, ಹೆಚ್.ಪಿ.ಗ್ಯಾಸ್ ಕಚೇರಿ ಮ್ಯಾನೇಜರ್ ಧನುರಾಜ್, ಸಮುದಾಯ ಭವನ ಮೇಲ್ವಿಚಾರಕ ಲತೀಫ್, ಆಶಿಕ್ ಕುಕ್ಕುಂಬಳ, ಉಮ್ಮರ್ ಎ ಹಾಗೂ ತಾಜುದ್ದೀನ್ ಅರಂತೋಡು ವಿಷಯ ತಿಳಿದ ತಕ್ಷಣ

ಸುಳ್ಯ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಬೆಂಕಿ..! ➤ ಕೆಲಸಗಾರನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ: ಗುಡ್ಡ ಬೆಂಕಿಗಾಹುತಿ ➤ ಊರವರಿಂದ ಬೆಂಕಿ ನಂದಿಸಲು ಹರಸಾಹಸ – ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮಾ. 02. ಇಲ್ಲಿನ ತಡಗಜೆ ಎಂಬಲ್ಲಿ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಹೊತ್ತಿ ಉರಿದ ಘಟನೆ ಬುಧವಾರದಂದು ನಡೆದಿದೆ. ಬೆಳ್ಳಾರೆ ಬಸ್ ನಿಲ್ದಾಣದ ಹಿಂಭಾಗದ ಗುಡ್ಡದಲ್ಲಿ ಬುಧವಾರ ಅಪರಾಹ್ನ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಸಂಪೂರ್ಣವಾಗಿ ವ್ಯಾಪಿಸಿದೆ. ಸ್ಥಳೀಯರು ಹರಸಾಹಸಪಟ್ಟು ಬೆಂಕಿಯನ್ನು ನಂದಿಸಲು ಯತ್ನಿಸಿದರಾದರೂ ಹತೋಟಿಗೆ ಬಂದಿರಲಿಲ್ಲ. ಕೊನೆಗೆ ಸುಳ್ಯದಿಂದ ಅಗ್ನಿ ಶಾಮಕದಳದವರು ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ಳಾರೆ: ಗುಡ್ಡ ಬೆಂಕಿಗಾಹುತಿ ➤ ಊರವರಿಂದ ಬೆಂಕಿ ನಂದಿಸಲು ಹರಸಾಹಸ – ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಾಡುಹಗಲೇ ಮಹಿಳೆಯ ಬ್ಯಾಗ್ ಕಳವಿಗೆ ವಿಫಲ ಯತ್ನ ➤ ಪ್ರತಿರೋಧದ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.12. ಕಾರಿನಲ್ಲಿ ಬಂದ ಅಪರಿಚಿತರ ತಂಡವೊಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಬ್ಯಾಗ್ ಕಳವಿಗೆ ಯತ್ನಿಸಿದ ಘಟನೆ ಬೆಂದೂರ್ವೆಲ್ ಸೈಂಟ್ ಆಗ್ನೇಸ್ ಕಾಲೇಜಿನ ಮುಂಭಾಗದಲ್ಲಿ ಭಾನುವಾರದಂದು ನಡೆದಿದೆ. ಮಹಿಳೆಯೊಬ್ಬರು ಮುಖ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ನಂಬರ್ ಪ್ಲೇಟ್ ಇಲ್ಲದ ರಿಟ್ಝ್ ಕಾರಿನಲ್ಲಿ ಬಂದ ಯುವಕರ ತಂಡದಲ್ಲಿದ್ದ ಓರ್ವ ಕಾರಿನಿಂದ ಇಳಿದು ಮಹಿಳೆಯ ಬ್ಯಾಗ್ ಕಿತ್ತುಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ಪ್ರತಿರೋಧ ವ್ಯಕ್ತಪಡಿಸಿದ್ದು ಕೂಗಿಕೊಂಡಿದ್ದಾರೆ. ಆ ವೇಳೆ ಅಲ್ಲಿದ್ದ ಸಾರ್ವಜನಿಕರು

ಹಾಡುಹಗಲೇ ಮಹಿಳೆಯ ಬ್ಯಾಗ್ ಕಳವಿಗೆ ವಿಫಲ ಯತ್ನ ➤ ಪ್ರತಿರೋಧದ ವೀಡಿಯೋ ವೈರಲ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top